Goa ಮೋಜಿಗಾಗಿ ಪ್ರವಾಸಿಗರಿಂದ ಟ್ರಾಫಿಕ್ ನಿಯಮಗಳ ಉಲ್ಲಂಘನೆ
Team Udayavani, Apr 26, 2023, 6:13 PM IST
ಪಣಜಿ: ಮೋಜಿಗಾಗಿ ಗೋವಾಕ್ಕೆ ಬರುವ ಕೆಲವು ಪ್ರವಾಸಿಗರು ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಹೆಚ್ಚಾಗಿ ಕಂಡು ಬರುತ್ತಿದೆ. ಇಂತಹ ಘಟನೆಗಳು ಹಲವು ಬಾರಿ ನಡೆದಿವೆ. ಘಟನೆಯ ವಿಡಿಯೋಗಳು ಕೂಡ ವೈರಲ್ ಆಗಿವೆ. ಸಂಬಂಧಪಟ್ಟವರ ವಿರುದ್ಧವೂ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಏತನ್ಮಧ್ಯೆ, ಇದೇ ರೀತಿಯ ಘಟನೆಯು ಪ್ರಸ್ತುತ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಕೆಲವು ಪ್ರವಾಸಿಗರು ಬಾಡಿಗೆ ಕ್ಯಾಬ್ನ ಮೇಲೆ ಹತ್ತಿ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ. ಈ ವಿಡಿಯೋದ ಪ್ರಕಾರ, ಬಾಡಿಗೆ ಕ್ಯಾಬ್ನ ಮೇಲೆ ಇಬ್ಬರು ಯುವಕರು ನೃತ್ಯ ಮಾಡುತ್ತಿದ್ದಾರೆ. ಕಾರಿನ ಎರಡು ಬಾಗಿಲುಗಳು ತೆರೆದಿವೆ ಮತ್ತು ಇಬ್ಬರು ಕಾರಿನ ಮೇಲೆ ನೃತ್ಯ ಮಾಡುತ್ತಿದ್ದಾರೆ, ಯಾರೋ ಅವರ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದಾರೆ. ಇದೇ ವೇಳೆ ಇದೇ ಘಟನೆಯ ವಿಡಿಯೋವನ್ನು ಸ್ಥಳೀಯರು ಚಿತ್ರೀಕರಿಸಿದ್ದಾರೆ. ವಿಡಿಯೋದಲ್ಲಿ, ನೋಂದಣಿಯ ಮಹೀಂದ್ರ ಥಾರ್ ಬಾಡಿಗೆ ಕ್ಯಾಬ್ ಆಗಿದೆ.
ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲೆಡೆ ವೈರಲ್ ಆಗಿದೆ. ಪ್ರವಾಸಿಗರು ಈ ರೀತಿ ಸಾರಿಗೆ ನಿಯಮಗಳನ್ನು ಉಲ್ಲಂಘನೆ ಮಾಡಿ ಮೋಜು ಮಸ್ತಿ ನಡೆಸುತ್ತಿರುವುದನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಗೋವಾದ ಜನತೆ ಖಂಡಿಸಿದ್ದಾರೆ. ಆದರೆ ಈ ವೀಡಿಯೊ ಗೋವಾದ ಯಾವ ಭಾಗದಲ್ಲಿ ನಡೆದ ಘಟನೆಯಾಗಿದೆ ಎಂಬುದರ ಕುರಿತು ಹೆಚ್ಚಿನ ಮಾಹಿತಿ ಲಭಿಸಿಲ್ಲ. ಆದರೆ ಇಂತಹ ಘಟನೆಗಳು ಗೋವಾದಲ್ಲಿ ನಿತ್ಯವೂ ನಡೆಯುತ್ತಿದ್ದು, ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರು ಸಂಚಾರ ನಿಯಮ ಉಲ್ಲಂಘಿಸಿ ವಿಚಿತ್ರ ಕೆಲಸಗಳನ್ನು ಮಾಡುತ್ತಿರುವುದು ಕಂಡು ಬರುತ್ತಿದೆ. ಕೆಲವೊಮ್ಮೆ ತೆರೆದ ವಾಹನಗಳಲ್ಲಿ ಹಾಡು ನೃತ್ಯ ಮಾಡುತ್ತ ಸಾಗುವುದು, ಅಲ್ಲದೆ, ಕೆಲವೊಮ್ಮೆ ಪ್ರವಾಸಿಗರು ಬೀಚ್ಗೆ ವಾಹನಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ ಗೋವಾದಲ್ಲಿ ಎಲ್ಲವೂ ನಡೆಯುತ್ತಾ? ಗೋವಾದಲ್ಲಿ ಪ್ರವಾಸಿಗರು ಬಂದು ಬೇಕಾಬಿಟ್ಟಿ ಮೋಜು ಮಸ್ತಿ ಮಾಡಬಹುದಾ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನತೆ ಪ್ರಶ್ನಿಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’