ಗೋವಾದಲ್ಲಿ ಮತದಾರರು ಬಿಜೆಪಿಯ ಮೇಲೆ ಬೇಸರವಾಗಿಲ್ಲ- ಸಿ.ಟಿ ರವಿ
Team Udayavani, Jul 4, 2021, 9:42 AM IST
ಪಣಜಿ: ಗೋವಾದಲ್ಲಿ ಮತದಾರರು ಬಿಜೆಪಿಯ ಮೇಲೆ ಬೇಸರವಾಗಿದ್ದಾರೆ ಎಂದು ರಾಜ್ಯದಲ್ಲಿ ವಿರೋಧ ಪಕ್ಷಗಳು ಹೇಳುತ್ತಿವೆ. ಆದರೆ ಪ್ರತ್ಯಕ್ಷವಾಗಿ ರಾಜ್ಯದಲ್ಲಿ ಮತದಾರರು ಬಿಜೆಪಿಯ ಮೇಲೆ ಬೇಸರವಾಗಿಲ್ಲ. ಮತದಾರರು ಬೇಸರವಾಗಿದ್ದರೆ ರಾಜ್ಯ ಜಿ.ಪಂ ಚುನಾವಣೆಯಲ್ಲಿ ಮತ್ತು ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸುತ್ತಿರಲಿಲ್ಲ ಎಂದು ಗೋವಾ ಬಿಜೆಪಿ ಪ್ರಭಾರಿ ಸಿ.ಟಿ ರವಿ ನುಡಿದಿದ್ದಾರೆ.
ಮಡಗಾಂವನಲ್ಲಿ ಶನಿವಾರ ಬಿಜೆಪಿ ಗೋವಾ ಪ್ರಭಾರಿ ಸಿ.ಟಿ.ರವಿ ಬಿಜೆಪಿಯ ಇ-ಬುಕ್ ಉಧ್ಘಾಟನೆ ನೆರವೇರಿಸಿದರು.
ಇದನ್ನೂ ಓದಿ: ವಿಂಡೀಸ್ ಕಟ್ಟಿದ ಹಾಕಿದ ಶಮ್ಸಿ ಬಿಗು ದಾಳಿ: ದಕ್ಷಿಣ ಆಫ್ರಿಕಾಗೆ ಸರಣಿ ಜಯ
ದೇಶದಲ್ಲಿ ಮತ್ತು ಗೋವಾ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಕಾರ್ಯ ನಿರ್ವಹಿಸುತ್ತಿದೆ. ಗೋವಾದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಗೋವಾ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಯಲ್ಲಿ ಸ್ಫರ್ಧಿಸಲು ಯಾರಿಗೆ ಟಿಕೆಟ್ ನೀಡಬೇಕು ಎಂಬುದನ್ನು ಚುನಾವಣೆ ಘೋಷಣೆಯಾದ ನಂತರ ನಿರ್ಣಯ ತೆಗೆದುಕೊಳ್ಳಲಾಗುವುದು. ಸ್ಥಳಿಯ ಮಟ್ಟದಲ್ಲಿ ಗಟ ಸಮಿತಿ ಸಂಭಾವ್ಯ ಉಮೇದುವಾರರ ಪಟ್ಟಿಯನ್ನು ಸಿದ್ಧಪಡಿಸಲಿದ್ದು, ಈ ಕುರಿತು ಕೇಂದ್ರ ಸಮಿತಿ ಚರ್ಚೆ ನಡೆಸಿ ಯೋಗ್ಯ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಸಿ.ಟಿ ರವಿ ನುಡಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ, ಉಪಮುಖ್ಯಮಂತ್ರಿ ಬಾಬು ಕವಳೇಕರ್, ಮಾಜಿ ಸಂಸದ ನರೇಂದ್ರ ಸಾವೈಕರ್, ಮಾಜಿ ಸಚಿವ ರಮೇಶ ತವಡಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
Netizens; 10ನೇ ತರಗತಿ ಪರೀಕ್ಷೆ ಟಾಪರ್ ಟ್ರೋಲ್: ನೆಟ್ಟಿಗರಿಂದ ತರಾಟೆ
MUST WATCH
ಹೊಸ ಸೇರ್ಪಡೆ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ
Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ