ವಾಹನಗಳ ವಿಮೆ ನವೀಕರಣ: ಮಾಲಿನ್ಯ ತಪಾಸಣೆ ಪ್ರಮಾಣ ಪತ್ರ ಕಡ್ಡಾಯ


Team Udayavani, Sep 6, 2020, 6:16 AM IST

ವಾಹನಗಳ ವಿಮೆ ನವೀಕರಣ; ಮಾಲಿನ್ಯ ತಪಾಸಣೆ ಪ್ರಮಾಣ ಪತ್ರ ಕಡ್ಡಾಯ

ಸಾಂದರ್ಭಿಕ ಚಿತ್ರ

ಮಣಿಪಾಲ: ವಾಹನಗಳ ವಿಮೆ ನವೀಕರಿಸುವ ಸಂದರ್ಭದಲ್ಲಿ ನಿಗದಿಪಡಿಸಲಾದ ಮಾಲಿನ್ಯ ನಿಯಂತ್ರಣ ಮಾನದಂಡಗಳನ್ನು ಪರಿಶೀಲಿಸುವಂತೆ ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಎಲ್ಲ ವಿಮಾ ಸಂಸ್ಥೆಗಳಿಗೆ ಸೂಚನೆ ನೀಡಿದೆ. ಈ ಮೂಲಕ ಮಾಲಿನ್ಯ ನಿಯಂತ್ರಣಕ್ಕೆ ಕಠಿನ ಮಾರ್ಗಗಳನ್ನು ಅನುಸರಿಸಲು ಸರಕಾರ ಮುಂದಾಗಿದೆ. ವಿಮೆ ಪಾಲಿಸಿ ಮಾಡಿಸುವ ಸಂದರ್ಭದಲ್ಲಿ ಎಲ್ಲ ಮಾದ ರಿಯ ಮೋಟಾರು ವಾಹನಗಳ ಹೊಗೆ ತಪಾಸಣೆ ಪ್ರಮಾಣ ಪತ್ರವನ್ನು ಪರಿಶೀಲಿಸುವಂತೆ ಸೂಚಿಸಿದೆ. ಆಗಸ್ಟ್‌ 20ರಂದು ಐಆರ್‌ಡಿಎಐ ಈ ಸುತ್ತೋಲೆ ಹೊರಡಿಸಿದೆ.

ವಾಯು ಮಾಲಿನ್ಯ ಆತಂಕ
ದಿಲ್ಲಿ ಮಹಾನಗರದಲ್ಲಿ ವಾಯು ಮಾಲಿನ್ಯ ಪ್ರಮಾಣ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದ್ದು, ಇದು ಅಪಾಯಕಾರಿ ಮಟ್ಟದಲ್ಲಿದೆ. ವಾಯುಮಾಲಿನ್ಯದಿಂದಾಗಿ ವಾತಾವರಣ ಹದಗೆಡುತ್ತಿದ್ದು ಜನರು ಉಸಿರಾಡಲೂ ಪರದಾಟ ಅನುಭವಿಸುವಂತಾಗಿದೆ. ಇದು ಲಕ್ಷಾಂತರ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟು ಮಾಡಿದೆ. ಈ ನಿಟ್ಟಿನಲ್ಲಿ ವಾಯು ಮಾಲಿನ್ಯಕ್ಕೆ ಕಡಿವಾಣ ಹಾಕಲು ಮೋಟಾರು ವಿಮೆ ಸಂದರ್ಭ ಪಿಯುಸಿ ಪ್ರಮಾಣ ಪತ್ರ ಅಥವಾ pollution under control certificate P ಕಡ್ಡಾಯವಾಗಿ ಪಡೆಯಬೇಕು.

ಸುಪ್ರೀಂ ಕೋರ್ಟ್‌ ಹೇಳಿಕೆ
ಹೆಚ್ಚುತ್ತಿರುವ ವಾಹನ ಮಾಲಿನ್ಯದ ಬಗ್ಗೆ ಸುಪ್ರೀಂ ಕೋರ್ಟ್‌ ಕಳವಳ ವ್ಯಕ್ತಪಡಿಸಿತ್ತು. ಮೋಟಾರು ವಿಮಾ ಪಾಲಿಸಿಯನ್ನು ನವೀಕರಿಸುವ ದಿನಾಂಕದಂದು ಮಾನ್ಯತೆ ಪಡೆದ ಪ್ರಮಾಣಪತ್ರವನ್ನು ಹೊಂದಿಲ್ಲದಿದ್ದರೆ ವಾಹನವನ್ನು ವಿಮೆ ಮಾಡದಂತೆ ವಿಮೆದಾರರಿಗೆ ನಿರ್ದೇಶನ ನೀಡಿತ್ತು.

ಏನಿದು ಪಿಯುಸಿ ಪ್ರಮಾಣಪತ್ರ?
ವಾಹನಗಳಿಂದ ಹೊರಸೂಸುವಿ ಕೆಯು ಮಾಲಿನ್ಯವನ್ನು ಪರಿಶೀಲಿಸುವ ಪ್ರಮಾಣಪತ್ರ ಇದಾಗಿದೆ. ಎಲ್ಲ ರೀತಿಯ ಮೋಟಾರು ವಾಹನಗಳಿಗೆ ಮಾಲಿನ್ಯ ಮಾನದಂಡಗಳು ಮತ್ತು ಹೊರಸೂಸುವಿಕೆಯ ಮಟ್ಟವನ್ನು ನಿಗದಿಪಡಿಸಲಾಗಿದೆ. ವಾಹನವು ಹೊರಸೂಸುವ ಮಾಲಿನ್ಯದ ಪ್ರಮಾಣವು ನಿಗದಿತ ಪ್ರಮಾಣದಲ್ಲಿದ್ದರೆ ಮಾತ್ರವೇ ಪಿಯುಸಿ ವಾಹನ ಮಾಲಕರಿಗೆ ಪ್ರಮಾಣಪತ್ರವನ್ನು ನೀಡಲಾಗುತ್ತದೆ.

ಹೊಸ ವಾಹನಕ್ಕೂ ಅನ್ವಯವೇ?
ಹೊಸದಾಗಿ ಖರೀದಿಸಿದ ವಾಹನಗಳಿಗೆ ಒಂದು ವರ್ಷದ ಮಟ್ಟಿಗೆ ಪಿಯುಸಿ ಹೊಂದುವ ಅಗತ್ಯವಿಲ್ಲ. ನಿಯಮಗಳ ಪ್ರಕಾರ ವಾಹನ ನೋಂದಣಿಯ 1 ವರ್ಷದ ಬಳಿಕ ಕಡ್ಡಾಯವಾಗಿ ಪಿಯುಸಿ ಪ್ರಮಾಣಪತ್ರ ಪಡೆಯಬೇಕು. ಇದನ್ನು ಹೊಂದಿಲ್ಲದಿದ್ದರೆ ದಂಡ ವಿಧಿಸಲಾಗುತ್ತದೆ. ವಿವಿಧ ಅವಧಿಗಳಿಗೆ ಪಿಯುಸಿ ಪ್ರಮಾಣಪತ್ರವನ್ನು ಪಡೆಯಬಹುದಾಗಿದೆ.

ಅಧಿಕ ಮಾಲಿನ್ಯ ಇದ್ದರೆ ಪ್ರಮಾಣ ಪತ್ರ ಇಲ್ಲ
ನಿಗದಿಪಡಿಸಿದ ಮಾನದಂಡಗಳಿಗಿಂತ ಹೆಚ್ಚಿನ ಪ್ರಮಾಣದ ಮಾಲಿನ್ಯವನ್ನು ಹೊರಸೂಸುತ್ತಿದ್ದರೆ ಪಿಯುಸಿ ಪ್ರಮಾಣಪತ್ರವನ್ನು ನೀಡಲಾಗುವುದಿಲ್ಲ. ಪ್ರಮಾಣ ಪತ್ರ ಇಲ್ಲದ ವಾಹನಗಳನ್ನು ಓಡಿಸುವಂತಿಲ್ಲ. ವಾಹನವನ್ನು ದುರಸ್ತಿ ಮಾಡಿಸಿ ಪ್ರಮಾಣಪತ್ರವನ್ನು ಪಡೆಯಬಹುದಾಗಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.