Wayanad: ರಾಹುಲ್ ಗೆ ಹಿನ್ನಡೆ; ಬಿಜೆಪಿ ಸೇರ್ಪಡೆಯಾದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ
Team Udayavani, Apr 21, 2024, 11:17 AM IST
ತಿರುವನಂತಪುರಂ: ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಕೇರಳದ ವಯನಾಡ್ ನ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಿಜೆಪಿಗೆ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದ್ದಾರೆ.
ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿ (ಡಿಸಿಸಿ) ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಇದು ಕಾಂಗ್ರೆಸ್ ಗೆ ದೊಡ್ಡ ಹಿನ್ನಡೆಯಾಗಿದೆ.
ಕಲ್ಪೆಟ್ಟಾದಲ್ಲಿರುವ ಚುನಾವಣಾ ಸಮಿತಿ ಕಚೇರಿಗೆ ತೆರಳಿ ಮಾತನಾಡಿದ ಸುಧಾಕರನ್, “ಲೋಕಸಭೆ ಚುನಾವಣೆಯಲ್ಲಿ ವಯನಾಡಿನಿಂದ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಯಾರ ಕೈಗೂ ಸಿಗುವುದಿಲ್ಲ, ಸಾಮಾನ್ಯ ಜನರಿಗೆ ಸಿಗುವುದಿಲ್ಲ” ಎಂದು ಆರೋಪಿಸಿದರು.
“ನಾನು ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಅಭಿವೃದ್ಧಿಯ ರಾಜಕಾರಣದ ಅಭಿಮಾನಿ ಆಗಿರುವುದರಿಂದ ನಾನು ಬಿಜೆಪಿಗೆ ಸೇರುತ್ತಿದ್ದೇನೆ. ಬಿಜೆಪಿ ಇಂದಿನ ಸಮಾಜದಲ್ಲಿ ಹೆಚ್ಚು ಪ್ರಸ್ತುತವಾಗಿರುವ ಪಕ್ಷವಾಗಿದೆ, ಪ್ರಧಾನಿ ಮೋದಿಯವರ ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಳ್ಳಲು ಕೆ. ಸುರೇಂದ್ರನ್ ಗೆಲ್ಲಬೇಕು. ವಯನಾಡ್ನಿಂದ ಸಂಸದರಾಗಿ ಆಯ್ಕೆಯಾಗ ಬೇಕು, ಆ ನಿಟ್ಟಿನಲ್ಲಿ ನಾನು ಶ್ರಮಿಸುತ್ತೇನೆ” ಎಂದು ಸುಧಾಕರನ್ ಹೇಳಿದ್ದಾರೆ.
ನಿವೃತ್ತ ಫಾರೆಸ್ಟ್ ರೇಂಜ್ ಆಫೀಸರ್ ಶಶಿ ಕುಮಾರ್ ಮತ್ತು ಸಿವಿಲ್ ಇಂಜಿನಿಯರ್ ಪ್ರಜೀಶ್ ಅವರು ಕೂಡಾ ಇದೇ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್ ಗೆ ಬಿಜೆಪಿ ತಿರುಗೇಟು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕಾಂಗ್ರೆಸ್ನಿಂದ ಮತ ಬ್ಯಾಂಕ್ ರಾಜಕಾರಣ; ನೇಹಾ ಹತ್ಯೆ ಲವ್ ಜೆಹಾದ್:ಅಮಿತ್ ಶಾ ಆರೋಪ
ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!
MUST WATCH
ಹೊಸ ಸೇರ್ಪಡೆ
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
Dharwad; ವಾರಂಟಿ ಇಲ್ಲದ ಕಾಂಗ್ರೆಸ್ ನ ಗ್ಯಾರಂಟಿ ನಂಬಬೇಡಿ: ಅಣ್ಣಾಮಲೈ
Shobha Karandlaje; 60 ವರ್ಷ ದೇಶವನ್ನಾಳಿದ ಕಾಂಗ್ರೆಸ್ಗೆ ಪ್ರಧಾನಿ ಅಭ್ಯರ್ಥಿ ಸಿಗ್ತಿಲ್ಲ
Honnavar; ಖಾಸಗಿ ಬಸ್ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ
Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು