ನಾಯ್ಡು ನನ್ನೊಂದಿಗೆ ಚರ್ಚೆಗೆ ಬರಲಿ: ಗೋಪಾಲಕೃಷ್ಣ ಗಾಂಧಿ
Team Udayavani, Jul 29, 2017, 8:35 AM IST
ಹೊಸದಿಲ್ಲಿ: ಎನ್ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ನನ್ನೊಂದಿಗೆ ಚರ್ಚೆಗೆ ಬರಲಿ. ಟಿವಿಯಲ್ಲಿ ಇಬ್ಬರೂ ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಮುಖಾಮುಖೀಯಾಗಿ ಚರ್ಚಿಸೋಣ ಎಂದು ಪ್ರತಿಪಕ್ಷಗಳ ಅಭ್ಯರ್ಥಿ ಗೋಪಾಲಕೃಷ್ಣ ಗಾಂಧಿ ಹೇಳಿದ್ದಾರೆ. ಇಂತಹ ಚರ್ಚೆ ಆಯೋಜಿಸುವಂತೆ ರಾಜ್ಯಸಭಾ ಟಿವಿಗೆ ಮನವಿ ಮಾಡಿರುವುದಾಗಿಯೂ ಅವರು ತಿಳಿಸಿದ್ದಾರೆ.
ಅಭ್ಯರ್ಥಿಗಳ ನಡುವೆ ಇಂಥ ಚರ್ಚೆ ನಡೆದರೆ, ಅವರ ಸಾಮರ್ಥ್ಯದ ಬಗ್ಗೆ ಸಂಸದರಿಗೆ ಮನದಟ್ಟಾಗುತ್ತದೆ. ಯಾರು ಉಪರಾಷ್ಟ್ರಪತಿಯಾಗಲು ಸೂಕ್ತ ಎಂಬುದನ್ನೂ ನಿರ್ಧರಿಸಲು ಸಾಧ್ಯ. ಇದನ್ನು ಚರ್ಚೆಯೆಂದು ಭಾವಿಸದೇ, ಜಂಟಿ ಸಂವಾದವೆಂದು ಭಾವಿಸಿದರೆ ಸಾಕು ಎಂದಿದ್ದಾರೆ ಗಾಂಧಿ. ಈ ನಡುವೆ, ತಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿರುವ ಪ್ರತಿಪಕ್ಷಗಳ ವಿರುದ್ಧ ವೆಂಕಯ್ಯ ನಾಯ್ಡು ಕಿಡಿಕಾರಿದ್ದಾರೆ. ಕೆಸರಲ್ಲಿ ಇರುವವರಿಗೆ ಬಿಳಿ ಶರ್ಟು, ಪಂಚೆ ಧರಿಸಿದವರನ್ನು ಕಂಡರೆ ಆಗದು. ನನ್ನ ಮಗನ ವಹಿವಾಟಿನಲ್ಲಿ ನಾನು ಹಸ್ತಕ್ಷೇಪ ಮಾಡಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ