ದೆಹಲಿ ದಂಗೆ: ಉದ್ರಿಕ್ತ ಗುಂಪಿನಿಂದ ಬಸ್ ಚಾಲಕನ ಮೇಲೆ ಹಲ್ಲೆ;ಇಲ್ಲಿದೆ Viral Video ಸತ್ಯಾಂಶ
Team Udayavani, Feb 26, 2020, 5:53 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಗಾರರು ಮತ್ತು ಪರ ಪ್ರತಿಭಟನಾಕಾರರ ನಡುವೆ ಕಳೆದ ಆದಿತ್ಯವಾರದಂದು ಸಣ್ಣದಾಗಿ ಪ್ರಾರಂಭಗೊಂಡ ಘರ್ಷಣೆ ವಿಕೋಪಕ್ಕೆ ತಿರುಗಿ ಒಟ್ಟು 20 ಜನರ ಪ್ರಾಣಕ್ಕೆ ಎರವಾಗಿದೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ.
ಈ ನಡುವೆ ಪ್ರತಿಭಟನಾಕಾರರು ಬಸ್ಸು ಚಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು ರಾಜಕೀಯ ನಾಯಕರ ಸಹಿತ ಹಲವರು ಈ ವಿಡಿಯೋವನ್ನು ತಮ್ಮ ತಮ್ಮ ಅಕೌಂಟ್ ಗಳಲ್ಲಿ ಶೇರ್ ಮಾಡುತ್ತಿದ್ದಾರೆ. ಮತ್ತು ದೆಹಲಿ ದಂಗೆಯ ಸಂದರ್ಭದಲ್ಲಿ ನಿರ್ಧಿಷ್ಟ ಕೋಮಿಗೆ ಸೇರಿದ ಉದ್ರಿಕ್ತ ಪ್ರತಿಭಟನಾಕಾರರು ಈ ಕೃತ್ಯವನ್ನು ನಡೆಸುತ್ತಿದ್ದಾರೆ ಎಂಬ ಟಿಪ್ಪಣಿಯನ್ನೂ ಸಹ ಇದಕ್ಕೆ ನೀಡಿ ಶೇರ್ ಮಾಡಲಾಗತ್ತಿದೆ.
1990 repeats
History repeats
Kashmir repeats pic.twitter.com/mK3bOgG8Gh
— Shilpa Nair (@shilpamdas) February 24, 2020
ಆದರೆ ಈ ವಿಡಿಯೋದ ಅಸಲಿಯತ್ತೇ ಬೇರೆ ಇದೆ. ವಾಸ್ತವವಾಗಿ ಇದು ಫೆಬ್ರವರಿ 18ರಂದು ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದ್ದ ಘಟನೆಯ ವಿಡಿಯೋ ಆಗಿದ್ದು ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸೊಂದು ಕಾರೊಂದನ್ನು ಓವರ್ ಟೇಕ್ ಮಾಡುವ ಪ್ರಯತ್ನದಲ್ಲಿದ್ದಾಗ ಕೆಲವು ಕಿಡಿಗೇಡಿಗಳ ಗುಂಪು ಚಾಲಕನ ಮೇಲೆ ಹಲ್ಲೆ ನಡೆಸಿ ಬಸ್ಸಿಗೆ ಹಾನಿ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಹಲ್ಲೆ ತಡೆಯಲು ಬಂದ ಬಸ್ಸುನಿರ್ವಾಹಕನೂ ಸಹ ಗಾಯಗೊಂಡಿದ್ದಾನೆ. ಈ ಕುರಿತಾದ ವರದಿ ಮರಾಠಿ ಸುದ್ದಿ ವಾಹಿನಿಯಲ್ಲೂ ಪ್ರಸಾರವಾಗಿತ್ತುಮತ್ತು ಇಂಗ್ಲಿಷ್ ವೆಬ್ ಸೈಟ್ ಒಂದು ಇದರ ಫಾಲೋ ಅಪ್ ವರದಿಯನ್ನೂ ಮಾಡಿತ್ತು. ಈ ಘಟನೆಗೆ ಸಂಬಂಧಿಸಿದಂತೆ 18 ಜನರನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.
ಆದರೆ ಈ ವಿಡಿಯೋ ತುಣುಕನ್ನು ತಮ್ಮ ಸಾಮಾಜಿಕ ಜಾಲತಾಣ ಅಕೌಂಟ್ ಗಳಲ್ಲಿ ಹಾಕಿಕೊಂಡಿರುವ ಜಿತೇಂದ್ರ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ, ‘ಶಾಂತಿದೂತರು ದೇಶದ ಅಭಿವೃದ್ಧಿಗೆ ಸಲ್ಲಿಸುತ್ತಿರುವ ಕೊಡುಗೆ’ ಎಂಬ ಶೀರ್ಷಿಕೆಯಡಿ ಈ ವಿಡಿಯೋವನ್ನು ಶೇರ್ ಮಾಡಿದ್ದಾರೆ. ಜಿತೇಂದ್ರ ಪ್ರತಾಪ್ ಸಿಂಗ್ ಅವರ ಪ್ರೊಫೈಲ್ ಚಿತ್ರದಲ್ಲಿ ಪ್ರಧಾನಿ ಮೋದಿ ಅವರ ಜೊತೆಗಿರುವ ಫೊಟೋ ಇದೆ.
ಈ ವಿಡಿಯೋವನ್ನು ಅರ್ವಿಲ್ ಶರ್ಮಾ ಎಂಬಾಕೆ ಟ್ವೀಟ್ ಮಾಡಿದ್ದು ಈಕೆಗೆ 16,400 ಫಾಲೊವರ್ಸ್ ಗಳಿದ್ದಾರೆ, ಇದೇ ಟ್ವೀಟನ್ನು ಕೇರಳ ಬಿಜೆಪಿ ನಾಯಕಿ ಶಿಲ್ಪಾ ನಾಯರ್ ಅವರು ರೀಟ್ವೀಟ್ ಮಾಡಿದ್ದಾರೆ.
This is the horror being played on the streets of Delhi right now.
Did you see the skull cap?
They have turned this country into Syria, where Hindus are shit scared.
My relatives living in Maujpur haven’t stepped out of their home since 3 days.
— Aviral Sharma (@sharmaAvl) February 25, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ