ಹಾಡಹಗಲೇ ಕಾಲೇಜು ಆವರಣದಲ್ಲಿಯೇ ವಿದ್ಯಾರ್ಥಿನಿಗೆ ಗುಂಡಿಟ್ಟು ಹತ್ಯೆ, ಆರೋಪಿ ಬಂಧನ
ಅಂತಿಮ ವರ್ಷದ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದು, ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ್ದಳು.
Team Udayavani, Oct 27, 2020, 2:57 PM IST
ಫರಿದಾಬಾದ್: ಹಾಡಹಗಲೇ ಕಾಲೇಜು ಆವರಣದಲ್ಲಿಯೇ 21 ವರ್ಷದ ಯುವತಿಯನ್ನು ಗುಂಡಿಟ್ಟು ಹತ್ಯೆಗೈದ ಘಟನೆ ಸೋಮವಾರ (ಅಕ್ಟೋಬರ್ 27, 2020) ಹರ್ಯಾಣದಲ್ಲಿ ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಾರಿನಲ್ಲಿ ಆಗಮಿಸಿದ್ದ ದುಷ್ಕರ್ಮಿಗಳು ಯುವತಿಯನ್ನು ಅಪಹರಿಸಲು ಯತ್ನಿಸಿದ್ದರು. ಆದರೆ ಅದಕ್ಕೆ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ಪಾಯಿಂಟ್ ಬ್ಲ್ಯಾಂಕ್ ರೇಂಜ್ ನಲ್ಲಿ ಗುಂಡಿಟ್ಟು ಹತ್ಯೆಗೈದಿರುವ ದೃಶ್ಯ ವಿಡಿಯೋದಲ್ಲಿ ದಾಖಲಾಗಿದೆ ಎಂದು ವರದಿ ತಿಳಿಸಿದೆ.
ದೆಹಲಿಯಿಂದ 30 ಕಿಲೋ ಮೀಟರ್ ದೂರದಲ್ಲಿರುವ ಹರ್ಯಾಣದ ಫರಿದಾಬಾದ್ ನ ಬಲ್ಲಾಬ್ ಗಢ್ ಕಾಲೇಜಿನ ಹೊರಭಾಗದಲ್ಲಿ ಸೋಮವಾರ ಮಧ್ಯಾಹ್ನ 3.40ಕ್ಕೆ ಈ ಕೊಲೆ ಕೃತ್ಯ ನಡೆದಿದೆ. ನಿಖಿತಾ ಟೋಮರ್ ಅಂತಿಮ ವರ್ಷದ ಕಾಮರ್ಸ್ ವಿದ್ಯಾರ್ಥಿನಿಯಾಗಿದ್ದು, ಪರೀಕ್ಷೆ ಬರೆಯಲು ಕಾಲೇಜಿಗೆ ತೆರಳಿದ್ದಳು.
ಪರೀಕ್ಷೆ ಬರೆದು ಕಾಲೇಜಿನಿಂದ ಹೊರಗೆ ಬರುತ್ತಿರುವುದನ್ನೇ ತೌಸೀಫ್ ಮತ್ತು ಆತನ ಗೆಳೆಯ ರೇಹಾನ್ ಕಾರಿನಲ್ಲಿ ಕಾಯುತ್ತಿದ್ದರು. ತೌಸೀಫ್ ಹಾಗೂ ನಿಖಿತಾ ಒಬ್ಬರಿಗೊಬ್ಬರು ಪರಿಚಿತರಾಗಿದ್ದು, 2018ರಲ್ಲಿಯೂ ಆಕೆಯನ್ನು ಕಿಡ್ನಾಪ್ ಮಾಡಿರುವುದಾಗಿ ಪೊಲೀಸ್ ಅಧಿಕಾರಿ ಓಪಿ ಸಿಂಗ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ