ನಾವೂ ಹೆದರಲ್ಲ, ಮಧ್ಯಂತರ ಚುನಾವಣೆಗೆ ರೆಡಿ; ಶಿವಸೇನೆಗೆ ಫಡ್ನವೀಸ್
Team Udayavani, Jun 15, 2017, 10:35 AM IST
ಮುಂಬೈ:ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿರುವ ಮಹಾರಾಷ್ಟ್ರ ಸರ್ಕಾರ ಅದನ್ನು ಒಂದು ವೇಳೆ ಜುಲೈ ಒಳಗೆ ಪೂರ್ಣ ಪ್ರಮಾಣದಲ್ಲಿ ಜಾರಿ ಮಾಡದೆ ಹೋದರೆ ನಾವು ಕೂಡಾ ದಿಟ್ಟ ಹೆಜ್ಜೆ ಇಡಬೇಕಾಗುತ್ತದೆ ಎಂದು ಶಿವಸೇನೆ ಎಚ್ಚರಿಕೆ ನೀಡಿದ ಬೆನ್ನಲ್ಲೇ , ತಮ್ಮ ಪಕ್ಷ(ಬಿಜೆಪಿ) ಮಧ್ಯಂತರ ಚುನಾವಣೆಗೆ ಸಿದ್ಧತೆ ನಡೆಸುತ್ತಿರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ತಿರುಗೇಟು ನೀಡಿದ್ದಾರೆ.
ಸಾಲ ಮನ್ನಾ ಮಾಡಬೇಕೆಂದು ಪಟ್ಟು ಹಿಡಿದು ಮಹಾರಾಷ್ಟ್ರ ರೈತರು ನಡೆಸಿದ್ದ ಪ್ರತಿಭಟನೆಯ ಜಟಾಪಟಿಯ ನಡುವೆ ಮಹಾರಾಷ್ಟ್ರದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ವದಂತಿ ಹಬ್ಬಿರುವ ವರದಿ ಹಿನ್ನೆಲೆಯಲ್ಲಿ ಫಡ್ನವೀಸ್ ಈ ಹೇಳಿಕೆ ನೀಡಿದ್ದಾರೆ.
ರೈತರ ಪ್ರತಿಭಟನೆಗೆ ಮಣಿದಿದ್ದ ಸರ್ಕಾರ ದೀರ್ಘಕಾಲದ ಸಾಲ ಮನ್ನಾ ಬೇಡಿಕೆಯನ್ನು ಈಡೇರಿಸುವುದಾಗಿ ಸಿಎಂ ಫಡ್ನವೀಸ್ ಅವರು ಭಾನುವಾರ ಘೋಷಿಸಿದ್ದರು.
ರೈತರ ಪ್ರತಿಭಟನೆ ವೇಳೆ ಕೆಲವು ಜನರು(ಶಿವಸೇನೆ) ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆಯುವ ಮೂಲಕ ಅಧಿಕಾರದ ಗದ್ದುಗೆಯಿಂದ ಕೆಳಗಿಳಿಸುವುದಾಗಿ ಹೇಳುತ್ತಿದ್ದರು. ಅದಕ್ಕೆ ನಾವೂ ಕೂಡಾ ಮಧ್ಯಂತರ ಚುನಾವಣೆಗೆ ಸಿದ್ಧ ಎಂಬುದಾಗಿ ಹೇಳಿರುವುದಾಗಿ ಫಡ್ನವೀಸ್ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬೆದರಿಕೆ ಕುರಿತು ಪರೋಕ್ಷವಾಗಿ ಬಿಸಿ ಮುಟ್ಟಿಸಿದ್ದಾರೆ.
ಒಂದು ವೇಳೆ ಯಾರಾದರೂ ಮಧ್ಯಂತರ ಚುನಾವಣೆಗೆ ಹೋಗಲೇಬೇಕೆಂದು ಪ್ರಚೋದಿಸಿದರೆ, ನಾವು ಅದನ್ನು ಎದುರಿಸುವ ವಿಶ್ವಾಸದಲ್ಲಿದ್ದೇವೆ, ಮಹಾರಾಷ್ಟ್ರದಲ್ಲಿ ನಾವು ಅಧಿಕಾರದ ಕುರ್ಚಿ ಹಿಡಿಯಲು ಶಕ್ತವಾಗಿದ್ದೇವೆ ಎಂದು ಯಾವುದೇ ಪಕ್ಷದ ಹೆಸರನ್ನು ಉಲ್ಲೇಖಿಸಿದೆ ಸುದ್ದಿಗಾರರ ಜೊತೆ ಮಾತನಾಡುತ್ತ ಪರೋಕ್ಷ ಸಂದೇಶ ರವಾನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ