“ನಮಗೆ ರಾಜಕೀಯ ಮತ್ತು ಜೀವನದಲ್ಲಿ ಗಾಂಧಿ ನಡೆಗಳು ಆದರ್ಶ” : ಪ್ರಧಾನಿ ಮೋದಿ
ದೀನ್ ದಯಾಳ್ ಉಪಾಧ್ಯಾಯರ ಏಕಾತ್ಮ ಮಾನವ ದರ್ಶನ ವಿಚಾರ ನಮಗೆಲ್ಲಾ ಪ್ರೇರಣೆ
Team Udayavani, Feb 11, 2021, 1:35 PM IST
ನವ ದೆಹಲಿ : ನಮ್ಮ ಸರ್ಕಾರ ಮಹಾತ್ಮ ಗಾಂಧಿಯವರ ತತ್ವಾದರ್ಶಗಳನ್ನು ಪಾಲಿಸುತ್ತದೆ. ಅವರು ಕಲಿಸಿದ ಪ್ರೀತಿ ಹಾಗೂ ಸಹಾನುಭೂತಿಯ ಪಾಠಗಳು ನಮಗೆ ಆದರ್ಶ. ನಾವು ಗಾಂಧಿಯವರ 150ನೇ ಜನ್ಮ ದಿನಾಚರಣೆಯನ್ನು ಆಚರಿಸಿದ್ದೇವೆ. ರಾಜಕೀಯ ಮತ್ತು ಜೀವನದಲ್ಲಿ ಅವರ ನಡೆಗಳು ನಮಗೆ ಆದರ್ಶ ಎಂದು ಗಾಂಧಿಯನ್ನು ಮೋದಿ ಕೊಂಡಾಡಿದ್ದಾರೆ.
ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರಿಗೆ ಅರ್ಹವಾದ ಗೌರವವನ್ನು ನೀಡಿದೆ. ನೇತಾಜಿ ಅವರಿಗೆ ಸಂಬಂಧಿಸಿದ ರಹಸ್ಯ ಕಡತಗಳನ್ನು ಪುನಃ ತೆರೆದ ಹೆಗ್ಗಳಿಕೆ ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಕೂಡ ಮೋದಿ ಇದೇ ಸಂದರ್ಭ ನುಡಿದಿದ್ದಾರೆ.
ಓದಿ : “ಯಾವ ದುರುದ್ದೇಶ ನನ್ನಲ್ಲಿರಲಿಲ್ಲ” : ಪೊಲೀಸರ ಪ್ರಶ್ನೆಗೆ ನಟ ದೀಪ್ ಸಿಧು ಪ್ರತಿಕ್ರಿಯೆ
ಭಾರತೀಯ ಜನ ಸಂಘದ ನಾಯಕರಾಗಿದ್ದ ದೀನ ದಯಾಳ್ ಉಪಾಧ್ಯಾಯರ ಪುಣ್ಯ ತಿಥಿ ದಿನಾಚರಣೆಯನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು. ಈ ಸಂದರ್ಭ ದೇಶಕ್ಕೆ ಗುರುತರವಾದ ಸೇವೆ ಸಲ್ಲಿಸಿದ ಮಹಾತ್ಮ ಗಾಂಧಿ, ಸರದಾರ್ ವಲ್ಲಭಭಾಯಿ ಪಟೇಲ್ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಸೇರಿ ಹಲವರನ್ನು ಪ್ರಶಂಸಿದರು.
ಸರದಾರ್ ಪಟೇಲ್ ಅವರಿಗೆ ಗೌರವಾರ್ಪಣೆಯಾಗಿ ವಿಶ್ವದ ಅತ್ಯಂತ ದೊಡ್ಡ ಪ್ರತಿಮೆಯನ್ನು ನಾವು ನಿರ್ಮಿಸಿದ್ದೇವೆ. ಬಿಜೆಪಿ ಬೆಂಬಲವಿದ್ದ ಸರ್ಕಾರ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನು ನೀಡಿ ಗೌರವಿಸಿದೆ ಎಂದು ಮೋದಿ ನುಡಿದರು.
ಓದಿ : ಏಳು ಸ್ಕ್ರೀನ್ ಗಳ ವಿಶಿಷ್ಟ ಲ್ಯಾಪ್ ಟಾಪ್ “Aurora 7” …!
ಇನ್ನು, ರಕ್ಷಣಾ ಕ್ಷೇತ್ರದಲ್ಲಿ ಸ್ವಾವಲಂಬನೆಯನ್ನು ಸಾಧಿಸಲು ನಮ್ಮ ಸರ್ಕಾರ ಕಾರ್ಯ ನಿರ್ವಹಿಸುತ್ತಿದೆ ಎಂದು ಹೇಳಿದರು.
ರಾಷ್ಟ್ರ ಕಂಡ ಸಜ್ಜನ ಸೈದ್ಧಾಂತಿಕ ರಾಜಕಾರಣಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಏಕಾತ್ಮ ಮಾನವ ದರ್ಶನ ವಿಚಾರ ನಮಗೆಲ್ಲಾ ಪ್ರೇರಣೆ. ಸಂಘದ ನಾಯಕರ ಕನಸನ್ನು ನನಸಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮೋದಿ ಹೇಳಿದ್ದಾರೆ.
ಈ ಸಂದರ್ಭ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಪ್ರಮುಖ ಕೇಂದ್ರ ಸಚಿವರು ಉಪಸ್ಥಿತರಿದ್ದರು.
ಓದಿ : ಇನ್ಮುಂದೆ “ಕೂ”ಮಯ : ಮೂಲೆಗೆ ಸರಿಯುತ್ತಾ ಟ್ವೀಟರ್ ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ
MUST WATCH
ಹೊಸ ಸೇರ್ಪಡೆ
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ