ವಾಹನಗಳಿಂದಲೇ ಅಧಿಕ ಮಾಲಿನ್ಯ: ಸುಡುಮದ್ದು ನಿಷೇಧ ವಿರುದ್ಧ ಸುಪ್ರೀಂ


Team Udayavani, Mar 12, 2019, 10:11 AM IST

supreme-court2-700.jpg

ಹೊಸದಿಲ್ಲಿ : ಸುಡು ಮದ್ದುಗಳಿಗಿಂತಲೂ ಮೋಟಾರು ವಾಹನಗಳು ಉಗುಳುವ ಹೊಗೆಯಿಂದಲೇ ಅತ್ಯಧಿಕ ಪರಿಸರ ಮಾಲಿನ್ಯ ಉಂಟಾಗುತ್ತದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. 

ಪರಿಸರ ಮಾಲಿನ್ಯದ ಪ್ರಶ್ನೆ ಬಂದಾಗ ಜನರು ಪಟಾಕಿ ಕಾರ್ಖಾನೆಗಳನ್ನು ನಿಷೇಧಿಸಬೇಕೆಂಬ ಕೂಗು ಎಬ್ಬಿಸುತ್ತಾರೆ. ಆದರೆ ಹಾಗೆ ಮಾಡುವುದರಿಂದ ಈ ಕ್ಷೇತ್ರದಲ್ಲಿ ಅಪಾರ ಉದ್ಯೋಗ ನಷ್ಟವಾಗುತ್ತದೆ. ಆ ಬಗ್ಗೆ ಜನರು ತಲೆ ಕೆಡಿಸಿಕೊಳ್ಳುವುದಿಲ್ಲ. ಆದುದರಿಂದ ಸರಕಾರ ಅತ್ಯಧಿಕ ಪರಿಸರ ಮಾಲಿನ್ಯ ಉಂಟಾಗುವುದು ಮೋಟಾರು ವಾಹನಗಳಿಂದಲೋ ಅಥವಾ ಪಟಾಕಿ ಸುಡುವುದರಿಂದಲೋ ಎಂಬುದರ ತುಲನಾತ್ಮಕ ಮತ್ತು ವೈಜ್ಞಾನಿಕ ಅಧ್ಯಯನ ನಡೆಸಬೇಕು ಎಂದು ಜಸ್ಟಿಸ್‌ ಎಸ್‌ ಎ ಬೋಬಡೆ ಮತ್ತು ಜಸ್ಟಿಸ್‌ ಎಸ್‌ ಎ ನಜೀರ್‌ ಅವರನ್ನು ಒಳಗೊಂಡ ಪೀಠ ಹೇಳಿತು.

ಪಟಾಕಿ ನಿಷೇಧಿಸುವ ಮೂಲಕ ನಿರುದ್ಯೋಗ ಸೃಷ್ಟಿಯಾಗುವುದನ್ನು ನಾವು ಬಯಸುವುದಿಲ್ಲ ಎಂದು ಸುಪ್ರೀಂ ಪೀಠ ಹೇಳಿತು. 

ಸುಡು ಮದ್ದು ಬಳಕೆಯಿಂದ ಗರಿಷ್ಠ ಮಾಲಿನ್ಯ ಉಂಟಾಗುವ ಕಾರಣ ದೇಶಾದ್ಯಂತ ಅದರ ಬಳಕೆಯನ್ನು ನಿಷೇಧಿಸಬೇಕು ಎಂದು ಕೋರಿದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಡೆಸುತ್ತಿತ್ತು. 

ಮೋಟಾರು ವಾಹನ ಮತ್ತು ಪಟಾಕಿ – ಇವುಗಳಿಂದ ಆಗುವ ಗರಿಷ್ಠ ಮಾಲಿನ್ಯದ ಬಗ್ಗೆ  ಈ ತನಕ ತುಲನಾತ್ಮಕ ಅಧ್ಯಯನ ನಡೆದದ್ದುಂಟಾ ? ಮಾಲಿನ್ಯದ ವಿಷಯಕ್ಕೆ ಬಂದಾಗ ನೀವು ಪಟಾಕಿ ಸುಡುವುದನ್ನು ನಿಷೇಧಿಸಬೇಕು ಎಂದು ಹೇಳುತ್ತೀರಿ. ನಿಜಕ್ಕಾದರೆ ಮೋಟಾರು ವಾಹನಗಳಿಂದಾಗುವ ಪರಿಸರ ಮಾಲಿನ್ಯ ಗರಿಷ್ಠ ಎಂದು ಸುಪ್ರೀಂ ಕೋರ್ಟ್‌ ಪೀಠ, ಕೇಂದ್ರ ಸರಕಾರವನ್ನು ಪ್ರತಿನಿಧಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ ಎ ಎನ್‌ ಎಸ್‌ ನಾಡಕರ್ಣಿ ಅವರಿಗೆ ಹೇಳಿತು. 

“ನೀವು ನಮಗೆ ನಿರುದ್ಯೋಗ ತಡೆಯುವ ವಿಧಾನಗಳ ಬಗ್ಗೆ ತಿಳಿಸಬೇಕು. ಜನರು ನಿರುದ್ಯೋಗಿಗಳಾಗಿ ಹಸಿವಿನಿಂದ ಇರುವುದನ್ನು ನಾವು ಬಯಸುವುದಿಲ್ಲ. ಸುಡು ಮದ್ದುಗಳನ್ನು ಬಳಸುವ ಇತರ ಕ್ಷೇತ್ರಗಳೂ ಇದ್ದಾವು’ ಎಂದು ಪೀಠ ಹೇಳಿತು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.