ಎರೆಹುಳಗಳ ಸಾವಿಂದ ಆತಂಕ
Team Udayavani, Sep 9, 2018, 6:00 AM IST
ತಿರುವನಂತಪುರಂ: ಪ್ರವಾಹದಿಂದಾಗಿ ಕೇರಳ ಭೌಗೋಳಿಕ ರಚನೆಯೇ ಬದಲಾಗಿದ್ದು, ಮಣ್ಣಿನ ಮೇಲ್ಪದರ ನೀರಿನಲ್ಲಿ ಕೊಚ್ಚಿಹೋಗಿದೆ. ಇದರ ಪರಿಣಾಮವಾಗಿ ವಯನಾಡ್ನಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಪ್ರಮಾಣದಲ್ಲಿ ಎರೆಹುಳಗಳು ಸತ್ತು ಬೀಳುತ್ತಿವೆ. ಇದಕ್ಕೆ ಭೂಮಿಯಲ್ಲಿ ಉಂಟಾಗಿರುವ ವಿಪರೀತ ಉಷ್ಣತೆಯೇ ಕಾರಣ ಎಂದು ವಯನಾಡ್ಗೆ ಭೇಟಿ ನೀಡಿದ ಪರಿಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ಭೂಮಿಯ ಮೇಲ್ಭಾಗದ ಮಣ್ಣು ಪ್ರವಾಹದಲ್ಲಿ ನೀರಿನೊಂದಿಗೆ ಕೊಚ್ಚಿ ಹೋಗಿದೆ. ಈಗ ಇರುವ ಮಣ್ಣು ಎರೆಹುಳಗಳಿಗೆ ಪೂರಕವಾಗಿಲ್ಲ. ಇವು ಗಡುಸಾಗಿವೆ. ಹೀಗಾಗಿ ನೀರು ಮತ್ತು ತೇವಾಂಶವನ್ನು ಸುಲಭವಾಗಿ ಹೀರಿಕೊಳ್ಳುತ್ತಿಲ್ಲ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಎರೆಹುಳಗಳು ಮಣ್ಣಿನ ಆರೋಗ್ಯ ಕಾಪಾಡುವ ಪ್ರಮುಖ ಜೀವಿಗಳಾಗಿದ್ದು, ಇವು ಸತ್ತು ಹೋದರೆ ಮಣ್ಣಿನಲ್ಲಿ ಬೆಳೆ ಬೆಳೆಯಲು ಸಾಧ್ಯವಾಗುವುದಿಲ್ಲ. ಈ ಪರಿಸ್ಥಿತಿ ಮುಂದುವರಿದರೆ ಮಣ್ಣಿನಲ್ಲಿರುವ ಇತರ ಸೂಕ್ಷ್ಮ ಜೀವಿಗಳು ಕೂಡ ಸಾಯುತ್ತವೆ. ಇದರಿಂದಾಗಿ ಭತ್ತ ಮತ್ತು ಕಾಳುಮೆಣಸಿ ನಂತಹ ಬೆಳೆಗಳ ಮೇಲೆ ಪರಿಣಾಮ ಉಂಟಾಗುವ ಸಾಧ್ಯತೆಯಿದೆ ಎಂದು ಪರಿಸರ ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ. ಎರೆಹುಳಗಳು ಸಾವನ್ನಪ್ಪುತ್ತಿರುವುದರ ಬಗ್ಗೆ ಸಮಗ್ರ ಅಧ್ಯಯನ ಅಗತ್ಯವಿದ್ದು, ಇದರ ಕಾರಣ ಮತ್ತು ಪರಿಣಾಮಗಳನ್ನು ಪರಿಶೀಲಿಸಿ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಬೇಕಿದೆ.
ವ್ಯಕ್ತಿ ಬಂಧನ: ಪ್ರವಾಹದ ಬಳಿಕ ಕಂಡುಬಂದಿರುವ ಇಲಿ ಜ್ವರದಂಥ ಸಾಂಕ್ರಾಮಿಕ ರೋಗಗಳಿಗೆ ಸರ್ಕಾರ ನೀಡುತ್ತಿರುವ ಔಷಧಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಬ್ಬಿಸಿದ ವ್ಯಕ್ತಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ. ಆರೋಗ್ಯ ಸಚಿವೆ ಶೈಲಜಾ ಅವರ ನಿರ್ದೇಶನದ ಮೇರೆಗೆ ತನಿಖೆ ನಡೆಸಿದ ಪೊಲೀಸರು, ಸುಳ್ಳು ಸುದ್ದಿಗಳನ್ನು ಹಬ್ಬಿಸುವ ಮೂಲಕ ಜನರಲ್ಲಿ ಆತಂಕ ಮೂಡಿಸುತ್ತಿದ್ದ ಆರೋಪದಲ್ಲಿ ಜಾಕೋಬ್ ವಡಕ್ಕಂಚೇರಿ ಎಂಬವರನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ