ಲೋಕಾರ್ಪಣೆಗೊಂಡು ವಾರದ ಒಳಗೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಾನಿ
Team Udayavani, Oct 6, 2022, 5:35 PM IST
ಗಾಂಧಿನಗರ : ಸೆಪ್ಟೆಂಬರ್ 30 ರಂದು ಲೋಕಾರ್ಪಣೆ ಗೊಳಿಸಲಾಗಿದ್ದ ಮುಂಬಯಿ ಸೆಂಟ್ರಲ್-ಗಾಂಧಿನಗರ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಸಣ್ಣ ಪ್ರಮಾಣದ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೈಲ್ರೋಡ್ ವಕ್ತಾರರ ಪ್ರಕಾರ, ಗೈರತ್ಪುರ ಮತ್ತು ವತ್ವಾ ನಿಲ್ದಾಣಗಳ ನಡುವೆ ಗುರುವಾರ ಬೆಳಗ್ಗೆ 11.20ರ ಸುಮಾರಿಗೆ ಈ ಘಟನೆ ನಡೆದಿದೆ. ಎಮ್ಮೆಗಳ ಹಿಂಡು ಢಿಕ್ಕಿಯಾದ ನಂತರ, ಇಂಜಿನ್ ನ ಮುಂಭಾಗಕ್ಕೆ ಹಾನಿಯಾಗಿದೆ.
“ಮೂರರಿಂದ ನಾಲ್ಕು ಎಮ್ಮೆಗಳು ಮುಂಬಯಿ -ಗಾಂಧಿನಗರದ ವಂದೇ ಭಾರತ್ ದಾರಿಯಲ್ಲಿ ಇದ್ದಕ್ಕಿದ್ದಂತೆ ಬಂದ ಕಾರಣ , ಎಫ್ಆರ್ಪಿ (ಫೈಬರ್-ರೀನ್ಫೋರ್ಸ್ಡ್ ಪ್ಲಾಸ್ಟಿಕ್) ನಿಂದ ಮಾಡಲ್ಪಟ್ಟ ಮುಂಭಾಗ ಹಾನಿಗೊಳಗಾಗಿದೆ.
ಮಹಾರಾಷ್ಟ್ರ ಮತ್ತು ಗುಜರಾತ್ನ ರಾಜಧಾನಿ ನಗರಗಳನ್ನು ಸಂಪರ್ಕಿಸುವ ಈ ರೈಲು ದೇಶದ ಮೂರನೇ ವಂದೇ ಭಾರತ್ ಎಕ್ಸ್ಪ್ರೆಸ್ ಆಗಿದೆ. ಮೊದಲ ರೈಲು ಹೊಸದಿಲ್ಲಿ-ವಾರಣಾಸಿ ಮಾರ್ಗದಲ್ಲಿ, ಹೊಸದಿಲ್ಲಿ-ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಮಾರ್ಗದಲ್ಲಿ ಪ್ರಾರಂಭವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ