ಸಂಸತ್ತಿನಲ್ಲಿ ವಾಜಪೇಯಿ ಭಾವಚಿತ್ರ ಅನಾವರಣ
Team Udayavani, Feb 13, 2019, 12:30 AM IST
ಹೊಸದಿಲ್ಲಿ: ಸಂಸತ್ತಿನಲ್ಲಿ ಮಂಗಳವಾರ ಮಾಜಿ ಪ್ರಧಾನಿ ದಿ| ವಾಜಪೇಯಿಯವರ ಭಾವಚಿತ್ರದ ಕಲಾಕೃತಿಯನ್ನು ಅನಾವರಣಗೊಳಿಸಲಾಯಿತು. ಸರಳ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭಾವಚಿತ್ರ ಅನಾವರಣ ಗೊಳಿಸಿದರು. ಇದೇ ವೇಳೆ, ಕಲಾಕೃತಿಯನ್ನು ರಚಿಸಿದ ಕಲಾವಿದ ಕೃಷ್ಣ ಕನ್ಹಾಯ್ ಅವರನ್ನು ರಾಷ್ಟ್ರಪತಿ ಸಮ್ಮಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ, “ವಾಜಪೇಯಿ ಎಂದರೆ ಮೌಲ್ಯಯುತ ರಾಜಕೀಯದ ಪಾಠಶಾಲೆಯಿದ್ದಂತೆ. ಎಲ್ಲರೂ ಅವರ ವಾಕ್ ಚಾತುರ್ಯವನ್ನು ಹೆಚ್ಚಾಗಿ ಜ್ಞಾಪಿಸಿಕೊಳ್ಳುತ್ತಾರೆ. ಆದರೆ, ನನ್ನ ಪ್ರಕಾರ ಅವರ ಮಾತುಗಳಿಗಿಂತ ಅವರ ಮೌನವೇ ಹೆಚ್ಚು ಶಕ್ತಿಶಾಲಿಯಾಗಿತ್ತು. ಅವರು ಮೌನದಲ್ಲಿದ್ದರೂ ಅದರಲ್ಲೊಂದು ಸಂದೇಶವಿರುತ್ತಿತ್ತು’ ಎಂದರು.
ತಮ್ಮ ಮಾತು ಮುಂದುವರಿಸಿ, “ವಾಜಪೇಯಿ ಪ್ರಧಾನಿಯಾಗಿದ್ದಾಗ ವಿರೋಧ ಪಕ್ಷವಿತ್ತು. ಆದರೆ, ಅವರ ವೈಯಕ್ತಿಕ ವಿರೋಧಿಗಳಾರೂ ಇರಲಿಲ್ಲ. ಅವರ ಜೀವನದಿಂದ ಇಂದಿನ ಪೀಳಿಗೆಯ ರಾಜಕಾರಣಿಗಳು ಕಲಿಯುವುದು ಸಾಕಷ್ಟಿದೆ’ ಎಂದರು. ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿಗಳಾದ ಎಚ್.ಡಿ. ದೇವೇಗೌಡ, ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಬಿಜೆಪಿ ಹಿರಿಯ ನಾಯಕ ಆಡ್ವಾಣಿ ಸಹಿತ ಆಡಳಿತಾರೂಢ ಹಾಗೂ ವಿಪಕ್ಷಗಳ ಗಣ್ಯರು ಪಾಲ್ಗೊಂಡಿದ್ದರು.
ಸಂಸತ್ ಭವನದ ಸೆಂಟ್ರಲ್ ಹಾಲ್ನಲ್ಲಿ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಭಾವಚಿತ್ರವನ್ನು ಮಂಗಳವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನಾವರಣ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
MUST WATCH
ಹೊಸ ಸೇರ್ಪಡೆ
Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್ ಬಿಜೆಪಿಗೆ
Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ
Kalaburagi; ಶೋಕಿಗಾಗಿ ನಕಲಿ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು
ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!