‘ನಮಗೆ ಜನಾದೇಶವಿಲ್ಲ ; ನಾವು ಸರಕಾರ ರಚಿಸುವುದಿಲ್ಲ, ಶಿವ ಸೇನೆಗೆ ಆಲ್ ದಿ ಬೆಸ್ಟ್’: ಬಿಜೆಪಿ
Team Udayavani, Nov 10, 2019, 6:47 PM IST
ಮುಂಬಯಿ: ಮಹಾರಾಷ್ಟ್ರದಲ್ಲಿ ಸರಕಾರ ರಚನೆಯ ಕಗ್ಗಂಟು ಬಗೆಹರಿಯುವ ಲಕ್ಷಣ ಸದ್ಯಕ್ಕಂತೂ ಕಾಣಿಸುತ್ತಿಲ್ಲ. ರಾಜ್ಯದ ವಿಧಾನಸಭೆಯ ಅವಧಿ ಎರಡು ದಿನಗಳ ಹಿಂದೆಯೇ ಮುಕ್ತಾಯಗೊಂಡಿದ್ದರೂ, ಇದಕ್ಕೂ ಮೊದಲೇ ಚುನಾವಣಾ ಫಲಿತಾಂಶ ಹೊರಬಿದ್ದಿದ್ದರೂ ಇಲ್ಲಿ ನೂತನ ಸರಕಾರ ಅಸ್ತಿತ್ವಕ್ಕೇ ಬಂದಿಲ್ಲ.
ಈ ನಡುವೆ ರಾಜ್ಯಪಾಲರು ಶನಿವಾರದಂದು ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಅತೀದೊಡ್ಡ ಪಕ್ಷವಾಗಿ ಮೂಡಿಬಂದಿರುವ ಭಾರತೀಯ ಜನತಾ ಪಕ್ಷವನ್ನು ಸರಕಾರ ರಚನೆಗೆ ಆಹ್ವಾನಿಸಿದ್ದಾರೆ.
ರಾಜ್ಯಪಾಲರ ಆಹ್ವಾನಕ್ಕೆ ಉತ್ತರವಾಗಿ ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ, ‘ತನಗೆ ಸರಕಾರ ರಚನೆ ಮಾಡಲು ಅಗತ್ಯವಿರುವಷ್ಟು ಸಂಖ್ಯಾಬಲ ಇಲ್ಲದಿರುವುದರಿಂದ ನಾವು ಸರಕಾರ ರಚಿಸುವುದಿಲ್ಲ’ ಎಂದು ಘೋಷಿಸಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷರಾಗಿರುವ ಚಂದ್ರಕಾಂತ್ ಪಾಟೀಲ್ ಅವರು ಪಕ್ಷದ ಈ ನಿರ್ಧಾರವನ್ನು ಬಹಿರಂಗಪಡಿಸಿದರು. ‘ಮಹಾರಾಷ್ಟ್ರದ ಜನತೆ ಬಿಜೆಪಿ-ಶಿವಸೇನಾ ಮೈತ್ರಿಗೆ ತಮ್ಮ ತೀರ್ಪನ್ನು ನೀಡಿದ್ದಾರೆ. ಆದರೆ ಉದ್ಭವ್ ಠಾಕ್ರೆ ಅವರ ನೇತೃತ್ವದ ಆ ಪಕ್ಷ ಸರಕಾರ ರಚನೆಯಲ್ಲಿ ನಮಗೆ ಬೆಂಬಲ ನೀಡಲು ಸಿದ್ಧರಿಲ್ಲ’ ಎಂದು ಹೇಳಿದ್ದಾರೆ.
‘ನಮ್ಮ ಮೈತ್ರಿಗೆ ಉತ್ತಮ ಜನಾದೇಶ ನೀಡಿದ್ದರು, ನಾವು ಯಾವುದೇ ಸಮಸ್ಯೆ ಇಲ್ಲದೇ ಸರಕಾರವನ್ನು ರಚಿಸಬಹುದಾಗಿತ್ತು’ ಎಂದು ಪಾಟೀಲ್ ಅವರು ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.
‘ಮಹಾಯುತಿಗೆ ಜನಾದೇಶ ಸಿಕ್ಕಿದೆ. ಆದರೆ ಶಿವಸೇನೆ ನಮ್ಮನ್ನು ಬೆಂಬಲಿಸಲು ಒಪ್ಪುತ್ತಿಲ್ಲ. ಹಾಗಾಗಿ ನಾವು ರಾಜ್ಯದಲ್ಲಿ ನೂತನ ಸರಕಾರ ರಚಿಸುತ್ತಿಲ್ಲ ಎಂಬ ವಿಚಾರವನ್ನು ರಾಜ್ಯಪಾಲರಿಗೆ ತಿಳಿಸಿದ್ದೇವೆ’ ಎಂದು ಚಂದ್ರಕಾಂತ್ ಪಾಟೀಲ್ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಶಿವಸೇನೆಯು ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಜೊತೆ ಸೇರಿಕೊಂಡು ಸರಕಾರ ರಚಿಸುವುದಾದರೆ ನಾವು ಅವರಿಗೆ ‘ಆಲ್ ದಿ ಬೆಸ್ಟ್’ ಹೇಳಲು ಇಚ್ಛಿಸುತ್ತೇವೆ ಎಂದು ಚಂದ್ರಕಾಂತ್ ಪಾಟೀಲ್ ಅವರು ಹೇಳಿದರು.
‘ಜನರು ನಮ್ಮ ಮೈತ್ರಿಗೆ ಜನಾದೇಶ ನೀಡಿದ್ದರು, ಆದರೆ ಶಿವಸೇನೆ ಈಗ ಅದನ್ನು ಧಿಕ್ಕರಿಸಿ ಎನ್.ಸಿ.ಪಿ. ಮತ್ತು ಕಾಂಗ್ರೆಸ್ ಜೊತೆ ಸರಕಾರ ರಚಿಸುವುದಾದರೆ ಅವರಿಗೆ ಒಳ್ಳೆಯದಾಗಲಿ ಎಂದಷ್ಟೇ ನಾವು ಹೇಳಬಯಸುತ್ತೇವೆ’ ಎಂದು ಪಾಟೀಲ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ