ಗಂಟೆಗೆ 1,078 ಕಿ.ಮೀ. ವೇಗದಲ್ಲಿ ಸಾಗುವ ಹೈಪರ್‌ಲೂಪ್‌

ಶರವೇಗದ ಸಾರಿಗೆಯ ಪೂರ್ವಭಾವಿ ವಿಡಿಯೋ ರಿಲೀಸ್‌

Team Udayavani, Aug 26, 2021, 9:30 PM IST

ಗಂಟೆಗೆ 1,078 ಕಿ.ಮೀ. ವೇಗದಲ್ಲಿ ಸಾಗುವ ಹೈಪರ್‌ಲೂಪ್‌

ನವದೆಹಲಿ: ಇತ್ತೀಚೆಗೆ, ಗ್ಯಾಲಾಕ್ಟಿಕ್‌ ಎಂಬ ಬಾಹ್ಯಾಕಾಶ ನೌಕೆಯ ಮೂಲಕ ಬಾಹ್ಯಾಕಾಶ ಪ್ರವಾಸ ಕೈಗೊಂಡು ಸುದ್ದಿಯಾಗಿದ್ದ ವರ್ಜಿನ್‌ ಕಂಪನಿ, ತನ್ನ ಮಹದೋದ್ದೇಶದ ಮತ್ತೊಂದು ಯೋಜನೆಯಾದ ವರ್ಜಿನ್‌ ಹೈಪರ್‌ಲೂಪ್‌ನ ರೂಪುರೇಷೆಗಳು, ಅನುಕೂಲಗಳು ಹೇಗಿರುತ್ತವೆ ಎಂಬುದರ ಬಗ್ಗೆ ಪೂರ್ವಭಾವಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದೆ.

21ನೇ ಶತಮಾನದ ಅತ್ಯಂತ ವೇಗದ ಸಾರಿಗೆ ವ್ಯವಸ್ಥೆ ಇದಾಗಿರಲಿದ್ದು, ಈ ವ್ಯವಸ್ಥೆಯಡಿ ಜನರು ಗಂಟೆಗೆ 1,078 ಕಿ.ಮೀ. ವೇಗದಲ್ಲಿ ಪ್ರಯಾಣಿಸಿ, ಅತಿ ದೂರದ ನಗರಗಳನ್ನೂ ಕೆಲವೇ ನಿಮಿಷಗಳಲ್ಲಿ ತಲುಪಬಹುದು. ಇಂದಿನ ಅತಿ ಹೆಚ್ಚು ವೇಗದಲ್ಲಿ ಸಾಗುವ ರೈಲುಗಳಿಗೆ ಹೋಲಿಸಿದರೆ ಇದರ ವೇಗ 10 ಪಟ್ಟು ಹೆಚ್ಚು ಎಂದು ಸಂಸ್ಥೆ ಹೇಳಿದೆ. ಅಂದಹಾಗೆ, ಸುಮಾರು 2-3 ವರ್ಷಗಳ ಹಿಂದೆಯೇ ಹೈಪರ್‌ಲೂಪ್‌ ಪರಿಕಲ್ಪನೆಯನ್ನು ಈ ಕಂಪನಿ ಅನಾವರಣಗೊಳಿಸಿತ್ತು. ಈಗ, ಅದರ ವಿನ್ಯಾಸದ ಬಗ್ಗೆ ಒಂದು ಪೂರ್ವಭಾವಿ ಪರಿಕಲ್ಪನೆಯನ್ನು ಬಿತ್ತುವ ಸಲುವಾಗಿ ಈ ವಿಡಿಯೋ ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ:ನಾವು ವಿಕೆಂಡ್ ಕರ್ಫ್ಯೂ ಪಾಲಿಸಲ್ಲ, ವ್ಯಾಪಾರ ನಡೆಸುತ್ತೇವೆ : ಸರಕಾರಕ್ಕೆ HKCCI ಎಚ್ಚರಿಕೆ

ವಿಡಿಯೋದಲ್ಲಿ, ಹೈಪರ್‌ಲೂಪ್‌ ಸಾರಿಗೆ ವ್ಯವಸ್ಥೆಯು ಒಂದು ಸುರಂಗವಿರುವ ಮೇಲ್ಸೇತುವೆ ಮೂಲಕ ಹಾದು ಹೋಗುವುದಾಗಿ ತೋರಿಸಲಾಗಿದೆ. ಪಾಡ್‌ಗಳ (ಪ್ರಯಾಣಿಕರು ಕುಳಿತುಕೊಳ್ಳುವ ಬೋಗಿ) ವಿನ್ಯಾಸ, ಅದರಲ್ಲಿನ ಆಸನ ವ್ಯವಸ್ಥೆ, ಸ್ಟೇಷನ್‌ಗಳ ಮಾದರಿ, ಅತಿ ವೇಗವಾಗಿ ಸಾಗುವಾಗ ಆಗುವ ಅನುಭವಗಳನ್ನು ವಿಡಿಯೋದಲ್ಲಿ ತೋರಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಜಾರಿಯಾಗುವ ಸಾಧ್ಯತೆ
ಭಾರತದಲ್ಲಿ ಪುಣೆ- ಮುಂಬೈ ನಡುವೆ ಹೈಪರ್‌ಲೂಪ್‌ ಸಂಚಾರ ಸ್ಥಾಪನೆಗೆ ಕೇಂದ್ರ ಸರ್ಕಾರ ಈ ಹಿಂದೆಯೇ ಒಪ್ಪಿಗೆ ನೀಡಿತ್ತು. ಆದರೆ, ಕಾಮಗಾರಿ ಇನ್ನೂ ಶುರುವಾಗಿಲ್ಲ. ಈ ಎರಡೂ ನಗರಗಳ ನಡುವೆ 140 ಕಿ.ಮೀ. ಅಂತರವಿದ್ದು, ಸಾಮಾನ್ಯವಾಗಿ ಇವೆರಡು ನಗರಗಳ ನಡುವಿನ ಪ್ರಯಾಣಕ್ಕೆ 2.5ರಿಂದ 3 ಗಂಟೆ ಅವಧಿ ತೆಗೆದುಕೊಳ್ಳುತ್ತದೆ. ಹೈಪರ್‌ಲೂಪ್‌ನಡಿ, 25 ನಿಮಿಷಗಳಲ್ಲಿ ಈ ನಗರಗಳ ನಡುವೆ ಸಂಚರಿಸಬಹುದು ಎಂದು ಈ ಹಿಂದೆ ವರ್ಜಿನ್‌ ಸಂಸ್ಥೆ ಪ್ರಕಟಿಸಿತ್ತು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.