ಮರ್ಕಜ್ ಕಾರ್ಯಕ್ರಮಕ್ಕೆ ಬೆಲೆ ತೆರುತ್ತಿದ್ದೇವೆ ; ಕೇಜ್ರಿವಾಲ್ ಆಕ್ರೋಶ
Team Udayavani, Apr 20, 2020, 7:57 AM IST
ದೆಹಲಿಯಲ್ಲಿ ಕೋವಿಡ್ 19 ವೈರಸ್ ಸೋಂಕು ವ್ಯಾಪಕವಾಗಿದೆ. ನಿಜಾಮುದ್ದೀನ್ನಲ್ಲಿ ತಬ್ಲೀಘಿ ಜಮಾತ್ನ ಕಾರ್ಯಕ್ರಮದ ಸೋಂಕು ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ. ಹೀಗಾಗಿ ಏ.20ರ ನಂತರ ಕೆಲವೊಂದು ಪ್ರದೇಶಗಳಲ್ಲಿ ವಿನಾಯಿತಿ ನೀಡುವ ಪ್ರಸ್ತಾಪವೇ ಇಲ್ಲವೆಂದಿದ್ದಾರೆ.
‘ಹೊಸದಿಲ್ಲಿ ಕಳೆದೊಂದು ವಾರದಿಂದ ಕೋವಿಡ್ 19 ವೈರಸ್ ಪ್ರಕರಣಗಳ ಬಗ್ಗೆ ಸೂಕ್ಷ್ಮ ಅಧ್ಯಯನ ನಡೆಸಿತ್ತು. ಆದರೆ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ದೇಶದ ವೈರಸ್ ಪ್ರಕರಣದಲ್ಲಿ ಶೇ.12ರಷ್ಟು ದಿಲ್ಲಿಯಲ್ಲೇ ಕಂಡು ಬಂದಿದೆ.
ಈಗ 77 ಸೂಕ್ಷ್ಮ ವಲಯ ಸೀಲ್ಡೌನ್ ಮಾಡಲಾಗಿದೆ. ಎಲ್ಲ 11 ಜಿಲ್ಲೆಗಳಲ್ಲೂ ಕೋವಿಡ್ 19 ವೈರಸ್ ಸೋಂಕು ಹರಡಿದೆ. ಈ ಬಗ್ಗೆ ತಜ್ಞರೊಂದಿಗೆ ಚರ್ಚೆಯನ್ನೂ ಮಾಡಿದ್ದೇವೆ. ಹೆಚ್ಚಿನ ಪ್ರಕರಣಗಳು ಕಂಡು ಬರುತ್ತಿರುವುದರಿಂದ ಆತಂಕವಿದೆ’ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.
ಕಾರ್ಯಪಡೆ ರಚನೆ
ಕೋವಿಡ್ 19 ವೈರಸ್ ಗೆ ಲಸಿಕೆ ಅಭಿವೃದ್ಧಿ, ಔಷಧಗಳ ಪ್ರಯೋಗಕ್ಕೆ ಸಂಬಂಧಿಸಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಲು ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಲಾಗಿದೆ. ನೀತಿ ಆಯೋಗದ ಸದಸ್ಯರು ಮತ್ತು ಹೊಸದಿಲ್ಲಿದ ಪ್ರಧಾನ ವೈಜ್ಞಾನಿಕ ಸಲಹೆಗಾರರು ಈ ಕಾರ್ಯಪಡೆಯಲ್ಲಿ ಇರಲಿದ್ದಾರೆ.
ಜತೆಗೆ, ಆಯುಷ್, ಐಸಿಎಂಆರ್, ವಿಜ್ಞಾನ ಮತ್ತು ತಂತ್ರಜ್ಞಾನ, ಬಯೋಟೆಕ್ನಾಲಜಿ ಇಲಾಖೆ, ಸಿಎಸ್ಐಆರ್, ಡಿಆರ್ಡಿಒ, ಡಿಆರ್ಡಿಒ, ಆರೋಗ್ಯ ಸೇವೆಗಳ ಮಹಾನಿರ್ದೇಶಕರೂ ಇದರಲ್ಲಿರಲಿದ್ದಾರೆ ಎಂದೂ ಅಗರ್ವಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ