ಹಿರಿಯ ಪತ್ರಕರ್ತ ನಯ್ಯರ್‌ ನಿಧನ


Team Udayavani, Aug 24, 2018, 7:25 AM IST

kuldeep-24-8.jpg

ಹೊಸದಿಲ್ಲಿ: ಪತ್ರಿಕಾ ಸ್ವಾತಂತ್ರ್ಯ, ನಾಗರಿಕ ಸ್ವಾತಂತ್ರ್ಯಗಳಿಗಾಗಿ ಹೋರಾಡಿದ ಹಿರಿಯ ಪತ್ರಕರ್ತ ಕುಲದೀಪ್‌ ನಯ್ಯರ್‌ ಅವರು ಗುರುವಾರ ನಿಧನ ಹೊಂದಿದ್ದಾರೆ. 95 ವರ್ಷ ವಯಸ್ಸಿನ ಕುಲದೀಪ್‌ ಅವರು ನ್ಯುಮೋನಿಯಾದಿಂದ ಬಳಲುತ್ತಿದ್ದ ಕಾರಣ ಐದು ದಿನಗಳ ಹಿಂದೆ ದಿಲ್ಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕುಲದೀಪ್‌ ಅವರು ಪತ್ನಿ, ಇಬ್ಬರು ಮಕ್ಕಳು ಹಾಗೂ ಹಾಗೂ ಅಣ್ಣನನ್ನು ಅಗಲಿದ್ದಾರೆ. ಗುರುವಾರವೇ ಅವರ ಅಂತ್ಯಕ್ರಿಯೆ ನಡೆಯಿತು. 1923ರಂದು ಈಗಿನ ಪಾಕಿಸ್ಥಾನದ ಸಿಯಲ್‌ಕೋಟ್‌ನಲ್ಲಿ ಜನಿಸಿದ ನಯ್ಯರ್‌, ಉರ್ದು ಪತ್ರಿಕೆಯ ಮೂಲಕ ಪತ್ರಿಕೋದ್ಯಮಕ್ಕೆ ಪ್ರವೇಶಿಸಿದ್ದರು. ಇಂಡಿಯನ್‌ ಎಕ್ಸ್‌ಪ್ರೆಸ್‌ ಹಾಗೂ ದಿ ಸ್ಟೇಟ್ಸ್‌ಮನ್‌ ಸಹಿತ ಅನೇಕ ಪತ್ರಿಕೆಗಳಲ್ಲಿ ಇವರು ಸಂಪಾದಕರಾಗಿ ಸೇವೆ ಸಲ್ಲಿಸಿದ್ದರು. ತುರ್ತುಪರಿಸ್ಥಿತಿಯ ವೇಳೆ ಸೆರೆವಾಸವನ್ನೂ ಅನುಭವಿಸಿದ್ದರು. 50ಕ್ಕೂ ಹೆಚ್ಚು ಪತ್ರಿಕೆಗಳಿಗೆ ಅವರು ಅಂಕಣ ಹಾಗೂ ಲೇಖನಗಳನ್ನು ಬರೆದಿದ್ದರು.

ಕುಲದೀಪ್‌ ಪತ್ರಕರ್ತರಾಗಷ್ಟೇ ಗುರುತಿಸಿ ಕೊಂಡಿರಲಿಲ್ಲ, ಮಾನವ ಹಕ್ಕುಗಳ ಪ್ರತಿಪಾದಕರಾಗಿದ್ದರು.1990ರಲ್ಲಿ ಬ್ರಿಟನ್‌ನಲ್ಲಿ ಭಾರತದ ಹೈ ಕಮಿಷನರ್‌ ಆಗಿಯೂ ಸೇವೆ ಸಲ್ಲಿಸಿದ್ದರು. 1997ರಲ್ಲಿ ರಾಜ್ಯಸಭೆಗೆ ನಾಮನಿರ್ದೇಶಿತಗೊಂಡಿದ್ದರು. ಭಾರತ ಮತ್ತು ಪಾಕಿಸ್ಥಾನದ ಮಧ್ಯೆ ಶಾಂತಿ ಸ್ಥಾಪನೆಯಾಗಬೇಕೆಂಬ ಉತ್ಕಟ ಬಯಕೆಯನ್ನು ಕುಲದೀಪ್‌ ಹೊಂದಿದ್ದರು.

ತುರ್ತುಪರಿಸ್ಥಿತಿಯ ವೇಳೆ ಪ್ರಜಾತಂತ್ರಕ್ಕಾಗಿ ಗಟ್ಟಿಧ್ವನಿಯಲ್ಲಿ ಹೋರಾಡಿದ ವ್ಯಕ್ತಿ. ನೇರ ಮತ್ತು ನಿರ್ಭೀತಿಯಿಂದ ನಿಲುವು ಪ್ರಕಟಿಸುತ್ತಿದ್ದರು ಎಂದು ಕುಲದೀಪ್‌ ಅವರನ್ನು ಗುಣಗಾನ ಮಾಡಿರುವ ರಾಷ್ಟ್ರಪತಿ ಕೋವಿಂದ್‌ ಹಾಗೂ ಪ್ರಧಾನಿ ಮೋದಿ, ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಸಂಪಾದಕರ ಗಿಲ್ಡ್‌ ಕೂಡಾ ಕುಲದೀಪ್‌ ನಿಧನಕ್ಕೆ ಸಂತಾಪ ಸೂಚಿಸಿದೆ.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.