ಪ್ರಾಣಾಯಾಮ, ವ್ಯಾಯಾಮ ನನ್ನ ಆರೋಗ್ಯದ ಗುಟ್ಟು: ಸಚಿವ ನಿತಿನ್ ಗಡ್ಕರಿ
Team Udayavani, Oct 2, 2022, 7:45 AM IST
ನವದೆಹಲಿ: ಈ ಹಿಂದೆ ಸ್ವಲ್ಪ ಹೆಚ್ಚು ನಡೆದಾಡಿದರೆ ಸಾಕು ಆಯಾಸಗೊಳ್ಳುತ್ತಿದ್ದೆ. ಆದರೆ ಶನಿವಾರ ನಾಲ್ಕು ಗಂಟೆಯ ಅವಧಿಯಲ್ಲಿ ಒಟ್ಟು 22 ದುರ್ಗಾ ಪಂಡಾಲ್ಗಳಿಗೆ ಭೇಟಿ ನೀಡಿದ್ದೇನೆ. ಆದರೂ ಆಯಾಸವಾಗಲಿಲ್ಲ ಎಂದು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದರು.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಪ್ರತಿದಿನ ಪ್ರಾಣಾಯಾಮ ಮತ್ತು ವೈದ್ಯರು ತಿಳಿಸಿದ ಕೆಲವು ವ್ಯಾಯಾಮಗಳನ್ನು ಮಾಡುತ್ತೇನೆ. ಇದೇ ನನ್ನ ಆರೋಗ್ಯದ ಗುಟ್ಟು,’ ಎಂದರು.
“ನನಗೆ ಎರಡು ಬಾರಿ ಕೊರೊನಾ ಸೋಂಕು ತಗುಲಿತು. ಈ ಹಿಂದೆ 135 ಕೆಜಿ ತೂಕವಿದ್ದೆ. 40 ನಿಮಿಷ ಭಾಷಣ ಮಾಡಿದರೆ ಸಾಕು ಬೆವರುತ್ತಿದ್ದೆ ಮತ್ತು ಆಯಾಸಗೊಳ್ಳುತ್ತಿದ್ದೆ. ನಂತರ ವ್ಯಾಯಾಮದ ಜತೆಗೆ ಸಾವಯವ ತರಕಾರಿಗಳನ್ನು ಬಳಸಲು ಆರಂಭಿಸಿದ ಬಳಿಕ ಸದ್ಯ 90 ಕೆಜಿ ಇದ್ದೇನೆ. ಈಗ 3 ಗಂಟೆ ನಿರಂತರವಾಗಿ ಭಾಷಣ ಮಾಡಿದರೂ ಆಯಾಸವಾಗುವುದಿಲ್ಲ,’ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ