ಕಡಲೂರಲ್ಲಿ ಹಿಂಸೆ; ದಾಂಧಲೆ ; ಚುನಾವಣೆ ವಿಚಾರವೇ ಘಟನೆಗೆ ಕಾರಣ, 43 ಸೆರೆ
Team Udayavani, Aug 3, 2020, 6:19 AM IST
ತಮಿಳುನಾಡಿನ ಕಡಲೂರು ಜಿಲ್ಲೆಯ ತಾಲಗುಂಡ ಗ್ರಾಮದಲ್ಲಿ ಗುಂಪು ಘರ್ಷಣೆ ಬಳಿಕ ಬೆಂಕಿಗೆ ಆಹುತಿಯಾಗಿರುವ ದೋಣಿಗಳು.
ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ತಾಲಗುಂಡ ಎಂಬ ಗ್ರಾಮದಲ್ಲಿ ಶನಿವಾರದಂದು ಭುಗಿಲೆದ್ದ ರಾಜಕೀಯ ದಳ್ಳುರಿಗೆ ಹಲವಾರು ದೋಣಿಗಳು, ನಾಗರಿಕರ ಬೈಕುಗಳು ಹಾಗೂ ಕೆಲವು ಮನೆಗಳು ಸುಟ್ಟು ಭಸ್ಮವಾಗಿವೆ.
ಘಟನೆಗೆ ಸಂಬಂಧಿಸಿದಂತೆ 43 ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಶನಿವಾರ, ಅಲ್ಲಿನ ಗ್ರಾಮ ಪಂಚಾಯ್ತಿ ಸದಸ್ಯನೊಬ್ಬನ ಸಹೋದರನ ಹತ್ಯೆ ನಡೆದಿದ್ದು, ಅದರ ಬೆನ್ನಿಗೆ ಈ ಘಟನೆ ನಡೆದಿದ್ದು, ದುಷ್ಕರ್ಮಿಗಳು ಸಾಗರದ ತೀರದಲ್ಲಿ ನಿಂತಿದ್ದ ಹಲವಾರು ದೋಣಿಗಳಿಗೆ, ಬೈಕುಗಳಿಗೆ ಹಾಗೂ ಕೆಲವು ಮನೆಗಳಿಗೆ ಅಗ್ನಿಸ್ಪರ್ಶ ಮಾಡಿದ್ದಾರೆ.
ಬೆಂಕಿ ಆರಿ ಸಲು ಬಂದ ಅಗ್ನಿಶಾಮಕ ದಳದವರು ಬೆಂಕಿಯ ಝಳ ಹಾಗೂ ದಟ್ಟ ಹೊಗೆಯಿಂದಾಗಿ ದೋಣಿ ಗಳ ಹತ್ತಿರಕ್ಕೂ ಹೋಗದಂತಾಗಿ ಅಸಹಾಯಕರಾಗಿ ನಿಂತಿದ್ದರು.
ವೈಷಮ್ಯದ ಕೊಲೆ: ಸುಮಾರು ಮೂರು ವರ್ಷಗಳಿಂದ ತಡೆ ಹಿಡಿಯಲಾಗಿದ್ದ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ಕಳೆದ ವರ್ಷ ನಡೆಸಲಾಗಿತ್ತು. ಆಗ ಎರಡು ಬಣಗಳ ಮಧ್ಯೆ ಹುಟ್ಟಿದ್ದ ದ್ವೇಷದಿಂದ ಗ್ರಾ.ಪಂ. ಸದಸ್ಯನ ಸಹೋ ದರ ಕೊಲೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ