ಮಹಾರಾಷ್ಟ್ರದಲ್ಲಿ ನೂತನ ವಾಹನಗಳ ನೋಂದಣಿಯಲ್ಲಿ ಶೇ. 15ರಷ್ಟು ಕುಸಿತ


Team Udayavani, Jan 3, 2020, 10:27 PM IST

Vehicle

ಮುಂಬಯಿ: ವಾಹನ ಉದ್ಯಮದಲ್ಲಿ ಮಂದಗತಿಯ ಸಂಕೇತವೆಂಬಂತೆ, 2019 ರಲ್ಲಿ ಮಹಾರಾಷ್ಟ್ರದಲ್ಲಿ ನೂತನ ವಾಹನಗಳ ನೋಂದಣಿ ಶೇ. 15ರಷ್ಟು ಕುಸಿದಿದ್ದು, ಇದು ಆದಾಯ ಸಂಗ್ರಹಣೆಯ ಮೇಲೆ ಪರಿಣಾಮ ಬೀರಿದೆ ಎಂದು ರಾಜ್ಯ ರಸ್ತೆ ಸಾರಿಗೆ ಇಲಾಖೆ ಒದಗಿಸಿದ ಅಂಕಿ ಅಂಶಗಳು ತಿಳಿಸಿವೆ.

ಮಹಾರಾಷ್ಟ್ರವು ದೇಶದ ಅತಿದೊಡ್ಡ ವಾಹನ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಇಲಾಖೆಯು 2019-20ರ ಆರ್ಥಿಕ ವರ್ಷಕ್ಕೆ ಕಡಿಮೆ ಆದಾಯದ ಗುರಿಯನ್ನು ನಿಗದಿಪಡಿಸಿತ್ತು, ಆದರೆ ನವೆಂಬರ್‌ವರೆಗಿನ ಸ್ಥಿತಿಯನ್ನು ಗಮನಿಸಿದರೆ ಆ ಗುರಿಯನ್ನು ಕೂಡ ಸಾಧಿಸುವುದು ಕಷ್ಟಕರವೆಂದು ತೋರುತ್ತಿದೆ.

ರಾಜ್ಯದ ಉನ್ನತ ಆದಾಯ ಗಳಿಸುವ ಏಜೆನ್ಸಿಗಳಲ್ಲಿ ಒಂದಾದ ರಸ್ತೆ ಸಾರಿಗೆ ಇಲಾಖೆಯು 2015ರ ಆರ್ಥಿಕ ವರ್ಷದಿಂದೀಚೆಗೆ ತನ್ನ ಗುರಿಗಿಂತ ಹೆಚ್ಚಿನ ಆದಾಯವನ್ನು ನೀಡುತ್ತ ಬಂದಿರುವುದು ಇಲ್ಲಿ ಗಮನಿಸುವಂತಹ ವಿಚಾರವಾಗಿದೆ.

2018-19ರ ಸಾಲಿನ 8,672 ಕೋಟಿ ರೂ.ಗಳ ವಿರುದ್ಧ ಇಲಾಖೆಯು 2019-20ರಲ್ಲಿ ವಾಹನ ನೋಂದಣಿ, ತೆರಿಗೆ ಮತ್ತು ಇತರ ಸುಂಕಗಳಿಂದ 8,249 ಕೋಟಿ ರೂ. ಗಳ ಆದಾಯವನ್ನು ಸಂಗ್ರಹಿಸುವ ಗುರಿಯನ್ನು ಹೊಂದಿದೆ.

2019ರ ನವೆಂಬರ್‌ ಹೊತ್ತಿಗೆ ಅದು ಕೇವಲ 5,466 ಕೋಟಿ ರೂ.ಗಳನ್ನು ಸಂಗ್ರಹಿಸಿದೆ. ಮಾಹಿತಿಯ ಪ್ರಕಾರ, ನೂತನ ವಾಹನಗಳ ನೋಂದಣಿಯಲ್ಲಿ ಶೇ. 15 ರಷ್ಟು ಕುಸಿತ ಕಂಡುಬಂದಿದೆ. 2018ರಲ್ಲಿ 27.14 ಲಕ್ಷ ನೂತನ ವಾಹನಗಳು ನೋಂದಣಿಯಾಗಿದ್ದರೆ, 2019ರಲ್ಲಿ 23.10 ಲಕ್ಷ ವಾಹನಗಳು ನೋಂದಣಿಯಾಗಿವೆ.

ಎಪ್ರಿಲ್‌-ನವೆಂಬರ್‌ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 2,00,000 ಕಡಿಮೆ ವಾಹನಗಳು ನೋಂದಣಿಯಾಗಿವೆ. ಇದು ಇಲಾಖೆಯ ಆದಾಯ ಸಂಗ್ರಹದ ಮೇಲೆ ಪರಿಣಾಮ ಬೀರಿದೆ ಎಂದು ರಾಜ್ಯ ಸಾರಿಗೆ ಆಯುಕ್ತ ಶೇಖರ್‌ ಚನ್ನೆ ಈ ವಾರದ ಆರಂಭದಲ್ಲಿ ಪಿಟಿಐಗೆ ತಿಳಿಸಿದ್ದಾರೆ.

ಆದರೆ ಇಲಾಖೆಯು ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಗುರಿಯನ್ನು ಸಾಧಿಸುವ ಆಶಯವನ್ನು ಹೊಂದಿದೆ ಎಂದವರು ಹೇಳಿದ್ದಾರೆ.

ನೂತನ ದ್ವಿಚಕ್ರ ವಾಹನಗಳ ನೋಂದಣಿಯಲ್ಲೂ ಇಳಿಕೆ ದಾಖಲಾಗಿದೆ. ಹಿಂದಿನ ವರ್ಷದ 19.69 ಲಕ್ಷ ವಾಹನಗಳ ತುಲನೆಯಲ್ಲಿ 2019ರಲ್ಲಿ ರಾಜ್ಯದಲ್ಲಿ ಕೇವಲ 16.92 ಲಕ್ಷ ನೂತನ ದ್ವಿಚಕ್ರ ವಾಹನಗಳು ನೋಂದಣಿಯಾಗಿವೆ ಎಂದು ರಾಜ್ಯ ರಸ್ತೆ ಸಾರಿಗೆ ಇಲಾಖೆಯ ಮಾಹಿತಿಯು ತಿಳಿಸಿದೆ.

ನಾಲ್ಕು ಚಕ್ರಗಳ ವಾಹನಗಳ ಮಾರಾಟವು 2018ರ 3.97 ಲಕ್ಷದ ವಿರುದ್ಧ 2019ರಲ್ಲಿ 3.66 ಲಕ್ಷಕ್ಕೆ ಇಳಿದಿದ್ದರೆ, ತ್ರಿಚಕ್ರ ವಾಹನಗಳ ನೋಂದಣಿ ಕೂಡ 2018ರ 1.72 ಲಕ್ಷದ ತುಲನೆಯಲ್ಲಿ 2019ರಲ್ಲಿ 95,808ಕ್ಕೆ ಇಳಿದಿದೆ. ಸಣ್ಣ ಸರಕುಗಳ ವಾಹಕಗಳ ನೋಂದಣಿ 2018ರ 80,063 ರಿಂದ 76,182 ಕ್ಕೆ ಇಳಿದಿದೆ ಎಂದು ಅದು ಬಹಿರಂಗಪಡಿಸಿದೆ. ಅಂಕಿಅಂಶಗಳ ಪ್ರಕಾರ, 11 ಕೋಟಿಗಿಂತಲೂ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಜ್ಯದಲ್ಲಿ 3.53 ಕೋಟಿ ನೋಂದಾಯಿತ ವಾಹನಗಳಿವೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.