ಮುಂದಿನ ವರ್ಷ ಹೆಚ್ಚಲಿದೆ ವೇತನ

ಶೇ. 87 ಕಂಪೆನಿಗಳಿಂದ ಸಿದ್ಧತೆ: ಸಮೀಕ್ಷೆಯಲ್ಲಿ ಬಹಿರಂಗ

Team Udayavani, Nov 6, 2020, 6:15 AM IST

ಮುಂದಿನ ವರ್ಷ ಹೆಚ್ಚಲಿದೆ ವೇತನ

ಹೊಸದಿಲ್ಲಿ: ಕೋವಿಡ್, ಲಾಕ್‌ಡೌನ್‌ನಿಂದ ತತ್ತರಿಸಿದ್ದ ಭಾರತೀಯ ಉದ್ಯೋಗಿಗಳ ಮುಖದಲ್ಲಿ ಮಂದಹಾಸ ಮೂಡಿಸುವ ಸುದ್ದಿ ಇದು. ಆರ್ಥಿಕ ಚಟುವಟಿಕೆಗಳು ಗರಿಗೆದರುತ್ತಿ ರುವ ಹಿನ್ನೆಲೆಯಲ್ಲಿ ಮುಂದಿನ ವರ್ಷ ಶೇ. 87ರಷ್ಟು ಸಂಸ್ಥೆಗಳು ವೇತನ ಹೆಚ್ಚಳ ಮಾಡಲು ಉದ್ದೇಶಿಸಿವೆ.

2021ರಲ್ಲಿ ಸರಾಸರಿ ಶೇ. 7.3ರಷ್ಟು ಸಂಬಳವನ್ನು ಹೆಚ್ಚಿಸಲು ವಿವಿಧ ವಲಯಗಳ ಕಂಪೆನಿಗಳು ಚಿಂತನೆ ನಡೆಸಿವೆ ಎಂದು ಆನ್‌ ಇಂಡಿಯಾ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಈ ಏರಿಕೆ ಪ್ರಸಕ್ತ ವರ್ಷಕ್ಕಿಂತ ಹೆಚ್ಚಿನ ಪ್ರಮಾಣದ್ದಾಗಿದೆ.

ವೇತನ ಹೆಚ್ಚಳ ಮಾಡುವ ಇರಾದೆ ವ್ಯಕ್ತ ಪಡಿಸಿರುವ ಒಟ್ಟು ಕಂಪೆನಿಗಳ ಶೇ. 87ರ ಪೈಕಿ ಶೇ. 61 ಕಂಪೆನಿಗಳು ಶೇ. 5ರಿಂದ ಶೇ. 10ರಷ್ಟು ವೇತನ ಹೆಚ್ಚಿಸುವ ಕಾರ್ಯಯೋಜನೆ ಹೊಂದಿವೆ. 2020ರಲ್ಲಿ ಸರಾಸರಿ ವೇತನ ಏರಿಕೆ ಪ್ರಮಾಣ ಶೇ. 6.1ರಷ್ಟು ಇದ್ದರೆ, 2021ರಲ್ಲಿ ಅದು ಶೇ. 7.3ಕ್ಕೆ ಜಿಗಿಯಬಹುದು ಎಂದು ಸಮೀಕ್ಷೆ ಯಲ್ಲಿ ವ್ಯಕ್ತವಾಗಿದೆ. ಆನ್‌ ಇಂಡಿಯಾ ವೇತನ ಸಮೀಕ್ಷೆಯು 20 ವಿಧದ ಕೈಗಾರಿಕೆಗಳ 1,050 ಸಂಸ್ಥೆಗಳ ಬಗ್ಗೆ ಅಧ್ಯಯನ ನಡೆಸಿದೆ. ಕೆಲವು ಕ್ಷೇತ್ರಗಳಲ್ಲಿ ಅಧಿಕ ಪ್ರಮಾಣದಲ್ಲಿ ವೇತನ ಹೆಚ್ಚಳ ವಾಗಲಿದ್ದರೆ, ಸೋಂಕಿನ ಹೊಡೆತಕ್ಕೆ ಸಿಕ್ಕಿರುವ ಮತ್ತೆ ಕೆಲವು ಕ್ಷೇತ್ರಗಳು ಕಡಿಮೆ ಪ್ರಮಾಣದಲ್ಲಿ ವೇತನ ಪರಿಷ್ಕರಣೆ ಮಾಡುವ ಸಾಧ್ಯತೆಗಳಿವೆ ಎಂದು ಕಂಡುಕೊಳ್ಳಲಾಗಿದೆ.

ಸಮೀಕ್ಷೆಯ ಬಗ್ಗೆ ಮಾತನಾಡಿದ ಆನ್‌ ಇಂಡಿಯಾದ ಪರ್ಫಾಮೆನ್ಸ್‌ ಆ್ಯಂಡ್‌ ರಿವಾರ್ಡ್ಸ್‌ ಸೊಲ್ಯೂಷನ್ಸ್‌ ಪ್ರಾಕ್ಟೀಸ್‌ನ ನಿರ್ದೇಶಕ ನವನೀತ್‌ ರತ್ತಂ, 2020ರಲ್ಲಿ ಸರಾಸರಿ ವೇತನ ಹೆಚ್ಚಳ ಪ್ರಮಾಣ ಶೇ. 6.1 ಆಗಿದ್ದು, ಇದು ಐತಿಹಾಸಿಕವಾಗಿ ಭಾರೀ ಕಡಿಮೆ. 2008ರ ಆರ್ಥಿಕ ಹಿಂಜರಿತದ ಬಳಿಕ ಶೇ. 6.3ರ ಸರಾಸರಿಯಲ್ಲಿ ವೇತನ ಹೆಚ್ಚಳವಾಗಿತ್ತು ಎಂದಿದ್ದಾರೆ.

ಯಾವ ಕ್ಷೇತ್ರದಲ್ಲಿ ಹೆಚ್ಚು?
– ಮಾಹಿತಿ ತಂತ್ರಜ್ಞಾನ
– ಔಷಧೋದ್ಯಮ l ಜೀವ ವಿಜ್ಞಾನ
– ಮಾಹಿತಿ ತಂತ್ರಜ್ಞಾನ ಸಂಬಂಧಿ ಸೇವೆ

ಯಾವ ಕ್ಷೇತ್ರದಲ್ಲಿ ಕಡಿಮೆ?
– ಆತಿಥ್ಯ ಕ್ಷೇತ್ರ l ರಿಯಲ್‌ ಎಸ್ಟೇಟ್‌
– ಮೂಲ ಸೌಕರ್ಯ ಮತ್ತು ಎಂಜಿನಿಯರಿಂಗ್‌ ಸೇವೆಗಳು

ಟಾಪ್ ನ್ಯೂಸ್

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌

Kollywood: ಒಂದೇ ದಿನ ಧನುಷ್‌ ʼರಾಯನ್‌ʼ, ವಿಕ್ರಮ್‌ ʼತಂಗಲಾನ್‌ʼ ರಿಲೀಸ್?‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

10-thekkatte

ತೆಕ್ಕಟ್ಟೆ: ಅಪಾಯದಲ್ಲಿದ್ದ ನವಿಲಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.