2.75 ಲಕ್ಷ ಹಳ್ಳಿಗಳಲ್ಲಿ ರಾಮನ ವಿಗ್ರಹ ಸ್ಥಾಪನೆ: ವಿಎಚ್ಪಿ
Team Udayavani, Jan 4, 2020, 2:16 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Use
ಲಕ್ನೋ: ದೇಶಾದ್ಯಂತ 2.75 ಲಕ್ಷ ಹಳ್ಳಿಗಳಲ್ಲಿ ಶ್ರೀರಾಮನ ವಿಗ್ರಹ ಸ್ಥಾಪಿಸಲು ವಿಶ್ವ ಹಿಂದೂ ಪರಿಷತ್ ಯೋಜನೆ ರೂಪಿಸಿದೆ. ಮಾ.25ರಿಂದ (ಹಿಂದೂ ಸಂಪ್ರದಾಯದಂತೆ ಹೊಸ ವರ್ಷ) ಏ.8 (ರಾಮನವಮಿ)ರವರೆಗೆ ವಿಎಚ್ಪಿ ಕಾರ್ಯಕರ್ತರು ಹಳ್ಳಿಗಳಿಗೆ ತೆರಳಿ, ರಾಮನ ಮೂರ್ತಿಯನ್ನು ಪ್ರತಿಷ್ಠಾಪಿಸಲು ಮನವೊಲಿಸಬೇಕು ಎಂದು ಪರಿಷತ್ ಮುಖಂಡರು ತಿಳಿಸಿದ್ದಾರೆ.
90ರ ದಶಕದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಚಳವಳಿ ರೀತಿಯಲ್ಲಿಯೇ ಎರಡು ತಿಂಗಳು ಕಾಲ ‘ರಾಮೋತ್ಸವ’ ನಡೆಸಲಾಗುವುದು ಎಂದು ವಿಎಚ್ಪಿ ವಕ್ತಾರ ವಿನೋದ್ ಬನ್ಸಾಲ್ ತಿಳಿಸಿದ್ದಾರೆ.
ಅಂದು ಮಂದಿರ ನಿರ್ಮಾಣಕ್ಕೆ ಇಟ್ಟಿಗೆ ದಾನ ಮಾಡಿದ್ದ ಕುಟುಂಬಗಳಲ್ಲಿ ರಾಮನ ವಿಗ್ರಹ ಅಳವಡಿಸಿಕೊಳ್ಳುವಂತೆ ಕಾರ್ಯಕರ್ತರು ಜಾಗೃತಿ ಮೂಡಿಸಲಿದ್ದಾರೆ. ಇದೇ ವೇಳೆ, ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹವಾಗುವ ನಿರೀಕ್ಷೆ ಇದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್