ಕಿಲ್ಲರ್‌ ಮಲೇರಿಯಾ ತಡೆಗೆ ಲಸಿಕೆ ಸಿದ್ಧ!


Team Udayavani, Apr 25, 2019, 6:00 AM IST

35

ನವದೆಹಲಿ: ಭಾರತದಲ್ಲಿ ಪ್ರತಿ ವರ್ಷ ಲಕ್ಷಾಂತರ ಮಕ್ಕಳು ಹಾಗೂ ವಯಸ್ಕರು ಕಿಲ್ಲರ್‌ ಮಲೇರಿಯಾಗೆ ತುತ್ತಾಗುತ್ತಿರುವ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ. ಮಲೇರಿಯಾ ತಡೆಗೆ ಇದೇ ಮೊದಲ ಬಾರಿಗೆ ಆಫ್ರಿಕಾದ ಮಲಾವಿ ದೇಶದಲ್ಲಿ ಲಸಿಕೆಯನ್ನು ಪರಿಚಯಿಸಲಾಗಿದೆ. ಕೆಲವೇ ದಿನಗಳಲ್ಲಿ ಈ ಲಸಿಕೆ ಘಾನಾ ಹಾಗೂ ಕೀನ್ಯಾದಲ್ಲೂ ಅದನ್ನು ಪರಿಚಯಿಸಲಾಗುತ್ತಿದೆ.

ಆರ್‌ಟಿಎಸ್‌, ಎಸ್‌ (RTS,S) ಎಂದು ಕರೆಯಲಾಗಿರುವ ಈ ಲಸಿಕೆಯನ್ನು 2ಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ನೀಡಲಾಗುತ್ತದೆ. ವಿಶ್ವಸಂಸ್ಥೆ ಈ ಕ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದೆ. ಇದೊಂದು ಪ್ರಾಯೋಗಿಕ ಯೋಜನೆಯಾಗಿದೆ. ಸುಮಾರು 30 ವರ್ಷಗಳವರೆಗೆ ಈ ಬಗ್ಗೆ ಸಂಶೋಧನೆ ನಡೆಸಲಾಗಿದೆ.

ಲಸಿಕೆಯೊಂದೇ ಸಾಲದು!: ಈ ಲಸಿಕೆ ಶೇ. 100ರಷ್ಟು ರಕ್ಷಣೆ ನೀಡುವುದಿಲ್ಲ. ಹೀಗಾಗಿ ಈಗಾಗಲೇ ನಾವು ಕೈಗೊಳ್ಳುತ್ತಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಈ ಲಸಿಕೆ ಹಾಕಿದರೂ ಕೈಗೊಳ್ಳಲೇಬೇಕು. ಯಾಕೆಂದರೆ, ಈಗಾಗಲೇ ನಡೆಸಲಾಗಿರುವ ಅಧ್ಯಯನಗಳ ಪೈಕಿ 10 ಪ್ರಕರಣಗಳಲ್ಲಿ ನಾಲ್ವರಿಗೆ ಮಾತ್ರ ರೋಗ ಬರದಂತೆ ಈ ಆರ್‌ಟಿಎಸ್‌,ಎಸ್‌ ಲಸಿಕೆ ತಡೆದಿದ್ದರೆ, 10 ಗಂಭೀರ ಪ್ರಕರಣಗಳ ಪೈಕಿ 3 ಮಕ್ಕಳಲ್ಲಿ ರೋಗವನ್ನು ತಡೆದಿದೆ.

ವಿಶ್ವಸಂಸ್ಥೆಯ ನೆರವು: ಈ ಯೋಜನೆಯನ್ನು ವಿಶ್ವಸಂಸ್ಥೆಯ ಸಹಭಾಗಿತ್ವದಲ್ಲಿ ನಡೆಸಲಾಗುತ್ತಿದೆ. ಘಾನಾ, ಕೀನ್ಯಾ ಹಾಗೂ ಮಾಲಾವಿಯಲ್ಲಿ ಈ ಪ್ರಯತ್ನ ನಡೆಸುತ್ತಿದ್ದು, ಇದಕ್ಕೆ ಸರ್ಕಾರೇತರ ಸಂಸ್ಥೆ ಪಾಥ್‌, ಲಸಿಕೆ ತಯಾರಿಸಿದ ಸಂಸ್ಥೆ ಜಿಎಸ್‌ಕೆ ಹಾಗೂ ಇತರ ಸಂಘ ಸಂಸ್ಥೆಗಳೂ ಕೈಜೋಡಿಸಿವೆ. ಜಿಎಸ್‌ಕೆ ಸಂಸ್ಥೆಯು ಈ ಯೋಜನೆಗಾಗಿ 1 ಕೋಟಿ ಲಸಿಕೆಯನ್ನು ಒದಗಿಸಿದೆ.

4 ಡೋಸ್‌ನಲ್ಲಿ ಪರಿಹಾರ: ಮೂರೂ ದೇಶಗಳಲ್ಲಿ ಒಟ್ಟು 3.60 ಲಕ್ಷ ಮಕ್ಕಳಿಗೆ ಲಸಿಕೆಯನ್ನು ಒದಗಿಸಲು ನಿರ್ಧರಿಸಲಾಗಿದೆ.ಮಕ್ಕಳಿಗೆ ನಾಲ್ಕು ಡೋಸ್‌ಗಳನ್ನು ಸದ್ಯಕ್ಕೆ ನೀಡಲಾಗುತ್ತದೆ. 5 ರಿಂದ 9 ತಿಂಗಳಿಗೆ ಮೊದಲನೇ ಡೋಸ್‌ ನೀಡಿದರೆ ಕೊನೆಯ ಡೋಸ್‌ ಅನ್ನು ಎರಡನೇ ವರ್ಷ ಪೂರೈಸುವ ವೇಳೆಗೆ ನೀಡಲಾಗುತ್ತದೆ.

ಭಾರತಕ್ಕೂ ಬರುತ್ತಾ?: ಮಲೇರಿಯಾ ಲಸಿಕೆಯನ್ನು ಭಾರತದಲ್ಲಿ ಪರಿಚಯಿಸುವ ಸಾಧ್ಯತೆ ಸದ್ಯಕ್ಕಿಲ್ಲ. ಮೂರು ದೇಶಗಳಲ್ಲೂ ಈ ಪ್ರಯೋಗ ಯಶಸ್ವಿಯಾದರೆ ಹಾಗೂ ಇದರಿಂದಾಗಿ ಮಲೇರಿಯಾ ಪ್ರಕರಣಗಳಲ್ಲಿ ಗಮನಾರ್ಹ ಇಳಿಕೆಯಾದರೆ ವಿಶ್ವಸಂಸ್ಥೆಯು ಇದನ್ನು ಇತರ ದೇಶಗಳಿಗೂ ಶಿಫಾರಸು ಮಾಡಬಹುದು. ಅಲ್ಲಿಯವರೆಗೆ ಇದರ ಪ್ರಯೋಗ ಭಾರತದಲ್ಲಿ ನಡೆಯುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ಭಾರತದಲ್ಲಿ ಮಲೇರಿಯಾ

3,99,134
10.90ಲಕ್ಷ
2018ರಲ್ಲಿ ಪತ್ತೆಯಾದ ಪ್ರಕರಣಗಳು
85-ಅಸುನೀಗಿದವರು
2016ರಲ್ಲಿ ಪತ್ತೆಯಾದ ಪ್ರಕರಣಗಳು
331-ಅಸುನೀಗಿದವರು

ಟಾಪ್ ನ್ಯೂಸ್

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.