ಮಲ್ಯ ದೇಶಭ್ರಷ್ಟ ಆರ್ಥಿಕ ಅಪರಾಧಿ
Team Udayavani, Jan 6, 2019, 12:30 AM IST
ಮುಂಬಯಿ: ಇತ್ತೀಚೆಗೆ ಜಾರಿಗೆ ಬಂದ ದೇಶ ಭ್ರಷ್ಟ ಆರ್ಥಿಕ ಅಪರಾಧ ಕಾನೂನಿನ ಅಡಿಯಲ್ಲಿ ಮೊದಲ ಬಾರಿಗೆ ಉದ್ಯಮಿ ವಿಜಯ ಮಲ್ಯರನ್ನು ದೇಶ ಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಗಳ ವಿಶೇಷ ಕೋರ್ಟ್ ಶನಿವಾರ ಈ ಘೋಷಣೆ ಮಾಡಿದೆ. ಇದರಿಂದಾಗಿ ಮಲ್ಯ ಹೊಂದಿರುವ ಯಾವುದೇ ಆಸ್ತಿಯನ್ನು ಸರಕಾರವು ಜಪ್ತಿ ಮಾಡಿ ಕೊಳ್ಳಬಹುದಾಗಿದೆ. ಈ ಸಂಬಂಧ ಜಾರಿ ನಿರ್ದೇಶನಾಲಯ ಜುಲೈನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಭ್ರಷ್ಟಾಚಾರ ನಿಗ್ರಹ ಕೋರ್ಟ್ ಈ ತೀರ್ಪು ನೀಡಿದೆ.
ವಿಶೇಷ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆಗೆ ತಡೆ ನೀಡುವಂತೆ ಬಾಂಬೆ ಹೈಕೋರ್ಟ್ಗೆ ಮಲ್ಯ ಆಗ್ರಹಿಸಿದ್ದರಾದರೂ ಕೋರ್ಟ್ ಅದನ್ನು ತಳ್ಳಿಹಾಕಿತ್ತು. ಸಾಲ ಪಾವತಿಸದೆ ಲಂಡನ್ಗೆ ಪರಾರಿಯಾಗಿರುವ ಮಲ್ಯ ಗಡೀಪಾರು ವಿಚಾರಣೆಯಲ್ಲೂ ಸೋಲುಂಡಿದ್ದಾರೆ.
ಫೆ. 5ರಿಂದ ಆಸ್ತಿ ಜಪ್ತಿ ವಿಚಾರಣೆ
ಪ್ರಕರಣಕ್ಕೆ ಸಂಬಂಧಿಸಿದ ಇನ್ನೊಂದು ಭಾಗದ ವಿಚಾರಣೆ ಫೆ. 5ರಿಂದ ನಡೆಯಲಿದೆ. ಇದರಲ್ಲಿ ಸ್ವತ್ತುಗಳ ಜಪ್ತಿ ಬಗ್ಗೆ ಕೋರ್ಟ್ ವಿಚಾರಣೆ ನಡೆಸಲಿದೆ. 12,500 ಕೋಟಿ ರೂ. ಮೌಲ್ಯದ ಸ್ವತ್ತುಗಳನ್ನು ತತ್ಕ್ಷಣ ವಶಕ್ಕೆ ಪಡೆಯಲು ಅನುಮತಿ ನೀಡಬೇಕೆಂದು ಇಡಿ ಆಗ್ರಹಿಸಿತ್ತಾದರೂ ದೇಶಭ್ರಷ್ಟ ಆರ್ಥಿಕ ಅಪರಾಧಿ ಎಂದು ಘೋಷಿಸುವುದಾಗಿ ಕೋರ್ಟ್ ತೀರ್ಪಿತ್ತಿದೆ.
ಸರಕಾರಕ್ಕೆ ಸಂದ ಜಯ
ಮಲ್ಯ ವಿರುದ್ಧ ವಿಶೇಷ ನ್ಯಾಯಾಲಯದ ತೀರ್ಪನ್ನು ಬಿಜೆಪಿ ಸ್ವಾಗತಿಸಿದ್ದು, ಇದು ಭ್ರಷ್ಟಾಚಾರದ ವಿರುದ್ಧ ಸರಕಾರದ ಕ್ರಮಕ್ಕೆ ಇನ್ನಷ್ಟು ಪುಷ್ಟಿ ನೀಡಿದೆ ಎಂದಿದೆ. ಕಾಂಗ್ರೆಸ್ ಸರಕಾರದ ಪೋಷಣೆಯಲ್ಲಿ ಮಲ್ಯ ಬೆಳೆದಿದ್ದರು ಎಂದು ಬಿಜೆಪಿ ವಕ್ತಾರ ಪಾತ್ರ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ