BJP V/s AAP: ಸಾಮೂಹಿಕ ಮತಾಂತರ; ಬೌದ್ಧ ಧರ್ಮ ಸ್ವೀಕರಿಸಿದ ಆಪ್ ಸಚಿವ ಗೌತಮ್ ವಿಡಿಯೋ ವೈರಲ್
ಕೂಡಲೇ ಸಚಿವ ಗೌತಮ್ ಅವರನ್ನು ಸಚಿವ ಸ್ಥಾನದಿಂದ ಆಪ್ ವಜಾಗೊಳಿಸಲಿ ಎಂದು ಒತ್ತಾಯಿಸಿದೆ.
Team Udayavani, Oct 7, 2022, 4:28 PM IST
ನವದೆಹಲಿ: ಇತ್ತೀಚೆಗೆ ನಡೆದ ಸಾಮೂಹಿಕ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ಸಚಿವ ರಾಜೇಂದ್ರ ಪಾಲ್ ಗೌತಮ್ ಭಾಗವಹಿಸಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾವಿರಾರು ಮಂದಿ ತಾವು ಹಿಂದೂ ದೇವರು ಮತ್ತು ದೇವತೆಗಳನ್ನು ಪೂಜಿಸುವುದಿಲ್ಲ ಎಂದು ಪ್ರತಿಜ್ಞೆ ಸ್ವೀಕರಿಸಿರುವ ವಿಡಿಯೋ ಕ್ಲಿಪ್ ವೈರಲ್ ಆಗಿದ್ದು, ಇದು ಬಿಜೆಪಿ ಮತ್ತು ಆಪ್ ನಡುವೆ ಜಟಾಪಟಿಗೆ ಕಾರಣವಾಗಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:21 ವರ್ಷಗಳ ಹಿಂದೆ ಸಿಎಂ ಆಗಿ ಮೊದಲ ಬಾರಿ ಮೋದಿ ಪ್ರಮಾಣ ವಚನ ಸ್ವೀಕಾರ
1956ರ ಅಕ್ಟೋಬರ್ ನಲ್ಲಿ ಡಾ.ಬಿಆರ್ ಅಂಬೇಡ್ಕರ್ ಅವರು ತಮ್ಮ ಸಾವಿರಾರು ಮಂದಿ ಅನುಯಾಯಿಗಳ ಜತೆಗೂಡಿ ಬೌದ್ಧ ಧರ್ಮವನ್ನು ಸ್ವೀಕರಿಸಿದ ಹಿನ್ನೆಲೆಯಲ್ಲಿ ಮುಂಬೈನಲ್ಲಿ ಪ್ರತಿ ವರ್ಷ ಧರ್ಮಚಕ್ರ ಪ್ರವರ್ತನ್ ದಿನವನ್ನಾಗಿ ಆಚರಿಸಿ ಸಾಮೂಹಿಕ ಮತಾಂತರ ಕಾರ್ಯಕ್ರಮ ನಡೆಸಲಾಗುತ್ತಿದೆ.
ಮುಂಬೈನಲ್ಲಿ ಅಕ್ಟೋಬರ್ 5ರಂದು ನಡೆದ ಸಾಮೂಹಿಕ ಮತಾಂತರ ಕಾರ್ಯಕ್ರಮದಲ್ಲಿ ಆಪ್ ಸಚಿವ ಸೇರಿದಂತೆ ಸಾವಿರ ಮಂದಿ ಭಾಗವಹಿಸಿದ್ದು, ನಮಗೆ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರನಲ್ಲಿ ನಂಬಿಕೆ ಇಲ್ಲ. ಅವರನ್ನು ಪೂಜಿಸುವುದಿಲ್ಲ ಎಂದು ಪ್ರತಿಜ್ಞೆ ಕೈಗೊಂಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.
ಈ ಕಾರ್ಯಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಭಾರತೀಯ ಜನತಾ ಪಕ್ಷ, ಇದು ಹಿಂದೂ ಮತ್ತು ಬೌದ್ಧ ಧರ್ಮಕ್ಕೆ ಮಾಡಿದ ಅಪಮಾನ ಎಂದು ತಿಳಿಸಿದೆ. ಆಮ್ ಆದ್ಮಿ ಪಕ್ಷದ ಸಚಿವರು ಗಲಭೆ ನಡೆಯಲು ಸಂಚು ನಡೆಸಿರುವುದಾಗಿ ಬಿಜೆಪಿ ದೂರಿದ್ದು, ಕೂಡಲೇ ಸಚಿವ ಗೌತಮ್ ಅವರನ್ನು ಸಚಿವ ಸ್ಥಾನದಿಂದ ಆಪ್ ವಜಾಗೊಳಿಸಲಿ ಎಂದು ಒತ್ತಾಯಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Politics: ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ: ಎಚ್.ವಿಶ್ವನಾಥ್
Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ
D. K. Shivakumar: ಡಿಕೆಶಿ ರಕ್ಷಿಸಲೆಂದೇ ಸಿಬಿಐಗೆ ನೀಡಿದ್ದ ಅನುಮತಿ ವಾಪಸ್
Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್
Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ