ವರ್ಷಾಂತ್ಯದಿಂದ ವಿದೇಶಗಳಿಗೆ ಲಸಿಕೆ ರಫ್ತು; ಕೇಂದ್ರ ಸರ್ಕಾರದ ಘೋಷಣೆ
Team Udayavani, Oct 25, 2021, 10:15 PM IST
ನವದೆಹಲಿ: ವರ್ಷಾಂತ್ಯದಿಂದ ಇತರ ದೇಶಗಳಿಗೆ ಕೋವಿಡ್ ಲಸಿಕೆ ರಫ್ತು ಮಾಡಲಾಗುತ್ತದೆ. ಆದರೆ, ದೇಶದಲ್ಲಿ ಎಲ್ಲರಿಗೂ ಲಸಿಕೆ ಹಾಕುವ ಅಗತ್ಯವನ್ನು ಗಮನದಲ್ಲಿ ಇರಿಸಿಕೊಂಡು ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.
ಈ ವರ್ಷದ ಏಪ್ರಿಲ್ನಿಂದ ಇತರ ದೇಶಗಳಿಗೆ ಲಸಿಕೆ ರಫ್ತು ಮಾಡುವುದನ್ನು ಸ್ಥಗಿತಗೊಳಿಸಿತ್ತು. ಸದ್ಯ 18 ವರ್ಷದಿಂದ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದು ಕೇಂದ್ರ ಆದ್ಯತೆಯಾಗಿದೆ ಎಂದು ಆ ಅಧಿಕಾರಿ ತಿಳಿಸಿದ್ದಾರೆ.
ಸಕ್ರಿಯ ಕೇಸು ಇಳಿಕೆ:
ದೇಶದಲ್ಲಿ ಭಾನುವಾರದಿಂದ ಸೋಮವಾರದ ಅವಧಿಯಲ್ಲಿ 14,306 ಹೊಸ ಸೋಂಕು ಪ್ರಕರಣ ದೃಢಪಟ್ಟಿದೆ. 443 ಮಂದಿ ಸೋಂಕಿನಿಂದಾಗಿ ಅಸುನೀಗಿದ್ದಾರೆ. ಹೀಗಾಗಿ, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,54,712 ಮಂದಿ ಅಸುನೀಗಿದ್ದಾರೆ. ಕೇರಳದಲ್ಲಿ 24 ಗಂಟೆಗಳಲ್ಲಿ 71 ಮಂದಿ ಅಸುನೀಗಿದ್ದಾರೆ ಮತ್ತು ಈ ಹಿಂದೆ ಅಸುನೀಗಿದ್ದ 363 ಮಂದಿಯ ವಿವರವನ್ನೂ ಪರಿಷ್ಕರಿಸಿದೆ. ಸಕ್ರಿಯ ಸೋಂಕು ಸಂಖ್ಯೆ 1,67,695ಕ್ಕೆ ಇಳಿಕೆಯಾಗಿದೆ.
ಇದನ್ನೂ ಓದಿ:ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್
ಉ.ಪ್ರ.ಕ್ಕೆ ತಂಡ:
ಝಿಕಾ ವೈರಸ್ ಪತ್ತೆಯಾಗಿರುವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಗೆ ಕೇಂದ್ರ ಸರ್ಕಾರ ಹಲವು ಕ್ಷೇತ್ರಗಳ ತಜ್ಞರು ಇರುವ ತಂಡವನ್ನು ಕಳುಹಿಸಿಕೊಟ್ಟಿದೆ. ಭಾನುವಾರ 57 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್ ಟಿಆರ್ – ಪ್ರಶಾಂತ್ ನೀಲ್ ಸಿನಿಮಾ
Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ