ಮತ್ತೆ ಮುಳುಗಡೆ ಭೀತಿ: ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ;ಹಲವು ರಾಜ್ಯಗಳಲ್ಲಿ ನೆರೆ ಆತಂಕ


Team Udayavani, Sep 12, 2022, 6:42 AM IST

ಮತ್ತೆ ಮುಳುಗಡೆ ಭೀತಿ: ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ;ಹಲವು ರಾಜ್ಯಗಳಲ್ಲಿ ನೆರೆ ಆತಂಕ

ಪುಣೆಯಲ್ಲಿ ರವಿವಾರ ಸುರಿದ ಭಾರೀ ಮಳೆಗೆ ಉಂಟಾಗಿದ್ದ ಟ್ರಾಫಿಕ್‌ ಜಾಮ್‌ನ ದೃಶ್ಯ.

ಹೊಸದಿಲ್ಲಿ: ಬಂಗಾಲ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಹಲವು ರಾಜ್ಯಗಳಲ್ಲಿ ಮತ್ತೆ ಪ್ರವಾಹ ಭೀತಿಯನ್ನು ಉಂಟುಮಾಡಿದೆ.

ಶನಿವಾರ ದಿಂದಲೇ ಒಡಿಶಾ, ಪಶ್ಚಿಮ ಬಂಗಾಲ, ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್‌ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಧಾರಾಕಾರ ಮಳೆ ಆರಂಭವಾಗಿದ್ದು, ಇನ್ನೂ 5 ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಇದು ಈಗಾಗಲೇ ಒಂದು ಹಂತದ ಮಳೆ, ಪ್ರವಾಹ, ಭೂಕುಸಿತದಂತಹ ದುರಂತಗಳಿಂದ ಕಂಗಾಲಾಗಿದ್ದ ಜನರನ್ನು ಮತ್ತೆ ಆತಂಕಕ್ಕೆ ನೂಕಿದೆ.

ಒಡಿಶಾದಲ್ಲಿ ಶನಿವಾರ ರಾತ್ರಿಯಿಂದೀಚೆಗೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ಭುವನೇಶ್ವರ ಮತ್ತು ಕಟಕ್‌ನಲ್ಲಿ ವಿಪರೀತ ಮಳೆಯಾಗಲಿದ್ದು, ಮನೆಗಳಿಂದ ಹೊರಗೆ ಬರದಂತೆ ನಾಗರಿಕರಿಗೆ ಸೂಚಿಸಲಾಗಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಸೋಮವಾರ ಯಾವುದೇ ಕಾರಣಕ್ಕೂ ಸಮುದ್ರಕ್ಕಿಳಿ ಯದಂತೆ ಮೀನುಗಾರರಿಗೆ ಸೂಚಿಸಲಾಗಿದೆ.

ಆಂಧ್ರಪ್ರದೇಶ, ಪಶ್ಚಿಮ ಬಂಗಾಲ, ತೆಲಂಗಾಣ ಮತ್ತು ಗುಜರಾತ್‌ನಲ್ಲೂ ಇದೇ ಸ್ಥಿತಿಯಿದ್ದು, ಸೆ.14 ರವರೆಗೂ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡು, ಪುದು ಚೇರಿ ಮತ್ತು ಕರೈಕಲ್‌ನಲ್ಲಿ ರವಿ ವಾರ ವರುಣ ಅಬ್ಬರಿಸಿದ್ದು, ಕರ್ನಾಟಕ ಮತ್ತು ಕೇರಳದಲ್ಲಿ ಸೆ. 12ರಂದು ಭಾರೀ ಮಳೆ ಯಾಗಲಿದೆ ಎಂದು ಹವಾ ಮಾನ ಇಲಾಖೆ ಹೇಳಿದೆ. ದಿಲ್ಲಿಯಲ್ಲಿ ಶನಿವಾರ ದಿಂದೀಚೆಗೆ ಅಲ್ಪ ಪ್ರಮಾಣ ದಲ್ಲಿ ಮಳೆಯಾಗಿದೆ. ಸೆ.17- 18ರಂದು ಬಂಗಾಲ ಕೊಲ್ಲಿಯಲ್ಲಿ ಚಂಡಮಾರುತ ವೊಂದು ಸಕ್ರಿಯ ಗೊಳ್ಳುವ ಸಾಧ್ಯತೆ ಯಿದೆ ಎಂದೂ ಇಲಾಖೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ 5 ದಿನ ಮಳೆಯಬ್ಬರ: ಮುಂಬಯಿ, ರಾಯಗಢ, ಥಾಣೆ, ರತ್ನಗಿರಿ, ಸಿಂಧುದುರ್ಗ ಸೇರಿ ದಂತೆ ಮಹಾರಾಷ್ಟ್ರದ ಹಲವೆಡೆ ಗುಡುಗು-ಸಿಡಿಲು, ಬಿರುಗಾಳಿ ಸಹಿತ ಭಾರೀ ಮಳೆ ಆರಂಭ ವಾಗಿದೆ. ಮುಂದಿನ 5 ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉತ್ತರಾಖಂಡದ 5 ಜಿಲ್ಲೆಗಳಿಗೆ ಅಲರ್ಟ್‌: ಇತ್ತೀಚೆ ಗಷ್ಟೇ ಮೇಘಸ್ಫೋಟ, ಭೂಕುಸಿತದಂಥ ದುರಂತಗಳನ್ನು ಕಂಡಿದ್ದ ಉತ್ತರಾಖಂಡದಲ್ಲಿ ಈಗ ಮತ್ತೂಂದು ಸುತ್ತಿನ ಮಳೆ ಆರಂಭವಾಗಿದೆ. ಪಿತ್ತೋರ್‌ಗಢ, ಡೆಹ್ರಾಡೂನ್‌ ಸೇರಿ 5 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಗಂಗೋತ್ರಿ, ಯಮುನೋತ್ರಿ ಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಎರಡೂ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಪರ್ಕ ಸ್ಥಗಿತಗೊಳಿಸಲಾ ಗಿದೆ. ಉತ್ತರಾಖಂಡ ಸಿಎಂ ಪುಷ್ಕರ್‌ ಸಿಂಗ್‌ ಅವರು ರವಿವಾರ ವೈಮಾನಿಕ ಸಮೀಕ್ಷೆಯನ್ನೂ ನಡೆಸಿದ್ದಾರೆ.

ನದಿ ದಾಟಿ ಬಂದು
ಪರೀಕ್ಷೆ ಬರೆದಳು!
ಆಂಧ್ರಪ್ರದೇಶದ ವಿಜಯನಗರದ 21 ವರ್ಷದ ಯುವತಿ ಉಕ್ಕಿ ಹರಿಯುತ್ತಿದ್ದ ಚಂಪಾವದಿ ನದಿಯನ್ನು ದಾಟಿ ಬಂದು ಪರೀಕ್ಷೆ ಬರೆದಿದ್ದಾಳೆ. ಪರೀಕ್ಷಾ ಕೇಂದ್ರ ತಲುಪಬೇಕೆಂದರೆ ನದಿ ದಾಟಲೇಬೇಕಿತ್ತು. ಹೀಗಾಗಿ, ಕುಟುಂಬ ಸದಸ್ಯರೊಬ್ಬರ ಸಹಾಯದಿಂದ ನದಿ ದಾಟಿದ್ದಾಳೆ. ಈಜು ಬಾರದ ಹಿನ್ನೆಲೆಯಲ್ಲಿ ಸಹೋದರನೇ ಆಕೆಯನ್ನು ನದಿ ದಾಟಿಸಿದ್ದಾನೆ. ಇಬ್ಬರೂ ಕಷ್ಟಪಟ್ಟು ನದಿ ದಾಟುತ್ತಿರುವ ವೀಡಿಯೋ ವೈರಲ್‌ ಆಗಿದೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.