
ಪ್ರಾಣಾಯಾಮ, ವ್ಯಾಯಾಮ ನನ್ನ ಆರೋಗ್ಯದ ಗುಟ್ಟು: ಸಚಿವ ನಿತಿನ್ ಗಡ್ಕರಿ
Team Udayavani, Oct 2, 2022, 7:45 AM IST

ನವದೆಹಲಿ: ಈ ಹಿಂದೆ ಸ್ವಲ್ಪ ಹೆಚ್ಚು ನಡೆದಾಡಿದರೆ ಸಾಕು ಆಯಾಸಗೊಳ್ಳುತ್ತಿದ್ದೆ. ಆದರೆ ಶನಿವಾರ ನಾಲ್ಕು ಗಂಟೆಯ ಅವಧಿಯಲ್ಲಿ ಒಟ್ಟು 22 ದುರ್ಗಾ ಪಂಡಾಲ್ಗಳಿಗೆ ಭೇಟಿ ನೀಡಿದ್ದೇನೆ. ಆದರೂ ಆಯಾಸವಾಗಲಿಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಪ್ರತಿದಿನ ಪ್ರಾಣಾಯಾಮ ಮತ್ತು ವೈದ್ಯರು ತಿಳಿಸಿದ ಕೆಲವು ವ್ಯಾಯಾಮಗಳನ್ನು ಮಾಡುತ್ತೇನೆ. ಇದೇ ನನ್ನ ಆರೋಗ್ಯದ ಗುಟ್ಟು,’ ಎಂದರು.
“ನನಗೆ ಎರಡು ಬಾರಿ ಕೊರೊನಾ ಸೋಂಕು ತಗುಲಿತು. ಈ ಹಿಂದೆ 135 ಕೆಜಿ ತೂಕವಿದ್ದೆ. 40 ನಿಮಿಷ ಭಾಷಣ ಮಾಡಿದರೆ ಸಾಕು ಬೆವರುತ್ತಿದ್ದೆ ಮತ್ತು ಆಯಾಸಗೊಳ್ಳುತ್ತಿದ್ದೆ. ನಂತರ ವ್ಯಾಯಾಮದ ಜತೆಗೆ ಸಾವಯವ ತರಕಾರಿಗಳನ್ನು ಬಳಸಲು ಆರಂಭಿಸಿದ ಬಳಿಕ ಸದ್ಯ 90 ಕೆಜಿ ಇದ್ದೇನೆ. ಈಗ 3 ಗಂಟೆ ನಿರಂತರವಾಗಿ ಭಾಷಣ ಮಾಡಿದರೂ ಆಯಾಸವಾಗುವುದಿಲ್ಲ,’ ಎಂದು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆರಿಗೆ ವಂಚನೆ ಪ್ರಕರಣ: 69.65 ಕೋ.ರೂ. ಆಸ್ತಿ ಜಪ್ತಿ

ಗೋ ಫಸ್ಟ್ ವಿಮಾನಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ

ನನ್ನನ್ನು ಒತ್ತೆಯಲ್ಲಿ ಇರಿಸಲಾಗಿದೆ: ಫ್ರೆಂಚ್ ನಟಿ ಮೇರಿಯನ್ನೆ ಆರೋಪ

ಸಂಸ್ಕೃತವೇಕೆ ದೇಶದ ಅಧಿಕೃತ ಭಾಷೆಯಾಗಬಾರದು?: ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ

ಟಿಪ್ಪು ಸುಲ್ತಾನ್ ಉದ್ಯಾನದ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
