ಅಮ್ಮನ ಬಗ್ಗೆ ನಾವು ಹೇಳಿದ್ದೆಲ್ಲಾ ಸುಳ್ಳು


Team Udayavani, Sep 24, 2017, 6:00 AM IST

JAYA.jpg

ಮದುರೈ: “”ತಮಿಳುನಾಡಿನ ಮಾಜಿ ಸಿಎಂ, ದಿವಂಗತ ಜಯಲಲಿತಾ ಆರೋಗ್ಯದ ಬಗ್ಗೆ ಹಿಂದೆ ನಾವು ಹೇಳಿದ್ದೆಲ್ಲಾ ಸುಳ್ಳೇ ಸುಳ್ಳು! ಜಯಾ ಆಸ್ಪತ್ರೆ ಸೇರಿದಾಗಿನಿಂದಲೂ ನಾವೆಲ್ಲರೂ ಚಿನ್ನಮ್ಮ(ಶಶಿಕಲಾ)ರ ಭಯದಿಂದ ಸುಳ್ಳು ಹೇಳುತ್ತಲೇ ಬಂದೆವು. ನಮ್ಮ ಮಾತು ಕೇಳಿದ ಜನ ಅಮ್ಮಾ ಚೇತರಿಸಿಕೊಳ್ಳುತ್ತಿದ್ದಾರೆ ಎಂದೇ ಭಾವಿಸುತ್ತಿದ್ದರು!

ಇದು ಎಐಎಡಿಎಂಕೆ ಮುಖಂಡ ಹಾಗೂ ಸವಿವ ದಿಂಡಿಗಲ್‌ ಸಿ. ಶ್ರೀನಿವಾಸನ್‌ ಅವರ ಸ್ಫೋಟಕ ಹೇಳಿಕೆ. ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾಗಿ ಸೆ.22ಕ್ಕೆ ಸರಿಯಾಗಿ ಒಂದು ವರ್ಷ. ಈ ವೇಳೆ ದಿಂಡಿಗಲ್‌ ಶ್ರೀನಿವಾಸನ್‌ ಅವರೇ ಹೇಳಿದ ಮಾತುಗಳನ್ನು ಅವರ ಮಾತಲ್ಲೇ ಓದಿ…

“ಸತ್ಯ ಏನೆಂದರೆ ಜಯಲಲಿತಾ ಅವರನ್ನು ನೋಡಲು ಯಾರಿಗೂ ಅವಕಾಶವಿರಲಿಲ್ಲ. ನಮ್ಮನ್ನು ಸುತಾರಾಂ ಒಳಗೆ ಬಿಡುತ್ತಲೇ ಇರಲಿಲ್ಲ. ಶಶಿಕಲಾ ಹಾಗೂ ಅವರ ಸಂಬಂಧಿಗಳು ಮಾತ್ರ ಒಳಗೆ ಹೋಗಿ ಬರುತ್ತಿದ್ದರು. “ಅಮ್ಮ ಆರೋಗ್ಯವಾಗಿದ್ದಾರೆ. ನೀವು ಜನರ ಮುಂದೆ ಅದನ್ನೇ ಹೇಳಿ’ ಎಂದು ಹೇಳುತ್ತಿದ್ದರು. ಶಶಿಕಲಾ ಅವರಿಗೆ ಹೆದರಿ ನಾವು ಜನರ ಬಳಿ “ಅಮ್ಮನ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ’ ಎಂದೇ ಹೇಳುತ್ತಿದ್ದೆವು’.

“ಅಮ್ಮ ಅಪೋಲೋ ಆಸ್ಪತ್ರೆಗೆ ದಾಖಲಾದಾಗ ಶಶಿಕಲಾ ಹಾಗೂ ಅವರ ಸಂಬಂಧಿ ಟಿ.ಟಿ.ವಿ. ದಿನಕರನ್‌ ಸಕಲ ಉಸ್ತುವಾರಿ ವಹಿಸಿಕೊಂಡಿದ್ದರು. ಈ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ, ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ, ವಿತ್ತ ಸಚಿವ ಅರುಣ್‌ ಜೇಟ್ಲಿ, ತಮಿಳುನಾಡು ರಾಜ್ಯಪಾಲ ಸಿ.ಎಚ್‌.ವಿದ್ಯಾಸಾಗರ್‌ ರಾವ್‌ ಸೇರಿ ಆಸ್ಪತ್ರೆಗೆ ಭೇಟಿ ನೀಡಿದ ಯಾವುದೇ ಪ್ರಮುಖ ನಾಯಕರು ಐಸಿಯು ಒಳ ಹೋಗಿ ಅಮ್ಮನನ್ನು ನೋಡಿಕೊಂಡು ಬರಲಿಲ್ಲ. ಅವರು ಒಳ ಹೋಗಲು ಶಶಿಕಲಾ ಅವಕಾಶವನ್ನೇ ನೀಡಲಿಲ್ಲ. 

ಬಂದವರೆಲ್ಲರೂ ಆಸ್ಪತ್ರೆಯ ಮುಖ್ಯ ವೈದ್ಯರ ಕಚೇರಿಯಲ್ಲಿ ಕುಳಿತು, ಚಹಾ ಕುಡಿದು ಅವರು ಹೇಳಿದಷ್ಟನ್ನು ಕೇಳಿ ಹೊರಬರುತ್ತಿದ್ದರು. ನಂತರ “ಜಯಲಲಿತಾ ಅವರ ಆರೋಗ್ಯ ಉತ್ತಮವಾಗಿದೆ’ ಎಂದು ಹೇಳಿಕೆ ನೀಡುತ್ತಿದ್ದರು’.
“ಶಶಿಕಲಾ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿದ್ದರು (ಈಗಲೂ ಅಲ್ಲೇ ಇದ್ದಾರೆ). ಇತ್ತ ಅವರ ಸಂಬಂಧಿ ಟಿ.ಟಿ.ವಿ. ದಿನಕರನ್‌ ತಾವು ಅಕ್ರಮವಾಗಿ ಸಂಪಾದಿಸಿದ ಹಣವನ್ನೆಲ್ಲಾ ಬಳಸಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲು ಮುಂದಾಗಿದ್ದರು. ಈ ನಿಟ್ಟಿನಲ್ಲಿ ಆರ್‌ಕೆ ನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆದ್ದು ಸ್ವತಃ ಸಿಎಂ ಆಗುವ ಇರಾದೆ ಹೊಂದಿದ್ದರು. ಈ ಕುತಂತ್ರದ ಬಗ್ಗೆ ನಮ್ಮೆಲ್ಲರಿಗೂ ಗೊತ್ತಿತ್ತು. ಆದರೆ ಆಗಿನ ಸಮಯ, ಸಂದರ್ಭ ನಮ್ಮ ಕೈ-ಬಾಯಿ ಕಟ್ಟಿಹಾಕಿತ್ತು. ಆದರೆ ಈ ವೇಳೆ ನಮ್ಮ ಹಾಗೂ ತಮಿಳುನಾಡು ಜನತೆಯ ಪಾಲಿನ ದೇವರಂತೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರು, ಉಪಚುನಾವಣೆಯನ್ನು ತಡೆಹಿಡಿದರು’.

ಸತ್ಯ ಹೇಳುವ ಸಮಯ ಬಂದಿದೆ:
ಶುಕ್ರವಾರ ರಾತ್ರಿ ಸಾರ್ವಜನಿಕ ಸಭೆಯೊಂದರಲ್ಲಿ ಈ ಮಾಹಿತಿ ಬಹಿರಂಗಪಡಿಸಿರುವ ಅರಣ್ಯ ಸಚಿವ ಶ್ರೀನಿವಾಸನ್‌, “ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ತಮಿಳುನಾಡು ಜನತೆ ಹಾಗೂ ಪಕ್ಷದ ಕಾರ್ಯಕರ್ತರ ಕ್ಷಮೆ ಕೋರಿದ್ದಾರೆ. “ಅಂದು ಪರಿಸ್ಥಿತಿಯ ಕೈಗೊಂಬೆಯಾಗಿದ್ದ ನಮಗೆ ಇಂದು ಸತ್ಯ ಬಹಿರಂಗಪಡಿಸುವ  ಸಮಯ ಬಂದಿದೆ,’ ಎಂದ ಸಚಿವ, “ಐಸಿಯುನಲ್ಲಿದ್ದ ಜಯಲಲಿತಾ ಅವರನ್ನು ನೋಡಲು ನನ್ನನ್ನೂ ಸೇರಿ ಯಾರೊಬ್ಬರಿಗೂ ಅವಕಾಶ ಇರಲಿಲ್ಲ,’ ಎಂದಿದ್ದಾರೆ.

ಅಂದಹಾಗೆ ಜಯಲಲಿತಾ ಅವರು ಆಸ್ಪತ್ರೆಗೆ ದಾಖಲಾದ ಸಂದರ್ಭ, ಅಂದರೆ 2016ರ ಸೆಪ್ಟೆಂಬರ್‌ ಅಂತ್ಯದಲ್ಲೂ ಸಚಿವ ಶ್ರೀನಿವಾಸನ್‌ “ಅಮ್ಮನನ್ನು ನೋಡಲು ಬಿಡುತ್ತಿಲ್ಲ’ ಎಂದು ಹೇಳಿಕೆ ನೀಡಿದ್ದರು. ಆದರೆ ಒಮ್ಮೆ ಮಾತ್ರ ಹಾಗೆ ಹೇಳಿದ್ದ ಅವರು, ಮುಂದೆಂದೂ ಆ ಬಗ್ಗೆ ತುಟಿ ಬಿಚ್ಚಿರಲಿಲ್ಲ. ಶಶಿಕಲಾ ಹಾಗೂ ಅವರ ಸಂಬಂಧಿಗಳು ಹುಟ್ಟಿಸಿದ್ದ ಭಯವೇ ಶ್ರೀನಿವಾಸನ್‌ ಸೇರಿದಂತೆ ಹಲವು ಮುಖಂಡರು ಮೌನವಾಗಿರಲು ಕಾರಣ ಎಂಬುದು ಸ್ವತಃ ಶ್ರೀನಿವಾಸನ್‌ ಹೇಳಿಕೆಯಿಂದ ಈಗ ಸ್ಪಷ್ಟವಾಗಿದೆ.

ಸಿಎಂ ಪಳನಿಸ್ವಾಮಿ ಬಗ್ಗೆಯೂ ಆಕ್ರೋಶ
“ಅಮ್ಮನನ್ನು ಯಾರು ಕೊಂದರು ಎಂದು ತಿಳಿದುಕೊಂಡು ಈಗ ಏನೂ ಆಗಬೇಕಿಲ್ಲ ಎಂದು ತಮಿಳುನಾಡಿನ ಜನ ಈಗಾಗಲೇ ಹೇಳಿದ್ದಾರೆ. ಆದರೆ ಅಮ್ಮನ ಸಾವಿಗೆ ಶಶಿಕಲಾ ಹಾಗೂ ಅವರ ಸಂಬಂಧಿಗಳೇ ಕಾರಣ. ಈ ವಿಷಯ ಗೊತ್ತಿದ್ದರಿಂದಲೇ ನಾವು ಅವರನ್ನು ಪಕ್ಷದಿಂದ ಹೊರಹಾಕುವ ನಿರ್ಧಾರ ಕೈಗೊಂಡೆವು,’ ಎಂದು ಹೇಳಿರುವ ಸಚಿವ, ಸಿಎಂ ಪಳನಿಸ್ವಾಮಿ ಕುರಿತೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಜಯಲಲಿತಾ ಅವರ ವಿಷಯದಲ್ಲಿ ಮುಖ್ಯಮಂತ್ರಿ ಎರಪ್ಪಾಡಿ ಪಳನಿಸ್ವಾಮಿ ಅವರ ವರ್ತನೆ ಸರಿಯಿಲ್ಲ. ಪ್ರಕಣದ ತನಿಖೆಗೆ ನ್ಯಾಯಾಂಗ ಸಮಿತಿ ರಚಿಸುವುದಾಗಿ ಹೇಳಿದ್ದ ಸಿಎಂ, ಈವರೆಗೂ ಆ ಬಗ್ಗೆ ಒಮ್ಮೆ ಕೂಡ ಮಾತನಾಡಿಲ್ಲ,’ ಎಂದು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.