ಕರ್ತವ್ಯ ನಿರ್ವಹಣೆಯಲ್ಲಿ ಲೋಪ : ಪೊಲೀಸ್ ಸಿಬ್ಬಂದಿಗಳನ್ನೇ ಜೈಲಿಗೆ ಹಾಕಿದ ಪೊಲೀಸ್ ಅಧಿಕಾರಿ
ಪೊಲೀಸ್ ಅಧಿಕಾರಿಯ ಕಾರ್ಯಕ್ಕೆ ವ್ಯಾಪಕ ಆಕ್ರೋಶ
Team Udayavani, Sep 11, 2022, 8:11 AM IST
ಪಾಟ್ನಾ : ಯಾವುದೇ ಒಂದು ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿಗಳನ್ನು ಜೈಲಿಗೆ ಹಾಕುವುದು ಸಾಮಾನ್ಯ… ಆದರೆ ಕರ್ತವ್ಯ ನಿರ್ವಹಣೆಯಲ್ಲಿ ಲೋಪವೆಸಗಿದ್ದಾರೆ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತನ್ನ ಐದು ಮಂದಿ ಠಾಣೆಯ ಸಿಬ್ಬಂದಿಗಳನ್ನೇ ಜೈಲಿಗೆ ಹಾಕಿದ ಘಟನೆ ನಡೆದಿದೆ.
ಅಂದಹಾಗೆ ಈ ಘಟನೆ ನಡೆದಿರುವುದು ಬಿಹಾರದ ನಾವಾಡ ಪಟ್ಟಣದಲ್ಲಿ, ಅಲ್ಲದೆ ಈ ಘಟನೆಯ ದೃಶ್ಯವೂ ಕೂಡ ಠಾಣೆಯಲ್ಲಿ ಹಾಕಲಾದ ಸಿಸಿಟಿವಿ ಯಲ್ಲಿ ಸೆರೆಯಾಗಿದೆ.
ಸಬ್-ಇನ್ಸ್ಪೆಕ್ಟರ್ಗಳಾದ ಶತ್ರುಘ್ನ ಪಾಸ್ವಾನ್ ಮತ್ತು ರಾಮ್ರೇಖಾ ಸಿಂಗ್, ಎಎಸ್ಐ ಗಳಾದ ಸಂತೋಷ್ ಪಾಸ್ವಾನ್, ಸಂಜಯ್ ಸಿಂಗ್ ಮತ್ತು ರಾಮೇಶ್ವರ್ ಉರೌನ್ ಈ ಐವರು ಜೈಲಿನಲ್ಲಿರುವ ಸಿಬಂದಿಗಳು.
ಹಿರಿಯ ಪೊಲೀಸ್ ಅಧಿಕಾರಿಯ ಕಾರ್ಯವೈಖರಿಗೆ ದೇಶಾದ್ಯಂತ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿದ್ದು… ಇದೊಂದು ವಿಷಾದಕರ ಬೆಳವಣಿಗೆ ಬಿಹಾರದ ಪೊಲೀಸ್ ಸಿಬ್ಬಂದಿಗಳ ಸಂಘ ಹೇಳಿಕೊಂಡಿದ್ದು ಅಲ್ಲದೆ ಈ ಘಟನೆಯ ಬಗ್ಗೆ ಕೂಲಂಕುಷ ತನಿಖೆ ನಡೆಸಬೇಕೆಂದು ಮನವಿ ಮಾಡಿದೆ.
ಪೊಲೀಸ್ ಸಿಬ್ಬಂದಿ ನಿರೀಕ್ಷೆಯಂತೆ ಕೆಲಸ ಮಾಡುತ್ತಿಲ್ಲ ಎನ್ನುವ ಕಾರಣಕ್ಕೆ ಅಧಿಕಾರಿಯು ಅವರನ್ನು ಲಾಕಪ್ಗೆ ದೂಡಿ, ಬೀಗ ಜಡಿದಿದ್ದಾರೆ. ಪೊಲೀಸರು ಲಾಕಪ್ನಲ್ಲಿರುವ ವಿಡಿಯೊ ಇದೀಗ ವೈರಲ್ ಆಗಿದ್ದು, ಸಾವಿರಾರು ಮಂದಿ ಆಕ್ಷೇಪಿಸಿದ್ದಾರೆ. ‘ಇದು ವಿಷಾದಕರ ಬೆಳವಣಿಗೆ’ ಎಂದು ಹೇಳಿರುವ ಬಿಹಾರದ ಪೊಲೀಸ್ ಸಿಬ್ಬಂದಿಯ ಸಂಘ ‘ಬಿಹಾರ ಪೊಲೀಸ್ ಒಕ್ಕೂಟ’ವು ಘಟನೆಯ ಬಗ್ಗೆ ವಿಸ್ತೃತ ತನಿಖೆ ನಡೆಯಬೇಕು. ಎಸ್ಪಿ ಗೌರವ್ ಮಂಗ್ಲಾ ಅವರ ಕಾರ್ಯವೈಖರಿಯ ಬಗ್ಗೆ ಪರಿಶೀಲನೆ ನಡೆಯಬೇಕಿದೆ ಎಂದು ಆಗ್ರಹಿಸಿದೆ.
ಈ ಕುರಿತು ಹೇಳಿಕೆ ನೀಡಿರುವ ಎಸ್ಪಿ ಗೌರವ್ ಮಂಗ್ಲಾ ಕೆಲವು ಸಿಬ್ಬಂದಿಗಳು ತಮ್ಮ ಕರ್ತವ್ಯದಲ್ಲಿ ಲೋಪವೆಸಗಿದ್ದಾರೆ ಅದಕ್ಕಾಗಿ ಅವರನ್ನು ಜೈಲಿಗೆ ಹಾಕಿದ್ದೆ ಮಾಧ್ಯಮಗಳು ಅದನ್ನು ದೊಡ್ಡ ಅಪರಾಧವೆಂಬಂತೆ ಬಿಂಬಿಸುತ್ತಿವೆ ಎಂದು ಹೇಳಿದ್ದಾರೆ.. ಅಲ್ಲದೆ ಠಾಣೆಯ ಜವಾಬ್ದಾರಿ ಹೊತ್ತಿರುವ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಸಿಂಗ್ ಸಹ ಎಸ್ಪಿ ಹೇಳಿಕೆಯನ್ನು ಪುಷ್ಟೀಕರಿಸಿದ್ದಾರೆ.
ಇದನ್ನೂ ಓದಿ : ಏಷ್ಯಾ ಕಪ್ ಕ್ರಿಕೆಟ್: ಫೈನಲ್ ಸೆಣಸಾಟಕ್ಕೆ ಲಂಕಾ, ಪಾಕ್ ಸನ್ನದ್ಧ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್