ನಾನು ಸ್ವರ್ಗದಲ್ಲಿ ಸಂತೋಷವಾಗಿದ್ದೇನೆ… ಜೈಲಿನಲ್ಲಿದ್ದುಕೊಂಡೇ ಲೈವ್ ವಿಡಿಯೋ ಮಾಡಿದ ಆರೋಪಿ
Team Udayavani, Mar 15, 2024, 3:56 PM IST
ಉತ್ತರಪ್ರದೇಶ: ಕೊಲೆ ಪ್ರಕರಣದಲ್ಲಿ ಉತ್ತರಪ್ರದೇಶದ ಬರೇಲಿಯ ಕೇಂದ್ರ ಕಾರಾಗ್ರಹದಲ್ಲಿ ಕಂಬಿ ಎಣಿಸುತ್ತಿರುವ ಆರೋಪಿಯೋರ್ವ ಜೈಲಿನಲ್ಲಿ ಇದ್ದುಕೊಂಡೇ ಲೈವ್ ವಿಡಿಯೋ ಹರಿಬಿಟ್ಟ ಘಟನೆ ಬೆಳಕಿಗೆ ಬಂದಿದ್ದು ಇದರ ಬೆನ್ನಲ್ಲೇ ಜೈಲಿನಲ್ಲಿ ಆರೋಪಿಗಳಿಗೆ ಯಾವ ರೀತಿಯ ಅನುಕೂಲಗಳು ಸಿಗುತ್ತವೆ ಎಂಬ ಕುರಿತು ಸಾರ್ವಜನಿಕರಲ್ಲಿ ಅನುಮಾನಗಳು ಕಾಡತೊಡಗಿದೆ.
ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿದ ಹಿರಿಯ ಪೊಲೀಸ್ ಅಧಿಕಾರಿ ಪ್ರಕರಣದ ಬಗ್ಗೆ ತನಿಖೆ ನಡೆಸಿ ಒಂದು ವೇಳೆ ಜೈಲು ಅಧಿಕಾರಿಗಳು ತಪ್ಪು ಎಸಗಿರುವುದು ಕಂಡು ಬಂದರೆ ಅವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಏನಿದು ಪ್ರಕರಣ:
2019 ರ ಡಿಸೆಂಬರ್ 2 ರಂದು ದೆಹಲಿಯ ಶಹಜಾನ್ಪುರದ ಸದರ್ ಬಜಾರ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಗುತ್ತಿಗೆದಾರ ರಾಕೇಶ್ ಯಾದವ್ (34) ಅವರನ್ನು ಹಾಡಹಗಲೇ ಗುಂಡಿಕ್ಕಿ ಕೊಂದ ಆರೋಪಿಯಾಗಿರುವ ಆಸಿಫ್ ನನ್ನ ಬಂಧಿಸಿ ಉತ್ತರಪ್ರದೇಶದ ಬರೇಲಿಯ ಕೇಂದ್ರ ಕಾರಾಗ್ರಹದಲ್ಲಿ ಇರಿಸಲಾಗಿದೆ ಇದೀಗ ಆತ ಜೈಲಿನಲ್ಲಿ ಇದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಎರಡು ನಿಮಿಷಗಳ ವಿಡಿಯೋ ಒಂದು ಹರಿಬಿಟ್ಟಿದ್ದಾನೆ ಅದರಲ್ಲಿ ನಾನು ಸ್ವರ್ಗದಲ್ಲಿದ್ದು ಎಂಜಾಯ್ ಮಾಡುತಿದ್ದೇನೆ ಇನ್ನು ಕೆಲವೇ ದಿನದಲ್ಲಿ ಹೊರಗೆ ಬರಲಿದ್ದೇನೆ ಎಂದು ಹೇಳುವ ವಿಡಿಯೋ ವೈರಲ್ ಆಗಿದೆ.
ಈ ವಿಡಿಯೋ ಲೈವ್ ಆಗುತ್ತಿದ್ದಂತೆ ರಾಕೇಶ್ ಯಾದವ್ ಅವರ ಸಹೋದರ ಜಿಲ್ಲಾಧಿಕಾರಿ ಉಮೇಶ್ ಪ್ರತಾಪ್ ಸಿಂಗ್ ಅವರನ್ನು ಭೇಟಿ ಮಾಡಿ ಜೈಲಿನಲ್ಲಿರುವ ಆರೋಪಿಗಳಿಗೆ ಉತ್ತಮ ಸೌಲಭ್ಯ ನೀಡಲಾಗುತ್ತಿದೆ ಅಲ್ಲದೆ ಅವರಿಗೆ ಬೇಕಾದ ಮೊಬೈಲ್ ಹಾಗೂ ಇನ್ನಿತರ ವ್ಯವಸ್ಥೆಗಳನ್ನು ಒದಗಿಸಲಾಗುತ್ತಿದೆ ಎಂದು ದೂರು ನೀಡಿದ್ದಾರೆ.
ಸದ್ಯ ಈ ವಿಡಿಯೋ ಕುರಿತು ಮಾಹಿತಿ ನೀಡಿದ ಡೆಪ್ಯುಟಿ ಇನ್ಸ್ಪೆಕ್ಟರ್ ಜನರಲ್ ಕುಂತಲ್ ಕಿಶೋರ್ ಜೈಲಿನಲ್ಲಿ ಮಾಡಿದ್ದಾರೆ ಎನ್ನಲಾದ ವಿಡಿಯೋ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
रामराज्य हैं
उत्तर प्रदेश बरेली जेल में बन्द जेल में बंद आरोपी का वीडियो वायरल PWD ठेकेदार हत्याकांड का आरोपी जेल में है बंद जेल में बंद आरोपी का लाइव वीडियो चैट वायरल,, pic.twitter.com/8yZOg1m2xK— Mαɳιʂԋ Kυɱαɾ αԃʋσƈαƚҽ 🇮🇳🇮🇳 (@Manishkumarttp) March 14, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು