
ರಾಜ್ಯದ ಮದರಸಾಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತೇವೆ: ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ
Team Udayavani, Jan 22, 2023, 9:04 AM IST

ಗುವಾಹಟಿ: ರಾಜ್ಯದಲ್ಲಿರುವ ಮದರಸಾಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುವುದು ಮತ್ತು ಅವುಗಳ ನೋಂದಣಿ ಮಾಡಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಹಂತದಲ್ಲಿ ರಾಜ್ಯದಲ್ಲಿರುವ ಮದರಸಾಗಳ ಸಂಖ್ಯೆಯನ್ನು ಕಡಿತ ಮಾಡಬೇಕಿದೆ. ನಾವು ಮದರಸಾಗಳಲ್ಲಿ ಸಾಮಾನ್ಯ ಶಿಕ್ಷಣವನ್ನು ಅನುಸರಿಸಲು ಬಯಸುತ್ತೇವೆ. ಮದರಸಾಗಳಲ್ಲಿ ನೋಂದಣಿ ವ್ಯವಸ್ಥೆಯನ್ನು ಪ್ರಾರಂಭಿಸುತ್ತೇವೆ” ಎಂದು ಹೇಳಿದರು.
ಇದನ್ನೂ ಓದಿ:ಮೋದಿ ಬಗೆಗಿನ ಬಿಬಿಸಿ ಡಾಕ್ಯುಂಟರಿ ಲಿಂಕ್ ತೆಗೆದುಹಾಕಲು ಯೂಟ್ಯೂಬ್- ಟ್ವಿಟರ್ ಗೆ ಕೇಂದ್ರದ ಆದೇಶ
ನಾವು ಅಲ್ಪಸಂಖ್ಯಾತ ಸಮುದಾಯದ ಜೊತೆ ಸೇರಿ ಕೆಲಸ ಮಾಡುತ್ತಿದ್ದೇವೆ. ಅವರೂ ನಮ್ಮ ಸರ್ಕಾರಕ್ಕೆ ಸಹಾಯ ಮಾಡುತ್ತಿದ್ದಾರೆ ಎಂದು ಅಸ್ಸಾಂ ಸಿಎಂ ಹೇಳಿದರು.
ಶಾರುಖ್ ಯಾರು?
ಶಾರುಖ್ ಖಾನ್ ಯಾರು? ನನಗೆ ಆತನ ಬಗ್ಗೆಯಾಗಲಿ, ಅವರ ಸಿನಿಮಾ ಪಠಾಣ್ ಬಗ್ಗೆ ತಿಳಿದಲ್ಲ’ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಹೇಳಿದ್ದಾರೆ.
ಅಸ್ಸಾಂನಲ್ಲಿ ಪಠಾಣ್ ಸಿನಿಮಾ ಪ್ರದರ್ಶನದ ವಿರುದ್ಧ ಕೆಲ ಬಲಪಂಥೀಯ ಸಂಘಟನೆಗಳು ಪ್ರತಿಭಟನೆ ನಡೆಸಿ, ಸಿನಿಮಾ ಪೋಸ್ಟರ್ಗಳಿಗೆ ಬೆಂಕಿ ಹಚ್ಚಿದ ಘಟನೆಯುವ ವರದಿಯಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SP ‘ಮೃದು ಹಿಂದುತ್ವ’ ಧೋರಣೆ ಆರೋಪ: ಅಖಿಲೇಶ್ ಪ್ರತಿಕ್ರಿಯಿಸಿದ್ದು ಹೀಗೆ

Mumbai; 1 ಕೋಟಿ ರೂ.ಮೌಲ್ಯದ ಮಾದಕ ವಸ್ತು ಸಹಿತ ವಿದೇಶಿ ವ್ಯಕ್ತಿ ಸೆರೆ

Modi ಸರಕಾರದಲ್ಲಿ ಭಾರತದ ಸಾಲ 155 ಲಕ್ಷ ಕೋಟಿ ರೂ.ಗೆ ಏರಿದೆ: ಕಾಂಗ್ರೆಸ್

Opposition ಮೈತ್ರಿ ಕೂಟದಿಂದ ದೂರ ಉಳಿಯುವ ಸೂಚನೆ ನೀಡಿದ ಒಮರ್ ಅಬ್ದುಲ್ಲಾ

Manipur ಜನರ ಗಾಯಗಳಿಗೆ ಪ್ರಧಾನಿ ಮೋದಿ ಉಪ್ಪು ಸವರಿದ್ದಾರೆ: ಖರ್ಗೆ ಕಿಡಿ