ಮಾರುತಿ ಸುಜುಕಿ ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್ ಇನ್ನಿಲ್ಲ
Team Udayavani, Jun 26, 2022, 11:13 PM IST
ಹೊಸದಿಲ್ಲಿ: ಮಾರುತಿ ಉದ್ಯೋಗ್ ಲಿ. (ಈಗ ಮಾರುತಿ ಸುಜುಕಿ) ಸಂಸ್ಥೆಯ ಆಡಳಿತ ನಿರ್ದೇಶಕರಾಗಿದ್ದ ಡಾ| ವೆಂಕಟರಾಮನ್ ಕೃಷ್ಣಮೂರ್ತಿ ರವಿವಾರ ನಿಧನ ಹೊಂದಿದರು.
ಅವರಿಗೆ 97 ವರ್ಷ ವಯಸ್ಸಾಗಿತ್ತು. ಸೋಮವಾರ ಅವರ ಅಂತ್ಯಕ್ರಿಯೆ ನಡೆಯಲಿದೆ.
ಮಾರುತಿ ಸಂಸ್ಥೆಯಲ್ಲಿ ಡಾ| ವೆಂಕಟರಾಮನ್ ಅವರು 1985ರಿಂದ 1990ರ ವರೆಗೆ ಎಂಡಿ ಆಗಿದ್ದರು.
ತಮಿಳುನಾಡಿನಲ್ಲಿ ಜನಿಸಿದ್ದ ಅವರು “ಭಾರತದಲ್ಲಿ ಸಾರ್ವಜನಿಕ ರಂಗದ ಉದ್ದಿಮೆಗಳ ಪಿತಾಮಹ’ ಎಂಬ ಖ್ಯಾತಿಗೆ ಪಾತ್ರರಾಗಿದ್ದರು, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ಪಡೆದಿದ್ದರು.
ಭಾರತ್ ಹೆವಿ ಎಲೆಕ್ಟ್ರಾನಿಕ್ಸ್ ಲಿ. ಸೈಲ್ ಮತ್ತು ಗೈಲ್ ಸಂಸ್ಥೆಗಳಲ್ಲಿಯೂ ಅವರು ಪ್ರಾಮುಖ್ಯ ಹುದ್ದೆಗಳನ್ನು ನಿಭಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ