ಮೆಲ್ಬರ್ನ್ ಮೈದಾನದಲ್ಲಿ ಭಾರತದ ರಾಷ್ಟ್ರಗೀತೆ; ವಿಡಿಯೋ ವೈರಲ್
Team Udayavani, Oct 24, 2022, 2:55 PM IST
ಮುಂಬಯಿ: ಭಾರತದ ರಾಷ್ಟ್ರಗೀತೆ “ಜನ ಗಣ ಮನ” ಹಾಡಿದಾಗ ಅಥವಾ ನುಡಿಸುವಾಗ ಪ್ರತಿಯೊಬ್ಬ ಭಾರತೀಯನಲ್ಲೂ ದೇಶಭಕ್ತಿ ಮತ್ತು ಹೆಮ್ಮೆಯ ಭಾವವನ್ನು ಪ್ರಚೋದಿಸುತ್ತದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನದೊಂದಿಗಿನ ಕ್ರಿಕೆಟ್ ಪಂದ್ಯವಾದರೆ ದೇಶಭಕ್ತಿಯ ಮೀಟರ್ ಗಗನಕ್ಕೇರುತ್ತದೆ.
ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಭಾನುವಾರ ನಡೆದ ಭಾರತ ಮತ್ತು ಪಾಕಿಸ್ಥಾನ ಟಿ 20 ವಿಶ್ವಕಪ್ ಪಂದ್ಯದಲ್ಲೂ ಇದೇ ರೀತಿಯ ದೃಶ್ಯ ಕಂಡುಬಂದಿದ್ದು, ನಾವೆಲ್ಲರೂ ಎದ್ದೇಳುವ ದೇಶ ಮತ್ತು ಗೀತೆ ಎಂಬ ಶೀರ್ಷಿಕೆಯೊಂದಿಗೆ ಮುಂಬೈ ಪೊಲೀಸರು ಟ್ವಿಟರ್ನಲ್ಲಿ ಹಂಚಿಕೊಂಡ ಕ್ಲಿಪ್ ವೈರಲ್ ಆಗಿದೆ.
ಭಾರತ ವಿರಾಟ್ ಕೊಹ್ಲಿ ಅವರ ಸಾಹಸದಿಂದ ರೋಚಕ ಜಯ ಸಾಧಿಸಿದ ಪಂದ್ಯಕ್ಕೆ 90 ಸಾವಿರಕ್ಕೂ ಹೆಚ್ಚು ಪ್ರೇಕ್ಷಕರು ಸಾಕ್ಷಿಯಾಗಿದ್ದರು. ಭಾರತೀಯರು ಎದ್ದು ನಿಂತು ಭಾರತದ ತ್ರಿವರ್ಣ ಧ್ವಜಗಳನ್ನು ಬೀಸುತ್ತಾ ರಾಷ್ಟ್ರಗೀತೆಯನ್ನು ಹಾಡುತ್ತಿರುವ ದೃಶ್ಯ ಹೆಮ್ಮೆಯ ಕ್ಷಣವಾಗಿತ್ತು. ಇದು ಮೈದಾನದಲ್ಲಿರುವ ಭಾರತೀಯರಿಗೆ ಮಾತ್ರವಲ್ಲದೆ ಜಗತ್ತಿನಾದ್ಯಂತ ಪಂದ್ಯವನ್ನು ವೀಕ್ಷಿಸುತ್ತಿರುವ ಕೋಟ್ಯಂತರ ಭಾರತೀಯರಿಗೆ ‘ಗೂಸ್ಬಂಪ್ಸ್’ ಕ್ಷಣವಾಗಿತ್ತು.
आपणा सर्वांच्या अंगावर शहारा आणणारे राष्ट्रगीत आणि आपल्या सगळ्यांच्या मनामनात वसलेला आपला देश.#JaiHind #TeamIndia #IndVsPak2022
VC: @prashantsin pic.twitter.com/WeXp72ieQ2
— मुंबई पोलीस – Mumbai Police (@MumbaiPolice) October 23, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ