ವೀರಪ್ಪನ್ ಸಹೋದರ ಮಡೈವನ್ ಹೃದಯಾಘಾತದಿಂದ ಸಾವು
Team Udayavani, May 25, 2022, 7:07 PM IST
ಚೆನ್ನೈ: ದಂತಕಳ್ಳ ಮತ್ತು ಪೊಲೀಸರ ಗುಂಡಿಗೆ ಬಲಿಯಾದ ವೀರಪ್ಪನ್ನ ಹಿರಿಯ ಸಹೋದರ ಮಡೈವನ್ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಈತ ಅರಣ್ಯ ಅಧಿಕಾರಿ ಚಿದಂಬರಂ ಅವರನ್ನು ಹತ್ಯೆ ಮಾಡಿದ್ದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
1987ರಿಂದಲೂ ಈತ ಸೇಲಂನ ಕೇಂದ್ರ ಕಾರಾಗೃಹದಲ್ಲೇ ಜೈಲುವಾಸ ಅನುಭವಿಸುತ್ತಿದ್ದ. ಮೇ 1ರಂದು ಈತನಿಗೆ ಹೃದಯಾಘಾತವಾಗಿದ್ದು, ಸೇಲಂ ಆಸ್ಪತ್ರೆಗೆ ಸೇರಿಸಲಾಗಿತ್ತು.
ಅಲ್ಲೇ ಚಿಕಿತ್ಸೆ ಫಲಕಾರಿಯಾಗದೇ ಸತ್ತಿದ್ದಾನೆ. 2004ರ ಅ.18ರಂದು ವೀರಪ್ಪನ್ನನ್ನು ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇಂದಿಗೂ ಇವನ ಸಹಚರರು, ಸಂಬಂಧಿಗಳು ತಮಿಳುನಾಡಿನ ವಿವಿಧ ಜೈಲುಗಳಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ
Ban: ಎಕ್ಸ್ ಮೇಲೆ ನಿರ್ಬಂಧ ಹೇರಿದ ಪಾಕಿಸ್ಥಾನ
Kochi; ವಿದೇಶಿ ಮಹಿಳಾ ಪ್ರವಾಸಿಗರಿಂದ ಪ್ಯಾಲೆಸ್ತೀನ್ ಪರ ಬೋರ್ಡ್ಗಳು ಧ್ವಂಸ!!
Kerala: ಸಿಪಿಐ(ಎಂ) ಪ್ರಣಾಳಿಕೆಯಲ್ಲಿನ ಭರವಸೆಗೆ ರಾಜನಾಥ್ ಸಿಂಗ್ ಆಕ್ರೋಶ.. ಏನದು ಭರವಸೆ?
Gujarat: ಹಿಂಬದಿಯಿಂದ ಟ್ರಕ್ಗೆ ಕಾರು ಢಿಕ್ಕಿ; ಭೀಕರ ಅಪಘಾತದಲ್ಲಿ 10 ಮಂದಿ ದುರ್ಮರಣ