ಕೊಳಚೆ ನೀರಿನಲ್ಲಿ ವೈರಸ್ ವಂಶವಾಹಿ ಪತ್ತೆ
Team Udayavani, Jun 10, 2020, 12:37 PM IST
ಸಾಂದರ್ಭಿಕ ಚಿತ್ರ
ಐಐಟಿ-ಗಾಂಧಿನಗರದ ಸಂಶೋಧಕರ ತಂಡವೊಂದು ಅಹ್ಮದಾಬಾದ್ನ ಹೊರವಲಯದಲ್ಲಿ ಸಂಗ್ರಹಿಸಿದ ಸಂಸ್ಕರಣೆ ಮಾಡದೇ ಇದ್ದ ಕೊಳಚೆ ನೀರಿನಲ್ಲಿ ಕೋವಿಡ್ ವೈರಸ್ನ ಸಾಂಕ್ರಾಮಿಕವಲ್ಲದ ವಂಶವಾಹಿಗಳನ್ನು ಪತ್ತೆ ಹಚ್ಚಿದೆ. ಈವರೆಗೆ ಆಸ್ಟ್ರೇಲಿಯಾ, ಫ್ರಾನ್ಸ್, ನೆದರ್ಲ್ಯಾಂಡ್, ಅಮೆರಿಕಗಳ ಒಳಚರಂಡಿ ನೀರಿನಲ್ಲಿ ಸಾರ್ಸ್-ಕೋವ್-2 ವೈರಸ್ ಪತ್ತೆಯಾಗಿರುವುದು ವರದಿಯಾಗಿತ್ತು. ಆದರೆ, ಭಾರತದಲ್ಲಿ ಒಳಚರಂಡಿ ನೀರಿನಲ್ಲಿ “ಸಾರ್ಸ್-ಕೋವ್-2′ ವೈರಸ್ ಪತ್ತೆಯಾಗಿರುವುದು ಇದೇ ಮೊದಲು ಎನ್ನಲಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿ ನೀಡಿದ ಸಂಶೋಧಕರ ತಂಡದ ಮುಖ್ಯಸ್ಥ ಐಐಟಿ-ಗಾಂಧಿನಗರದ ಪ್ರಾಧ್ಯಾಪಕ ಮನೀಶ್ ಕುಮಾರ್, “”ಸೋಂಕಿನ ಲಕ್ಷಣ ಇರುವ ವ್ಯಕ್ತಿಯ ದೇಹದಿಂದ ಮಾತ್ರವಲ್ಲದೆ, ಸೋಂಕಿನ ಲಕ್ಷಣ ಕಂಡು ಬರದ ವ್ಯಕ್ತಿಯ ದೇಹದಿಂದಲೂ ಕೋವಿಡ್ ವೈರಸ್ ವಿಸರ್ಜನೆಯಾಗಬಹುದು. ವ್ಯಕ್ತಿಯ ದೇಹದಿಂದ ವಿಸರ್ಜನೆಯಾಗುವ ಮಲ, ಮೂತ್ರಗಳ ಮೂಲಕ ಇದು ಚರಂಡಿ ನೀರನ್ನು ಸೇರುವ ಸಾಧ್ಯತೆ ಇರುತ್ತದೆ. ದೇಶದ ವಿವಿಧ ಭಾಗಗಳಲ್ಲಿ ಕೋವಿಡ್ ವೈರಸ್ ಹಾಟ್ಸ್ಪಾಟ್ಗಳನ್ನು ಗುರುತಿಸುವಾಗ ಮತ್ತು ಕೋವಿಡ್ ನಿಯಂತ್ರಿಸಲು ಕ್ರಮ ಕೈಗೊಳ್ಳುವಾಗ ಆ ಪ್ರದೇಶದಲ್ಲಿನ ತ್ಯಾಜ್ಯ ನೀರಿನ ಮೇಲೆ ಕಣ್ಗಾವಲು ಇರಿಸಬೇಕಾದ ಅಗತ್ಯತೆಯನ್ನು ಇದು ಎತ್ತಿ ತೋರಿಸುತ್ತದೆ” ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ