Watch: ಪ್ರವಾಹದಲ್ಲಿ ಸಿಲುಕಿದ್ದ ಮೂವರನ್ನು ಏರ್ ಲಿಫ್ಟ್ ಮಾಡಿದ IAF: ವಿಡಿಯೋ ವೈರಲ್
Team Udayavani, Aug 31, 2020, 11:30 AM IST
ಮಧ್ಯಪ್ರದೇಶ: ಪ್ರವಾಹ ಪರಿಸ್ಥಿತಿಯಿಂದ ಇಲ್ಲಿನ ಹಲವು ಪ್ರದೇಶಗಳು ಮುಳುಗಡೆಯಾಗಿದ್ದು, ಭಾರತೀಯ ವಾಯು ಪಡೆ(IAF) ನಡುಗಡ್ಡೆಯಲ್ಲಿ ಸಿಲುಕಿದ್ದ ಮೂವರನ್ನು ಏರ್ ಲಿಫ್ಟ್ ಮಾಡಿ ರಕ್ಷಿಸಿದೆ. ಇದೀಗ ಈ ವಿಡಿಯೋ ವೈರಲ್ ಆಗಿದೆ.
ಇಂದು IAF ಪಡೆ, ಹೆಲಿಕಾಫ್ಟರ್ ಮೂಲಕ ಓರ್ವ ವೃದ್ಧ ಸೇರಿದಂತೆ ಮೂವರನ್ನು ಏರ್ ಲಿಫ್ಟ್ ಮಾಡಿದೆ. ಬಾಲಘಾಟ್ನ ಮೊವಾಡ್ ಗ್ರಾಮದಲ್ಲಿ ವೈಂಗಂಗಾ ನದಿಯು ಉಕ್ಕಿ ಹರಿಯುತ್ತಿದ್ದು, ದಡದಲ್ಲಿ ವಾಸಿಸುತ್ತಿದ್ದ ಹಲವರ ಮನೆಗೆಳು ಮುಳುಗಡೆಯಾಗಿದೆ. ಹಲವರನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದ್ದು ಅದಾಗ್ಯೂ ಕೆಲವರು ಸಿಲುಕಿಕೊಂಡಿದ್ದರು. ಹೀಗಾಗಿ ಭಾರತೀಯ ವಾಯುಪಡೆ ರಕ್ಷಣಾ ಕಾರ್ಯಕ್ಕೆ ಮುಂದಾಗಿತ್ತು.
ವೈರಲ್ ವಿಡಿಯೋದಲ್ಲಿ IAF ಸಿಬ್ಬಂದಿ, ಹಗ್ಗದ ಸಹಾಯದಿಂದ ವೃದ್ದ, ಸೇರಿದಂತೆ ಮೂವರನ್ನು ರಕ್ಷಿಸಿದ್ದಾರೆ. ನದಿಗಳು ಉಕ್ಕಿಹರಿಯುತ್ತಿರುವುದರಿಂದ ಮಧ್ಯಪ್ರದೇಶದ ಹೆಚ್ಚಿನ ಭಾಗಗಳು ಮುಳುಗಡೆಯಾಗುತ್ತಿದೆ. ಭಾರತೀಯ ವಾಯುಪಡೆ (ಐಎಎಫ್) ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಲುಕಿರುವ ಗ್ರಾಮಸ್ಥರನ್ನು ರಕ್ಷಣೆ ಮಾಡುತ್ತಿದೆ.
#SavingLives
Today morning, #IAF launched a Mi17V5 helicopter to rescue 02 youth and an elderly man from their inundated houses near Mowad village in Balaghat,Madhya Pradesh situated along the banks of the overflowing Wainganga river.@SpokespersonMoD#IndianAirForce #AirWarriors pic.twitter.com/I7MNoHiXTN— Indian Air Force (@IAF_MCC) August 30, 2020
ಹೀಗಾಗಲೇ ಪ್ರವಾಹದ ಕಾರಣದಿಂದ 8 ಜನರು ಮೃತಪಟ್ಟಿದ್ದು 9,000ಕ್ಕಿಂತ ಹೆಚ್ಚು ಜನರನ್ನೂ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಮಧ್ಯಪ್ರದೇಶದ 12 ಜಿಲ್ಲೆಯ ನೂರಾರು ಹಳ್ಳಿಗಳು ಪ್ರವಾಹದ ಕಾರಣಕ್ಕೆ ನಲುಗಿಹೋಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್