ಕಿತ್ತಳೆ, ಕುಂಬಳಕಾಯಿ ಲಂಚ ಪಡೆಯುತ್ತಲೇ ಸಿಕ್ಕಿಬಿದ್ದರು!
Team Udayavani, Jan 6, 2022, 7:20 AM IST
ವಯಲಾರ್: ನಗದು ಮೂಲಕ ಲಂಚ ತೆಗೆದುಕೊಳ್ಳುವುದು ಸಾಮಾನ್ಯ ಸಂಗತಿ. ಅದು ಗೊತ್ತಾದರೆ ತಾನೆ ಸಿಕ್ಕಿ ಬೀಳುವುದು?
ಕಿತ್ತಳೆ, ಕುಂಬಳಕಾಯಿ ಸೇರಿದಂತೆ ಅದನ್ನು ತರಕಾರಿ ಮತ್ತು ಹಣ್ಣುಗಳ ಮೂಲಕ ತೆಗೆದುಕೊಂಡರೆ ಹೇಗೆ? ಜತೆಗೆ ದುಡ್ಡು ಕೂಡ. ಇದೊಂದು ಅಚ್ಚರಿಯಾದರೂ ಸತ್ಯದ ವಿಚಾರ.
ಮಂಗಳವಾರ ಬೆಳಗ್ಗೆ 2 ಗಂಟೆಗೆ ಪಾಲಕ್ಕಾಡ್ ಜಿಲ್ಲೆಯ ವಿಜಿಲೆನ್ಸ್ನ ಡಿವೈಎಸ್ಪಿ ಎಸ್.ಶಂಸುದ್ದೀನ್ ನೇತೃತ್ವದ ಅಧಿಕಾರಿಗಳು ಮತ್ತು ಸಿಬಂದಿ ದಾಳಿ ನಡೆಸಿದ ಸಂದರ್ಭದಲ್ಲಿ ಈ ಅಂಶ ಬೆಳಕಿಗೆ ಬಂದಿದೆ. ಜತೆಗೆ 69,500 ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ:ಲಸಿಕೆ ಹಾಕದವರು ಯಾವುದೇ ಸಾರ್ವಜನಿಕ ಸ್ಥಳಗಳಿಗೆ ತೆರಳುವಂತಿಲ್ಲ: ಇಮಾನ್ಯುವಲ್ ಮ್ಯಾಕ್ರನ್
ಲಾರಿಗಳ ಮೂಲಕ ಬರುವ ತರಕಾರಿ ಮತ್ತು ಹಣ್ಣುಗಳನ್ನು ಲಂಚದ ರೂಪದಲ್ಲಿ ಆರ್ಟಿಒ ಚೆಕ್ಪೋಸ್ಟ್ನಲ್ಲಿ ಇರುವ ಅಧಿಕಾರಿಗಳು ಮತ್ತು ಸಿಬಂದಿ ಹಂಚಿಕೊಳ್ಳುತ್ತಾರೆ ಎಂಬ ಆರೋಪಗಳಿವೆ. ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಚಲಾಕಿತನದ ಬಗ್ಗೆ ಸುಳಿವು ಪಡೆದುಕೊಂಡ ಡಿವೈಎಸ್ಪಿ ಮತ್ತು ತಂಡ ಶಬರಿಮಲೆಗೆ ತೆರಳುವವರಂತೆ ನಟಿಸಿ ಸ್ಥಳಕ್ಕೆ ಆಗಮಿಸಿ, ಕರಾಳ ಜಾಲ ಬಯಲಿಗೆ ಎಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!
RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು