ಜ.20ರಿಂದ ತಿರುಪತಿಯಲ್ಲಿ ಉಚಿತ ಲಡ್ಡು
Team Udayavani, Jan 5, 2020, 10:41 PM IST
ತಿರುಪತಿ: ವಿಶ್ವ ವಿಖ್ಯಾತ ತಿರುಪತಿ ವೆಂಕಟೇಶ್ವರ ದೇವಸ್ಥಾನದಲ್ಲಿ ಇನ್ನು ಮುಂದೆ ಪ್ರತಿ ಭಕ್ತರಿಗೂ ಉಚಿತವಾಗಿ ಒಂದು ಲಡ್ಡು ದೊರೆಯಲಿದೆ.
ಜ.20ರಿಂದ ದೇವರ ದರ್ಶನ ಪಡೆಯುವ ಭಕ್ತರಿಗೆ ತಲಾ ಒಂದು ಲಡ್ಡು ಪ್ರಸಾದವನ್ನು ಉಚಿತವಾಗಿ ನೀಡಲಾಗುವುದು. ಹೆಚ್ಚುವರಿ ಲಡ್ಡು ಬೇಕಾದರೆ 50 ರೂ. ಪಾವತಿಸಬೇಕಾಗುತ್ತದೆ. ವಾರ್ಷಿಕವಾಗಿ ಶುಚಿ ಹಾಗೂ ರುಚಿಯಿಂದ ಕೂಡಿರುವ 2.5 ಕೋಟಿ ಲಡ್ಡು ತಯಾರಿಸಲಾಗುವುದು ಎಂದು ಟಿಟಿಡಿ ಅಧ್ಯಕ್ಷ ವೈ.ವಿ.ಸುಬ್ಟಾರೆಡ್ಡಿ ತಿಳಿಸಿದ್ದಾರೆ.
ಇದುವರೆಗೂ ಕಾಲ್ನಡಿಗೆಯಲ್ಲಿ ಬೆಟ್ಟ ಹತ್ತಿ ಬರುತ್ತಿದ್ದ ಭಕ್ತರಿಗೆ ಮಾತ್ರ ಒಂದು ಉಚಿತ ಲಡ್ಡು ಸಿಗುತ್ತಿತ್ತು. ಸೋಮವಾರ ವೈಕುಂಠ ಏಕಾದಶಿಯಾಗಿದ್ದು, ಅಂದು ಸ್ವರ್ಗದ ಬಾಗಿಲು ತೆಗೆದಿರುತ್ತದೆ ಎಂಬ ಭಾವನೆ ಇದೆ. ಈ ಹಿನ್ನೆಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ದೇಗುಲಕ್ಕೆ ಭೇಟಿ ನೀಡುವ ನಿರೀಕ್ಷೆ ಇದೆ. ಇದಕ್ಕಾಗಿ ದೇಗುಲದಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದೂ ಟಿಟಿಡಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ