ಸ್ವತ್ಛ ಭಾರತ ಯಶಸ್ಸಿಗೆ ನೀರಿನ ಬರ!
Team Udayavani, May 14, 2017, 11:54 AM IST
ಹೊಸದಿಲ್ಲಿ: ಪ್ರಧಾನಿ ಮೋದಿ ಅವರ ಕನಸಿನ ಸ್ವತ್ಛ ಭಾರತ ಅಭಿಯಾನದ ಯಶಸ್ಸಿಗೆ ನೀರಿನ ಬರ ಅಡ್ಡಿಯಾಗಿದೆ! ಸ್ವತ್ಛ ಭಾರತ ಅಭಿಯಾನದಡಿ ನಿರ್ಮಿಸಿರುವ 10 ಶೌಚಾಲಯಗಳ ಪೈಕಿ 6ರಲ್ಲಿ ನೀರಿಲ್ಲ. ಹೀಗಾಗಿ ಶೇ.60ರಷ್ಟು ಸ್ವತ್ಛ ಭಾರತ ಶೌಚಾಲಯಗಳು ಬಳಕೆಯೇ ಆಗುತ್ತಿಲ್ಲ.
ಈ ಬರದ ಸಂಗತಿ ಬಯಲಾಗಿರುವುದು ಸ್ವತಃ ಸರಕಾರ ನಡೆಸಿದ ಸಮೀಕ್ಷೆಯಿಂದ. ದೇಶದ ಶೌಚಾಲಯ ಸೌಲಭ್ಯ ಅಭಿಧಿವೃದ್ಧಿಯಾಗುತ್ತಿದೆ ಎನ್ನುವಾಗಲೇ ನೀರಿನ ಬರ ಎದುರಾಗಿದೆ ಎಂದು ರಾಷ್ಟ್ರೀಯ ಮಾದರಿ ಸಮೀಕ್ಷಾ ಕಚೇರಿ (ಎನ್ಎಸ್ಎಸ್ಒ) ನಡೆಸಿದ ಸಮೀಕ್ಷೆಯಿಂದ ತಿಳಿದುಬಂದಿದೆ. 2014ರಲ್ಲಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಎನ್ಡಿಎ ಸರಕಾರ, ಮುಂದಿನ ಚುನಾವಣೆ ವೇಳೆಗೆ ಭಾರತವನ್ನು ಬಯಲು ಶೌಚಮುಕ್ತವಾಗಿಸುವ ಪಣತೊಟ್ಟಿತ್ತು.
ಅದರಂತೆ ಸರಕಾರದ ಸಹಾಯನದಡಿಯಲ್ಲಿ 3.5 ಕೋಟಿ ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಆದರೂ ನೀರಿನ ಬರದಿಂದಾಗಿ ಪ್ರಸ್ತುತ ದೇಶದ ಶೇ.55.4 ಮಂದಿಯ ಶೌಚಕ್ರಿಯೆ ಬಯಲಲ್ಲೇ ನಡೆಯುತ್ತಿದೆ. ಮೊದಲು ಹೊಸದಾಗಿ ನಿರ್ಮಿಸಿದ ಶೌಚಾಲಯ ಬಳಸಲು ಸಾರ್ವಜನಿಕರು ಹಿಂದೇಟು ಹಾಕಿದ್ದರು. ಜಾಹೀರಾತು ಸೇರಿ ಹಲವು ಜಾಗೃತಿ ಕಾರ್ಯಕ್ರಮಗಳ ಮೂಲಕ ಈ ಸಮಸ್ಯೆ ತಕ್ಕಮಟ್ಟಿಗೆ ಪರಿಹಾರವಾಗುತ್ತಿರುವ ನಡುವೆಯೇ ನೀರಿನ ಬರ ಕಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’