ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಎಂದು ನಾವು ಘೋಷಿಸಿಲ್ಲ: ಚಿದಂಬರಂ
Team Udayavani, Oct 23, 2018, 6:00 AM IST
ಚೆನ್ನೈ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಪ್ರಧಾನಿ ಅಭ್ಯರ್ಥಿ ಎಂದು ಕಾಂಗ್ರೆಸ್ ಇನ್ನೂ ಅಧಿಕೃತವಾಗಿ ಘೋಷಿಸಿಲ್ಲ. ನಮ್ಮ ಆದ್ಯತೆ ಏನಿದ್ದರೂ ಬಿಜೆಪಿಯನ್ನು ಸೋಲಿಸುವುದು ಎಂದು ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಹೇಳಿದ್ದಾರೆ. “ನ್ಯೂಸ್ 18 ತಮಿಳು’ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನ ದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ರಾಹುಲ್ ಗಾಂಧಿ ಯವರನ್ನು ಪ್ರಧಾನಿ ಹುದ್ದೆಗೆ ಏರಿಸಬೇಕು ಎಂಬ ಬಗ್ಗೆ ನಾವು ಪ್ರತಿಪಾದಿಸಿಲ್ಲ. ನಮ್ಮ ಪಕ್ಷದವರೇ ಈ ಬಗ್ಗೆ ಮಾತನಾಡಿದ್ದಾಗ ವರಿಷ್ಠರು ಆ ರೀತಿ ಮಾತನಾಡದಂತೆ ಸೂಚಿಸಿದ್ದಾರೆ’ ಎಂದು ಹೇಳಿದ್ದಾರೆ.
ಪ್ರಬಲವಾಗಿರುವ ಮೈತ್ರಿಕೂಟ ರಚಿಸುವುದೇ ಕಾಂಗ್ರೆಸ್ನ ಆದ್ಯತೆ. ಪ್ರಧಾನಿ ಹುದ್ದೆಗೆ ಯಾರು ಎಂಬ ಬಗ್ಗೆ ಚುನಾವಣೆಯ ಬಳಿಕ ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ ಚಿದಂಬರಂ. ಎರಡು ದಶಕಗಳ ಅವಧಿಯಲ್ಲಿ ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ಪಕ್ಷಗಳು ಹೊಂದಿರುವ ಮತ ಬ್ಯಾಂಕ್ಗೆ ಸೆಡ್ಡು ಹೊಡೆದಿವೆ. ಹೀಗಾ ಗಿಯೇ ಕಾಂಗ್ರೆಸ್ ಮತ್ತು ಬಿಜೆಪಿ ಹೊಂದಿರುವ ಮತ ಪ್ರಮಾಣ ಶೇ.50ಕ್ಕಿಂತ ಕಡಿಮೆಯಾಗಿದೆ ಎಂದು ಹೇಳಿದ್ದಾರೆ.
16 ಜೆಡಿಯುಗೆ; 17 ಬಿಜೆಪಿಗೆ:
ಪಾಟ್ನಾ: ಬಿಹಾರದ 42 ಲೋಕಸಭಾ ಕ್ಷೇತ್ರಗಳ ಸ್ಥಾನ ಹಂಚಿಕೆ ಬಿಜೆಪಿ-ಜೆಡಿಯು ನಡುವೆ ಕೊನೆಗೂ ಮುಕ್ತಾಯವಾಗಿದೆ ಎಂದು ಹೇಳಲಾಗಿದೆ. ಮೂಲಗಳ ಪ್ರಕಾರ 16 ಜೆಡಿಯುಗೆ, 17 ಬಿಜೆಪಿಗೆ, 5 ಎಲ್ಜೆಪಿಗೆ, 2 ಸ್ಥಾನ ಸಚಿವ ಉಪೇಂದ್ರ ಖುಶ್ವಾಹರಿಗೆ ನೀಡಲು ನಿರ್ಧರಿಸಲಾಗಿದೆ.
ಪ್ರಿಯಾಂಕಾ ಪೋಸ್ಟರ್: ರಾಯ್ ಬರೇಲಿಯಲ್ಲಿ “ಪ್ರಿಯಾಂಕಾ ವಾದ್ರಾ ಕಾಣೆಯಾಗಿದ್ದಾರೆ’ ಎಂಬ ಪೋಸ್ಟರ್ ಗಳು ಸೋಮವಾರ ಕಾಣಿಸಿ ಕೊಂಡಿದೆ.
ಧೋನಿ, ಗೌತಮ್ಗೆ ಬಿಜೆಪಿ ಟಿಕೆಟ್?
2019ರ ಲೋಕಸಭೆ ಚುನಾವಣೆಯಲ್ಲಿ ಕ್ರಿಕೆಟಿಗರಾದ ಎಂ.ಎಸ್.ಧೋನಿ ಮತ್ತು ಗೌತಮ್ ಗಂಭೀರ್ ಬಿಜೆಪಿ ಟಿಕೆಟ್ನಲ್ಲಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗಳು ಹರಿದಾಡತೊಡಗಿವೆ. ಜಾರ್ಖಂಡ್ನಿಂದ ಕಣಕ್ಕಿಳಿಯುವಂತೆ ಧೋನಿ ಜತೆ ಬಿಜೆಪಿ ಮಾತುಕತೆ ನಡೆಸುತ್ತಿದೆ ಹಾಗೂ ಗಂಭೀರ್ಗೆ ದೆಹಲಿ ಟಿಕೆಟ್ ನೀಡುವ ಸಾಧ್ಯತೆಯಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್