ರಾಮಮಂದಿರ ನಿರ್ಮಾಣ ಶೀಘ್ರ: VHP ಮುಖ್ಯಸ್ಥ
Team Udayavani, Apr 24, 2018, 10:49 AM IST
ಅಯೋಧ್ಯೆ: ವಿಶ್ವ ಹಿಂದೂ ಪರಿಷತ್ ಗೆ ಆಯ್ಕೆಯಾದ ಹೊಸ ಮುಖ್ಯಸ್ಥ ವಿಷ್ಣು ಸದಾಶಿವ್ ಕೊಕ್ಜೆ ಸೋಮವಾರ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ್ ಲಲ್ಲಾಗೆ ಭೇಟಿ ನೀಡಿದ್ದಾರೆ. ಅಲ್ಲದೆ ಭವ್ಯ ರಾಮಮಂದಿರ ಶೀಘ್ರದಲ್ಲೇ ನಿರ್ಮಾಣವಾಗಲಿದೆ ಎಂದೂ ಅವರು ಈ ವೇಳೆ ಹೇಳಿದ್ದಾರೆ. ಅಧಿಕಾರ ವಹಿಸಿಕೊಂಡು ಕಾರ್ಯಾರಂಭ ಮಾಡುವ ಮೊದಲು ರಾಮ್ ಲಲ್ಲಾ ದರ್ಶನ ಮಾಡಲು ಬಯಸಿದ್ದೆ. ಹೀಗಾಗಿ ಅಯೋಧ್ಯೆಗೆ ಭೇಟಿ ನೀಡಿದ್ದೇನೆ ಎಂದಿದ್ದಾರೆ. ಅನಂತರ ಅವರು ದೇಗುಲದ ವೈದಿಕರು ಹಾಗೂ ರಾಮಜನ್ಮಭೂಮಿ ನ್ಯಾಸ್ ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಶೀಘ್ರದಲ್ಲೇ ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ದೇಶದ ಎಲ್ಲ ಸ್ವಾಮೀಜಿಗಳೊಂದಿಗೆ ಮಾತುಕತೆ ನಡೆಸಲಿದ್ದೇನೆ. ಈ ಪ್ರಕರಣದಲ್ಲಿನ ದೂರುದಾರರು ಹೊರಗಿನವರು. ಅವರಿಗೆ ಇಲ್ಲಿನ ಸ್ಥಿತಿಗತಿಗಳು ತಿಳಿದಿಲ್ಲ ಎಂದೂ ಕೊಕ್ಜೆ ಆಕ್ಷೇಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್