Watch: 46 ವರ್ಷಗಳ ಬಳಿಕ 1000 ಮಿ.ಮೀಟರ್ ದಾಖಲೆ ಮಳೆ; ನವದೆಹಲಿ ವಿಮಾನ ನಿಲ್ದಾಣ ಜಲಾವೃತ
1975ರ ಬಳಿಕ ಇದೇ ಮೊದಲ ಬಾರಿ ರಾಷ್ಟ್ರರಾಜಧಾನಿಯಲ್ಲಿ 1,000 ಮಿಲಿ ಮೀಟರ್ ಮಳೆಯಾಗಿರುವುದಾಗಿ ವರದಿ ತಿಳಿಸಿದೆ.
Team Udayavani, Sep 11, 2021, 12:50 PM IST
ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ನವದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ನೀರು ತುಂಬಿಕೊಂಡಿರುವ ಘಟನೆ ಶನಿವಾರ (ಸೆಪ್ಟೆಂಬರ್ 11) ನಡೆದಿದೆ. ಹವಾಮಾನ ಇಲಾಖೆ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ಘೋಷಿಸಿತ್ತು.
ಇದನ್ನೂ ಓದಿ:ಕಾರ್ಖಾನೆಯ ಜೊತೆ ಮುರಿದು ಬಿದ್ದ ಸಂಧಾನ ಮಾತುಕತೆ : ಓಟಿ ಸ್ಥಗಿತಗೊಳಿಸಲು ಕಾರ್ಮಿಕರ ನಿರ್ಧಾರ
ಶುಕ್ರವಾರ ನವದೆಹಲಿಯಲ್ಲಿ ದಾಖಲೆ ಪ್ರಮಾಣದ 1,000 ಮಿಲಿ ಮೀಟರ್ ಮಳೆಯಾಗಿತ್ತು. ಇದು ಕಳೆದ 46 ವರ್ಷಗಳ ಬಳಿಕ ಸುರಿದ ದಾಖಲೆಯ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಎನ್ ಐ ನ್ಯೂಸ್ ಏಜೆನ್ಸಿ ಶೇರ್ ಮಾಡಿರುವ ವಿಡಿಯೋದಲ್ಲಿ, ದೆಹಲಿ ವಿಮಾನ ನಿಲ್ದಾಣದಲ್ಲಿರುವ ವಿಮಾನಗಳು ಭಾಗಶಃ ನೀರಿನಿಂದ ಆವೃತ್ತವಾಗಿದೆ. ಹವಾಮಾನ ವೈಪರೀತ್ಯದಿಂದ ವಿಮಾನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಭಾರೀ ಮಳೆಯ ಪರಿಣಾಮ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ಇಂಡಿಗ, ಸ್ಪೈಸ್ ಜೆಟ್ ವಿಮಾನ ಸಂಸ್ಥೆ ಪ್ರಕಟಣೆಯಲ್ಲಿ ವಿವರಿಸಿದೆ.
#WATCH | Parts of Delhi Airport waterlogged following heavy rainfall in the national capital; visuals from Indira Gandhi International Airport (Terminal 3) pic.twitter.com/DIfUn8tMei
— ANI (@ANI) September 11, 2021
ಆಕಸ್ಮಿಕವಾಗಿ ಸುರಿದ ಭಾರೀ ಮಳೆಯ ಪರಿಣಾಮ ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಲಾವೃತಗೊಂಡಿರುವುದಾಗಿ ತಿಳಿಸಿದೆ. ನಮ್ಮ ತಂಡ ಶೀಘ್ರವೇ ಕಾರ್ಯಪ್ರವೃತ್ತವಾಗಿದ್ದು, ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಟ್ವೀಟ್ ಮೂಲಕ ತಿಳಿಸಿದ್ದಾರೆ.
ದೆಹಲಿಯಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿತ್ತು. ನಿರಂತರವಾಗಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮ ದೆಹಲಿಯ ಹಲವು ಪ್ರದೇಶಗಳು ಜಲಾವೃತಗೊಂಡಿದೆ. 1975ರ ಬಳಿಕ ಇದೇ ಮೊದಲ ಬಾರಿ ರಾಷ್ಟ್ರರಾಜಧಾನಿಯಲ್ಲಿ 1,000 ಮಿಲಿ ಮೀಟರ್ ಮಳೆಯಾಗಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ
Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ
MUST WATCH
ಹೊಸ ಸೇರ್ಪಡೆ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್
Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್