
ಬೇಟಿ ಬಚಾವೋ ಮಹಾಪಂಚಾಯತ್ ಸಭಾ ಕಾರ್ಯಕ್ರಮದಲ್ಲಿ ಮಹಿಳೆಯಿಂದ ವ್ಯಕ್ತಿಗೆ ಚಪ್ಪಲಿ ಏಟು!
ತನ್ನ ಮಗಳ ವಿಷಯದ ಕುರಿತು ಮಾತನಾಡಲು ಮಹಿಳೆ ವೇದಿಕೆ ಏರಿದ್ದಳು.
Team Udayavani, Nov 29, 2022, 3:52 PM IST

ನವದೆಹಲಿ: ದೇಶವನ್ನೇ ಬೆಚ್ಚಿಬೀಳಿಸಿದ್ದ ಶ್ರದ್ದಾ ವಾಲ್ಕರ್ ಪ್ರಕರಣ ಕುರಿತಂತೆ “ಬೇಟಿ ಬಚಾವೋ ಮಹಾಪಂಚಾಯತ್” ಕರೆದಿದ್ದ ಸಭೆಯಲ್ಲಿ ಮಹಿಳೆಯೊಬ್ಬರು ತನ್ನ ಮಗಳು ನಾಪತ್ತೆಯಾದ ಪ್ರಕರಣದಲ್ಲಿ ಪೊಲೀಸರ ನಿಷ್ಕ್ರಿಯತೆ ಬಗ್ಗೆ ಮಾತನಾಡಿದ್ದು, ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬನಿಗೆ ಬಹಿರಂಗವಾಗಿಯೇ ಚಪ್ಪಲಿಯಲ್ಲಿ ಹೊಡೆದ ಘಟನೆ ದೆಹಲಿಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇದನ್ನೂ ಓದಿ:ಬೈಕ್ ಅಪಘಾತ…ಜ್ಞಾಪಕ ಶಕ್ತಿ ಕಳೆದುಕೊಂಡ ಪತಿ, ಪತ್ನಿ ಬಳಿಯೇ ಮತ್ತೆ ವಿವಾಹವಾಗುವಂತೆ ಪ್ರಸ್ತಾಪ!
ಚಪ್ಪಲಿಯಲ್ಲಿ ಪೆಟ್ಟು ತಿಂದ ವ್ಯಕ್ತಿಯ ಮಗ, ಆಕೆಯ ಮಗಳೊಂದಿಗೆ ಓಡಿಹೋಗಿದ್ದ ಎಂದು ವರದಿ ವಿವರಿಸಿದೆ. ಹಿಂದೂ ಏಕ್ತಾ ಮಂಚ್ ಆಯೋಜಿಸಿದ್ದ ಬೇಟಿ ಬಚಾವೋ ಮಹಾಪಂಚಾಯತ್ ಕಾರ್ಯಕ್ರಮದಲ್ಲಿ ತನ್ನ ಮಗಳ ವಿಷಯದ ಕುರಿತು ಮಾತನಾಡಲು ಮಹಿಳೆ ವೇದಿಕೆ ಏರಿದ್ದಳು. ಆಗ ಆಕೆ ತನ್ನ ಮಗನ ಬಗ್ಗೆ ವಿಷಯ ಪ್ರಸ್ತಾಪಿಸದಂತೆ ತಡೆಯಲು ವ್ಯಕ್ತಿ ಮುಂದಾದಾಗ, ಮಹಿಳೆ ಚಪ್ಪಲಿಯಿಂದ ಹೊಡೆದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
#WATCH | Chattarpur, Delhi: Woman climbs up the stage of Hindu Ekta Manch’s program ‘Beti Bachao Mahapanchayat’ to express her issues; hits a man with her slippers when he tries to push her away from the mic pic.twitter.com/dGrB5IsRHT
— ANI (@ANI) November 29, 2022
“ನಾನು ಕಳೆದ ಐದು ದಿನಗಳಿಂದ ಪೊಲೀಸ್ ಠಾಣೆಗೆ ಅಲೆಯುತ್ತಿದ್ದೇನೆ. ಆದರೆ ಯಾರೊಬ್ಬರೂ ನನ್ನ ದೂರನ್ನು ಕೇಳುತ್ತಿಲ್ಲ ಎಂದು ಮಹಿಳೆ ಮೈಕ್ ನಲ್ಲಿ ಹೇಳುತ್ತಿದ್ದು, ಆಗ ಆಕೆಯನ್ನು ತಡೆಯಲು ಯತ್ನಿಸಿದ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆದಿದ್ದಾಳೆ.
ದೆಹಲಿಯಲ್ಲಿ ಅಫ್ತಾಬ್ ಪೂನಾವಾಲ ತನ್ನ ಲಿವ್ ಇನ್ ರಿಲೆಷನ್ ಶಿಪ್ ನ ಶ್ರದ್ಧಾ ವಾಲ್ಕರ್ ಳನ್ನು ದಾರುಣವಾಗಿ ಅಂತ್ಯಕಾಣಿಸಿದ್ದ. ಈ ಘಟನೆಯ ಆಘಾತದಲ್ಲಿರುವ ನಡುವೆಯೇ ಮತ್ತೊಂದು ಪ್ರಕರಣ ವರದಿಯಾಗಿತ್ತು. ಇದೀಗ ಮಹಿಳೆಯ ಮಗಳು ನಾಪತ್ತೆಯಾಗಿದ್ದು, ಪೊಲೀಸರಿಗೆ ದೂರು ನೀಡಿದ್ದರು ಯಾವುದೇ ಕ್ರಮ ತೆಗೆದುಕೊಳ್ಳಲಿಲ್ಲ ಎಂಬುದಾಗಿ ಮಹಿಳೆ ಆರೋಪಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ

Union Budget 2023: ಈ ಬಾರಿ ಬಜೆಟ್ ನಲ್ಲಿ ಯಾವುದು ದುಬಾರಿ, ಯಾವುದು ಅಗ್ಗ?

Union Budget 2023: ಆದಾಯ ತೆರಿಗೆಯಲ್ಲಿ ಭಾರಿ ಬದಲಾವಣೆ; 7 ಲಕ್ಷದವರೆಗೆ ಟ್ಯಾಕ್ಸ್ ಕಟ್ಟಬೇಕಿಲ್ಲ

ಮದ್ಯದಂಗಡಿಗಳನ್ನು ಗೋಶಾಲೆಗಳಾಗಿ ಪರಿವರ್ತಿಸಿ: ಬಿಜೆಪಿ ನಾಯಕಿ ಉಮಾ ಭಾರತಿ

ತಮಿಳುನಾಡು: ನಡು ರಸ್ತೆಯಲ್ಲೇ ಹಿಂದೂ ಮಕ್ಕಳ್ ಕಚ್ಚಿ ಪಕ್ಷದ ಮುಖಂಡನ ಥಳಿಸಿ ಹತ್ಯೆ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಉಳ್ಳಾಲ: ನೇಣು ಬಿಗಿದ ಸ್ಥಿತಿಯಲ್ಲಿ ವಿಶೇಷಚೇತನ ಯುವತಿಯ ಶವ ಪತ್ತೆ

ಬಜೆಟ್ ನಲ್ಲಿ ಅಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳಿಗೆ ಸಮಾನ ಅವಕಾಶ: ಸುನಿಲ್ ಕುಮಾರ್

ಸಿ.ಡಿ ವಿಚಾರದಲ್ಲಿ ಡಿಕೆಶಿ ಕಾಂಗ್ರೆಸ್ ನಾಯಕರ ಬಾಯಿ ಮುಚ್ಚಿಸಿದ್ದಾರೆ: ಈಶ್ವರಪ್ಪ

ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್ ನಲ್ಲಿ 5300 ಕೋಟಿ ಘೋಷಣೆ ಸ್ವಾಗತಾರ್ಹ: ಸಿಎಂ ಬೊಮ್ಮಾಯಿ

Union Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ