ನಿರಾತಂಕವಾಗಿ ನಡೆದ ಸಮೀಕ್ಷೆ; ಇಂದು ಜ್ಞಾನವಾಪಿ 2ನೇ ಸುತ್ತಿನ ಸರ್ವೇ

ರವಿವಾರ ಬೆಳಗ್ಗೆಯಿಂದ 2ನೇ ಹಂತದ ಸರ್ವೇ ಆರಂಭ; ಮೇ 17ರೊಳಗೆ ಅಲಹಾಬಾದ್‌ ನ್ಯಾಯಾಲಯಕ್ಕೆ ವರದಿ

Team Udayavani, May 15, 2022, 7:30 AM IST

ನಿರಾತಂಕವಾಗಿ ನಡೆದ ಸಮೀಕ್ಷೆ; ಇಂದು ಜ್ಞಾನವಾಪಿ 2ನೇ ಸುತ್ತಿನ ಸರ್ವೇ

ವಾರಾಣಸಿ: ಭಾರೀ ವಿವಾದಕ್ಕೆ ಕಾರಣ ವಾಗಿರುವ ಉತ್ತರಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದ ವೀಡಿಯೋಗ್ರಫಿ ಸಮೀಕ್ಷೆಯು ಶನಿವಾರ ಬಿಗಿಭದ್ರತೆಯೊಂದಿಗೆ ನಿರಾತಂಕವಾಗಿ ನೆರವೇರಿದೆ.

ಬೆಳಗ್ಗೆ 8 ಗಂಟೆಗೆ ಆರಂಭವಾದ ಸರ್ವೇ ಮಧ್ಯಾಹ್ನ 12ರವರೆಗೆ ಅಂದರೆ ಒಟ್ಟು 4 ಗಂಟೆಗಳ ಕಾಲ ನಡೆದಿದೆ. ಒಟ್ಟು ಶೇ. 40ರಷ್ಟು ಸಮೀಕ್ಷೆ ಪೂರ್ಣಗೊಂಡಿದೆ.

ರವಿವಾರ ಮತ್ತೆ ಸಮೀಕ್ಷೆ ಕಾರ್ಯ ಮುಂದು ವರಿಯಲಿದೆ. ಮಂಗಳವಾರದೊಳಗೆ ವರದಿ ನೀಡುವಂತೆ ವಾರಾಣಸಿಯ ನ್ಯಾಯಾಲಯ ಸೂಚಿಸಿರುವ ಕಾರಣ, ಅಷ್ಟರಲ್ಲಿ ಸರ್ವೇ ಕಾರ್ಯ ಪೂರ್ಣಗೊ ಳ್ಳುವ ಸಾಧ್ಯತೆಯಿದೆ. “ಇಡೀ ಪ್ರಕ್ರಿಯೆಯು ಶಾಂತಿಯುತ ವಾಗಿ ನೆರವೇರಿದೆ. ಯಾರಿಂದಲೂ ಯಾವುದೇ ಆಕ್ಷೇಪ ವ್ಯಕ್ತವಾಗಿಲ್ಲ. ಎಲ್ಲವೂ ಸಹಜವಾ ಗಿತ್ತು, ಎಲ್ಲರೂ ನಮಗೆ ಸಂಪೂರ್ಣ ಸಹಕಾರ ನೀಡಿದ್ದಾರೆ’ ಎಂದು ವಾರಾಣಸಿ ಪೊಲೀಸ್‌ ಆಯುಕ್ತ ಎ.ಸತೀಶ್‌ ಗಣೇಶ್‌ ಹೇಳಿದ್ದಾರೆ.

ಶುಕ್ರವಾರವಷ್ಟೇ ವಿವಾದಕ್ಕೆ ಸಂಬಂಧಪಟ್ಟ ಎಲ್ಲರನ್ನೂ ಕರೆದು ಸಭೆ ನಡೆಸಿ, ಆಯುಕ್ತರಿಗೆ ಸಮೀಕ್ಷೆ ಕೈಗೊಳ್ಳಲು ಸಹಕಾರ ನೀಡುವಂತೆ ಮನವಿ ಮಾಡಲಾಗಿತ್ತು. ಅದಕ್ಕೆ ಎಲ್ಲರೂ ಒಪ್ಪಿಗೆ ಸೂಚಿಸಿದ್ದರು. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಭದ್ರತೆಗೆಂದು 1500ಕ್ಕೂ ಅಧಿಕ ಪೊಲೀಸರು ಮತ್ತು ಪಿಎಸಿ ಯೋಧರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.

“ಯಥಾಸ್ಥಿತಿ ಬದಲಿಸುವುದು ಸರಿಯಲ್ಲ’: ಧಾರ್ಮಿಕ ಕಾರ್ಯಕ್ರಮ ನಡೆಯುವ ಯಾವುದೇ ಪ್ರಾರ್ಥನಾ ಸ್ಥಳಗಳ ಯಥಾಸ್ಥಿತಿ ಯನ್ನು ಬದಲಾಯಿಸುವುದು ಸರಿಯಲ್ಲ. ಅವುಗಳು ಹೇಗಿದೆಯೋ, ಎಲ್ಲಿದೆಯೋ ಹಾಗೆಯೇ ಅಲ್ಲೇ ಇರಲು ಬಿಡಬೇಕು. ಇಲ್ಲ ದಿ ದ್ದರೆ ಅದು ದೊಡ್ಡ ಮಟ್ಟದ ಸಂಘ ರ್ಷಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಪಿ. ಚಿದಂಬರಂ ಅಭಿಪ್ರಾಯಪಟ್ಟಿದ್ದಾರೆ. ಈ ರೀತಿಯ ಸಂಘರ್ಷಗಳನ್ನು ತಡೆಯಲೆಂದೇ ನರಸಿಂಹರಾವ್‌ ಸರಕಾರ “ಧಾರ್ಮಿಕ ಸ್ಥಳಗಳ ಕಾಯ್ದೆ’ಯನ್ನು ಜಾರಿ ಮಾಡಿದ್ದರು ಎಂದೂ ಅವರು ಸ್ಮರಿಸಿದ್ದಾರೆ.

ರಾಜಕೀಯ ಬೇಡ ಮೌರ್ಯ ಮನವಿ
ನ್ಯಾಯಾಲಯದ ಆಣತಿಯ ಮೇರೆಗೆ ಜ್ಞಾನವಾಪಿ ಮಸೀದಿಯಲ್ಲಿ ಸರ್ವೇ ಕಾರ್ಯ ನಡೆಸಲಾಗುತ್ತಿದೆ. ಶಾಂತಿಗೆ ಯಾವುದೇ ಕಾರಣಕ್ಕೂ ಭಂಗವಾಗದಂತೆ ಬಿಗಿ ಬಂದೋಬರ್ಸ್‌ ಏರ್ಪಡಿಸಲಾಗಿದೆ. ಮತ್ತೂಂದೆಡೆ, ಮಥುರಾ ವಿಚಾರದಲ್ಲೂ ಇದೇ ರೀತಿ ನ್ಯಾಯಾಲಯದ ಆದೇಶಗಳನ್ನು ಪಾಲಿಸಲಾಗುತ್ತಿದೆ. ಹಾಗಿದ್ದರೂ, ವಿಪಕ್ಷಗಳು ಮಾತ್ರ ಈ ವಿಚಾರದಲ್ಲಿ ಅನವಶ್ಯಕವಾಗಿ ರಾಜಕೀಯ ಬೆರೆಸುತ್ತಿವೆ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ಹೇಳಿದ್ದಾರೆ.

ಟ್ವಿಟರ್‌ನಲ್ಲಿ ಕಟುವಾಗಿ ಟೀಕಿಸಿರುವ ಅವರು, “”ಜ್ಞಾನವಾಪಿ ವಿಚಾರದಲ್ಲಿ ಹಾಗೂ ಶ್ರೀ ಕೃಷ್ಣ ಜನ್ಮಭೂಮಿ ವಿಚಾರದಲ್ಲಿ ವಿಪಕ್ಷಗಳು ನಡೆಸುವ ಸಾಂಪ್ರದಾಯಿಕ ರಾಜಕಾರಣವನ್ನು ದಯವಿಟ್ಟು ನಿಲ್ಲಿಸಿ. ಇಂಥ ಧಾರ್ಮಿಕ ವಿವಾದಗಳು ಎಲ್ಲೇ ನಡೆಯಲಿ ಕೋರ್ಟ್‌ ಆದೇಶ ಬರುವವರೆಗೆ ಕಾಯಬೇಕು. ಹಾಗೊಮ್ಮೆ ಕೋರ್ಟ್‌ ಆದೇಶ ಬಂದಾಗ ಅದನ್ನು ಎಲ್ಲರೂ ಪಾಲಿಸಬೇಕು” ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.