ಪಶ್ಚಿಮ ಬಂಗಾಲದಲ್ಲಿ ಬಿಜೆಪಿ ವಿಜಯೋತ್ಸವದ ವೇಳೆ ಹಿಂಸಾಚಾರ
Team Udayavani, Jun 9, 2019, 6:00 AM IST
ಕೋಲ್ಕತಾ: ಪಶ್ಚಿಮ ಬಂಗಾಲ ದಲ್ಲಿ ಶನಿವಾರ ಬಿಜೆಪಿ ವಿಜಯೋತ್ಸವವು ಹಿಂಸಾಚಾರಕ್ಕೆ ತಿರುಗಿದ ಪರಿಣಾಮ, ಪೊಲೀಸರು ಸೇರಿದಂತೆ ಹಲವರು ಗಾಯಗೊಂಡ ಘಟನೆ ನಡೆದಿದೆ.
ವಿಜಯೋತ್ಸವಕ್ಕೆ ರಾಜ್ಯ ಸರಕಾರ ಅನುಮತಿ ನಿರಾಕರಿಸಿದ್ದರೂ, ಬಿಜೆಪಿ ಅದಕ್ಕೆ ಕ್ಯಾರೇ ಎನ್ನದೆ ಮೆರವಣಿಗೆ ಆರಂಭಿಸಿತ್ತು. ಈ ವೇಳೆ ಏಕಾಏಕಿ ಪೊಲೀಸರು ಮತ್ತು ಬಿಜೆಪಿ ಕಾರ್ಯ ಕರ್ತರ ನಡುವೆ ಘರ್ಷಣೆ ನಡೆದು, ಬುನಿಯಾದ್ಪುರ ಮತ್ತು ಗಂಗಾರಾಂ ಪುರದಲ್ಲಿ ಸತತ 3 ಗಂಟೆಗಳ ಕಾಲ ಪರಿಸ್ಥಿತಿ ವಿಕೋಪಕ್ಕೆ ತಿರುಗಿತು.
ಪೊಲೀಸರು ಲಾಠಿಪ್ರಹಾರ ನಡೆಸಿ ದ್ದಲ್ಲದೆ, ಅಶ್ರುವಾಯು ಸಿಡಿಸಿ ಕಾರ್ಯ ಕರ್ತರನ್ನು ಚದುರಿಸಲು ಯತ್ನಿಸಿದರು. ಘಟನೆಯಲ್ಲಿ ಪೊಲೀಸರು ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ಹಲವು ಪೊಲೀಸ್ ವಾಹನಗಳಿಗೆ ಹಾನಿ ಉಂಟಾ ಗಿದೆ. ಘಟನೆಗೆ ಟಿಎಂಸಿ ಕಾರಣ ಎಂದು ಬಿಜೆಪಿ ಆರೋಪಿಸಿದರೆ, ಬಿಜೆಪಿ ಹಿಂಸಾ ಚಾರ ನಡೆಸಲೆಂದೇ ಮೆರವಣಿಗೆ ಆಯೋ ಜಿಸಿತ್ತು ಎಂದು ಟಿಎಂಸಿ ಆರೋಪಿಸಿದೆ.
ಶಾ ಕಾಲೇಜು ಪ್ರಿನ್ಸಿಪಾಲ್: ಈ ನಡುವೆ, 2021ರ ಪ.ಬಂಗಾಲ ಚುನಾವಣೆಗೆ ಕಾರ್ಯತಂತ್ರ ನಿಪುಣ ಪ್ರಶಾಂತ್ ಕಿಶೋರ್ ನೆರವನ್ನು ಸಿಎಂ ಮಮತಾ ಪಡೆದುಕೊಳ್ಳಲಿದ್ದಾರೆ ಎಂಬ ಸುದ್ದಿಗೆ ಬಿಜೆಪಿ ಶನಿವಾರ ಪ್ರತಿಕ್ರಿಯಿಸಿದೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕಿಶೋರ್ಗಿಂತಲೂ ಉತ್ತಮ ಕಾರ್ಯತಂತ್ರ ನಿಪುಣ. ಅಮಿತ್ ಶಾ ಅವರ ಕಾಲೇಜು ಪ್ರಾಂಶು ಪಾಲರಾದರೆ, ಕಿಶೋರ್ ಇನ್ನೂ ಆ ಕಾಲೇಜಿನ ವಿದ್ಯಾರ್ಥಿ ಅಷ್ಟೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!