ಬಿಜೆಪಿ ಸೇರಲು 1 ಕೋಟಿ ಆಮಿಷ ಒಡ್ಡಿದರು : ಪತಿದಾರ್‌ ನಾಯಕ


Team Udayavani, Oct 23, 2017, 11:19 AM IST

Narendra Patel-700.jpg

ಅಹ್ಮದಾಬಾದ್‌ : ಗುಜರಾತ್‌ನಲ್ಲಿ ಆಳುವ ಬಿಜೆಪಿಯನ್ನು ಸೇರಲು ನನಗೆ 1 ಕೋಟಿ ರೂ. ಆಮಿಷ ಒಡ್ಡಲಾಗಿತ್ತು ಎಂದು ಪತಿದಾರ್‌ ಆಂದೋಲನದ ನಾಯಕ ನರೇಂದ್ರ ಪಟೇಲ್‌ ಆರೋಪಿಸಿದ್ದಾರೆ.

ಉತ್ತರ ಗುಜರಾತ್‌ನ ಪತಿದಾರ್‌ ನಾಯಕ ಹಾಗೂ ಮೆಹಸಾನಾದ ಪತಿದಾರ್‌ ಅನಾಮತ್‌ ಆಂದೋಲನ್‌ ಸಮಿತಿಯ (ಪಿಎಎಸ್‌) ಸಂಚಾಲಕರಾಗಿರುವ ಪಟೇಲ್‌ ಅವರು ನಿನ್ನೆ ಭಾನುವಾರ ನಡೆಸಿದ ಪತ್ರಿಕಾ ಗೋಷ್ಠಿಯಲ್ಲಿ ಬಿಜೆಪಿ ಸೇರಲು ತನಗೆ ಅಮಿಷ ಒಡ್ಡಿ ಕೊಡಲಾಗಿದ್ದ 10 ಲಕ್ಷ ರೂ. ಕರೆನ್ಸಿ ನೋಟುಗಳನ್ನು ಪತ್ರಕರ್ತರ ಮುಂದೆ ಪ್ರದರ್ಶಿಸಿದರು.

ನರೇಂದ್ರ ಪಟೇಲ್‌ ಅವರು ಬಿಜೆಪಿ ಸೇರಲಿದ್ದಾರೆ ಎಂದು ಈ ಮೊದಲು ವರದಿಯಾಗಿತ್ತು. ಆದರೆ ಭಾನುವಾರ ಅವರು ತಮ್ಮ ರಾಗ ಬದಲಾಯಿಸಿ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿ ಬಿಜೆಪಿ ಕುದುರೆ ವ್ಯಾಪಾರದ ಆರೋಪ ಮಾಡಿದರು. 

ನರೇಂದ್ರ ಪಟೇಲ್‌ ಅವರು ಕಳೆದ ತಿಂಗಳಲ್ಲಿ ಹಾರ್ದಿಕ್‌ ಪಟೇಲ್‌ ಮತ್ತು ಅವರ ಮೂವರು ಬೆಂಬಲಿಗರ ವಿರುದ್ಧ ಉತ್ತರ ಗುಜರಾತ್‌ನ ಪಟಾನ್‌ನಲ್ಲಿ ಎಫ್ಐಆರ್‌ ದಾಖಲಿಸಿದ್ದರು. ಆದರೆ ಅನಂತರ ಅದನ್ನು ಹಿಂಪಡೆದುಕೊಂಡಿದ್ದರು.

“ಕಳೆದ ಶನಿವಾರ ಬಿಜೆಪಿ ಸೇರಿಕೊಂಡಿದ್ದ ಪತಿದಾರ್‌ ನಾಯಕ ವರುಣ್‌ ಪಟೇಲ್‌ ನನ್ನನ್ನು ಗುಜರಾತ್‌ ಬಿಜೆಪಿ ಅಧ್ಯಕ್ಷ  ಜಿತೂಭಾಯಿ ವಘಾನಿ ಮತ್ತು ಇತರ ನಾಯಕರನ್ನು ಭೇಟಿ ಮಾಡಿಸಿದ್ದರು. ಅವರು ಮೊದಲು ನನಗೆ 10 ಲಕ್ಷ ರೂ. ಕೊಟ್ಟು ಉಳಿದ 90 ಲಕ್ಷ ರೂ.ಗಳನ್ನು ನಾನು ಬಿಜೆಪಿಗೆ ಸೇರಿದ ಬಳಿಕ ಕೊಡುವುದಾಗಿ ಆಮಿಷ ಒಡ್ಡಿದರು’ ಎಂದು ನರೇಂದ್ರ ಪಟೇಲ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

“ಬಿಜೆಪಿ ನಾಯಕರು ನನಗೆ ಪಕ್ಷವನ್ನು ಸೇರಲು 1 ಕೋಟಿ ರೂ. ಕೊಡುವ ಆಮಿಷ ಒಡ್ಡಿದರು. ಆದರೆ ನಾನು ಇಡಿಯ ರಿಸರ್ವ್‌ ಬ್ಯಾಂಕನ್ನು ನನಗೆ ಕೊಟ್ಟರೂ ನನ್ನನ್ನು ನೀವು ಖರೀದಿಸಲಾರಿರಿ; ಪತಿದಾರ್‌ ಹೋರಾಟದಲ್ಲಿ ನಾನು ಮಡಿದರೂ ಕೂಡ ನಾನು ಬಿಜೆಪಿ ಸೇರುವುದಿಲ್ಲ  ಎಂದು ಜಿತೂಭಾಯಿ ವಘಾನಿ ಮತ್ತು ಇತರ ನಾಯಕರಿಗೆ ನಾನು ನೇರವಾಗಿ ಹೇಳಿದೆ’ ಎಂದು ಪಟೇಲ್‌ ತಿಳಿಸಿದರು.  

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.