ಉಗ್ರರಿಗೆ ಬಲಿಯಾದ RSS ನಾಯಕ ಶರ್ಮಾ, ಕಾನ್ಸ್ಟೆಬಲ್ ಅಂತ್ಯಕ್ರಿಯೆ; ಘರ್ಷಣೆ
Team Udayavani, Apr 10, 2019, 5:42 PM IST
ಕಿಷ್ತ್ವಾರ್ : ಉಗ್ರರ ದಾಳಿಗೆ ಬಲಿಯಾಗಿದ್ದ ಹಿರಿಯ ಆರ್ಎಸ್ಎಸ್ ನಾಯಕ ಚಂದ್ರಕಾಂತ್ ಶರ್ಮಾ ಮತ್ತು ಕಾನ್ಸ್ಟೆಬಲ್ ರಾಜೀಂದರ್ ಕುಮಾರ್ ಅವರ ಅಂತ್ಯಕ್ರಿಯೆ ಇಂದು ಪೊಲೀಸರೊಂದಿಗಿನ ಆಕ್ರೋಶಿತ ದುಃಖತಪ್ತರ ಘರ್ಷಣೆಯ ನಡುವೆ ನಡೆಯಿತು.
ಆಕ್ರೋಶಿತ ದುಃಖತಪ್ತರ ಒಂದು ಗುಂಪು ಅಂತ್ಯಕ್ರಿಯೆಯ ಬಳಿಕ ಪೊಲೀಸರೊಂದಿಗೆ ಘರ್ಷಣೆಗೆ ಇಳಿಯತು. ಕೆಲವರು ಎಸ್ಪಿ ಕಚೇರಿಗೆ ಹೋಗಿ ಅಲ್ಲಿದ್ದ ಪೀಠೊಪಕರಣಗಳನ್ನು ಹಾಳು ಗೆಡಹಿದರು. ಆದರೂ ಪೊಲೀಸರು ಪರಿಸ್ಥಿತಿಯನ್ನು ತಹಬಂದಿಗೆ ತರುವಲ್ಲಿ ಸಫಲರಾದರು.
ಡಾಕ್ ಬಂಗ್ಲೆ ಪ್ರದೇಶದಲ್ಲಿ ಪ್ರತಿಭಟನಕಾರರು ಪಾಕಿಸ್ಥಾನ ಮತ್ತು ಭಯೋತ್ಪಾದಕರ ವಿರುದ್ಧ ಘೋಷಣೆ ಕೂಗಿದರು. ಚೌಗನ್ ಮೈದಾನದಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಜಮ್ಮು ಕಾಶ್ಮೀರ ಆರ್ಎಸ್ಎಸ್ ಮುಖ್ಯಸ್ಥ ಸುಚೇತ್ ಸಿಂಗ್, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ರವೀಂದರ್ ರಾಣಾ, ಮಾಜಿ ಉಪ ಮುಖ್ಯಮಂತ್ರಿ ಡಾ. ನಿರ್ಮಲ್ ಸಿಂಗ್ ಭಾಗವಹಿಸಿದ್ದರು.
ಕಾನ್ಸ್ಟೆಬಲ್ ರಾಜಿಂದರ್ ಕುಮಾರ್ ಅವರ ಅಂತ್ಯಕ್ರಿಯೆ ಕಿಷ್ತ್ವಾರ್ ನ ಮುಘಲ್ ಮೈದಾನದಲ್ಲಿ ನಡೆಯಿತು. ನೂರಾರು ಜನರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
MUST WATCH
ಹೊಸ ಸೇರ್ಪಡೆ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್
BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ
Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್ ಮೈಂಡ್; ಗೋಲ್ಡಿ ಬ್ರಾರ್ ಶೂಟೌಟ್ – ವರದಿ