ಪ್ರಚಂಡ ಮಳೆ ಪ್ರವಾಹ ಭೀತಿ; 12 ರಾಜ್ಯಗಳಿಗೆ ಮುನ್ನೆಚ್ಚರಿಕೆ
Team Udayavani, Aug 31, 2017, 6:10 AM IST
ಹೊಸದಿಲ್ಲಿ: ಈಗಾಗಲೇ ಉತ್ತರ ಭಾರತ ಹಾಗೂ ದಕ್ಷಿಣ ಭಾರತದ ಕೆಲವು ಕಡೆಗಳಲ್ಲಿ ಕುಂಭದ್ರೋಣ ಮಳೆ ಸುರಿಯುತ್ತಿದ್ದು, ಮುಂದಿನ ಮೂರು ದಿನ ಭಾರೀ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇದೆ ಎಂದು ಕೇಂದ್ರ ಜಲ ಸಂಪನ್ಮೂಲ ಇಲಾಖೆ ಹೇಳಿದೆ. ಈ ಸಂಬಂಧ ಕರ್ನಾಟಕವೂ ಸೇರಿದಂತೆ 12 ರಾಜ್ಯಗಳಿಗೆ ಮುನ್ನೆಚ್ಚರಿಕೆ ನೀಡಿರುವ ಅದು, ಹವಾಮಾನ ಇಲಾಖೆಯ ಸೂಚನೆ ಅನ್ವಯ ನಿರ್ದೇಶನ ನೀಡಿದೆ.
ಉತ್ತರ ಪ್ರದೇಶದ ಬಿಹಾರ, ಅಸ್ಸಾಂ ಸೇರಿದಂತೆ 6 ರಾಜ್ಯಗಳು ಪ್ರವಾಹದಿಂದ ತತ್ತರಿಸಿವೆ. ಮಹಾರಾಷ್ಟ್ರ ಮತ್ತು ದಕ್ಷಿಣದ ಗೋವಾದಲ್ಲೂ ಮಳೆಯ ಅಬ್ಬರ ಜೋರಾಗಿದ್ದು, ಮುಂಬಯಿ ನಗರಿಯೇ ನೀರಿನಲ್ಲಿ ಮುಳುಗಿತ್ತು. ಇದೇ ಪ್ರಮಾಣದ ಮಳೆ ಇನ್ನೂ ಮೂರು ದಿನ ಕರ್ನಾಟಕದ ಕರಾವಳಿ, ಪಶ್ಚಿಮ ಘಟ್ಟ ಪ್ರದೇಶಗಳು ಮತ್ತು ದಕ್ಷಿಣ ಒಳನಾಡಿನಲ್ಲೂ ಸುರಿಯಬಹುದು ಎಂದು ಮುನ್ನೆಚ್ಚರಿಕೆ ನೀಡಿದೆ. ಈ ಮಳೆಯಿಂದಾಗಿ ಭಾರೀ ಪ್ರಮಾಣದ ನೆರೆ ಪರಿಸ್ಥಿತಿ ಕೂಡ ಉಂಟಾಗಬಹುದು ಎಂದು ಅದು ಎಚ್ಚರಿಕೆ ನೀಡಿದೆ.
ಮಂಗಳವಾರದ ಮುಂಬಯಿ ಮಳೆಯನ್ನು ಉಲ್ಲೇಖೀಸಿರುವ ಭಾರತೀಯ ಹವಾಮಾನ ಇಲಾಖೆ, ಇದೇ ಪರಿಸ್ಥಿತಿ ಇನ್ನೂ ಕೆಲ ದಿನ ಮುಂದುವರಿಯಲಿದೆ ಎಂದಿದೆ. ಮುಂದೆ ಬರುವ ಮಳೆಯಿಂದಾಗಿ 14 ನದಿಗಳು ಮತ್ತು ಇವುಗಳ ಉಪನದಿಗಳು ತುಂಬಿ ಹರಿಯಲಿವೆ. ಅಲ್ಲದೆ ಇವುಗಳಿಗೆ ಹೊಂದಿಕೊಂಡ ಜಲಾಶಯಗಳಿಗೂ ಸಾಕಷ್ಟು ಪ್ರಮಾಣದ ನೀರು ಬರುವ ಸಾಧ್ಯತೆ ಇದೆ ಎಂದು ಹೇಳಿದೆ.
ಮುಂಬಯಿನಲ್ಲಿ ಮಂಗಳವಾರ ದಾಖಲೆಯ 298 ಮಿ.ಮೀ. ಮಳೆ ಸುರಿದಿದೆ. ಬೆಳಗ್ಗೆ 8.30ಕ್ಕೆ ಆರಂಭವಾದ ಮಳೆ ಕೊಂಚ ಬಿಡುವು ನೀಡಿದ್ದು ಸಂಜೆ 5.30ಕ್ಕೆ. ಸರಿಸುಮಾರು 30 ಸೆ.ಮೀ. ಮಳೆ ಸುರಿದಿದೆ. ಎಲ್ಲೆಲ್ಲಿ ಭಾರೀ ಮಳೆ?
ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರ, ಗುಜರಾತ್, ಗೋವಾ, ರಾಜಸ್ಥಾನ, ಛತ್ತೀಸ್ಗಡ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು, ಕೇರಳ ಮತ್ತು ಡಮನ್ ಹಾಗೂ ದಿಯು.
ಕರ್ನಾಟಕದಲ್ಲಿ ಎಲ್ಲಿ?
ಉತ್ತರಕನ್ನಡ, ಉಡುಪಿ, ದಕ್ಷಿಣ ಕನ್ನಡ, ಮೈಸೂರು, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಬಾಗಲಕೋಟೆ, ವಿಜಯಪುರ, ಕಲಬುರಗಿ, ಶಿವಮೊಗ್ಗ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ