ನ.10ರಂದು ಚಾಲನೆ; ಮೈಸೂರು-ಬೆಂಗಳೂರಿಗೂ ವಂದೇ ಭಾರತ್ ಎಕ್ಸ್ಪ್ರೆಸ್
Team Udayavani, Oct 15, 2022, 7:15 AM IST
ನವದೆಹಲಿ/ಮೈಸೂರು: ಈಗಾಗಲೇ ಉತ್ತರ ಭಾರತದಲ್ಲಿ ಓಡುತ್ತಿರುವ ವಂದೇಭಾರತ್ ಎಕ್ಸ್ಪ್ರೆಸ್ ರೈಲು, ನವೆಂಬರ್ 10ರಂದು ದಕ್ಷಿಣ ಭಾರತದಲ್ಲೂ ಸಂಚಾರ ಶುರು ಮಾಡಲಿದೆ.
ನ.10ರಂದು ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗವಾಗಿ ಈ ರೈಲು ಓಡಾಟ ನಡೆಸಲಿದೆ ಎಂದು ದಕ್ಷಿಣ ರೈಲ್ವೆಯ ವ್ಯವಸ್ಥಾಪಕರು ಹೇಳಿದ್ದಾರೆ. ಒಟ್ಟಾರೆ 483 ಕಿ.ಮೀ. ಮಾರ್ಗದಲ್ಲಿ ಈ ರೈಲು ಓಡಾಟ ನಡೆಸಲಿದೆ.
ಅಂದ ಹಾಗೆ, ಇದು ದೇಶದ ಐದನೇ ವಂದೇ ಭಾರತ್ ರೈಲಿನ ಸಂಚಾರವಾಗಲಿದೆ. ಅಲ್ಲದೇ, ದಕ್ಷಿಣ ಭಾರತದ ಮೊದಲ ವಂದೇ ಭಾರತ್ ರೈಲು ಸಂಚಾರವಾಗಲಿದೆ.
ಸದ್ಯ ಭಾರತದಲ್ಲಿ ನಾಲ್ಕು ವಂದೇಭಾರತ್ ರೈಲುಗಳು ಸಂಚಾರ ಮಾಡುತ್ತಿವೆ. ಅಂದರೆ ಈ ಮೊದಲೇ ಎರಡು ಓಡುತ್ತಿದ್ದು, ಇತ್ತೀಚೆಗಷ್ಟೇ ಮೂರು ಮತ್ತು ನಾಲ್ಕನೇ ರೈಲುಗಳನ್ನು ಇನ್ನೇನು ವಿಧಾನಸಭೆ ಚುನಾವಣೆ ನಡೆಯಲಿರುವ ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಓಡಿಸಲಾಗುತ್ತಿದೆ.
ಪ್ರಧಾನಿ ನರೇಂದ್ರ ಮೋದಿಯವರು ಗುರುವಾರವಷ್ಟೇ ಹಿಮಾಚಲ ಪ್ರದೇಶದ ಉನಾದಲ್ಲಿ ಈ ರೈಲಿಗೆ ಚಾಲನೆ ನೀಡಿದ್ದರು. ಈ ಸಂಬಂಧ ಟ್ವೀಟ್ ಮಾಡಿರುವ ಮೈಸೂರು ಸಂಸದ ಪ್ರತಾಪ್ ಸಿಂಹ, ಪ್ರಧಾನಿ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ